Karnataka Bandh: ಶಾಲಾ ಕಾಲೇಜು ರಜೆ ಕುರಿತು ಅಪ್ಡೇಟ್
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಬಿಸಿ ಕಾವೇರಿದ್ದು, ವಿವಿಧ ಜಿಲ್ಲೆಗಳಲ್ಲಿ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಖಂಡ ಕರ್ನಾಟಕ ಬಂದ್ನ ಭಾಗವಾಗಿ ಇಂದು ರಾಜಧಾನಿ ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ, ರ್ಯಾಲಿಗಳು ನಡೆಯಲಿವೆ. ರಸ್ತೆಗಿಳಿದು ಮಹಾರಾಷ್ಟ್ರ, ಮರಾಠಿಗರು, ಕೇಂದ್ರ ಹಾಗೂ ರಾಜ್ಯ ಸರಕಾರದ ನಡೆ ಖಂಡಿಸಿ ಹೋರಾಟ ಮಾಡಲಾಗುವುದು ಎಂದು ಕನ್ನಡಪರ ಸಂಘಟನೆಗಳು ಘೋಷಿಸಿವೆ.
ಕೆಎಸ್ಆರ್ಟಿಸಿ ನಿರ್ವಾಹಕನ ಮೇಲಿನ ಮರಾಠಿಗರ ದೌರ್ಜನ್ಯ ಖಂಡಿಸಿ, ಕನ್ನಡಿಗರ ಮೇಲೆ ದೌರ್ಜನ್ಯ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಎಂಇಎಸ್ ಮತ್ತು ಇತರೆ ಮರಾಠ ಸಂಘಟನೆಗಳನ್ನು ನಿಷೇಸುವಂತೆ ಆಗ್ರಹಿಸಿ ಕನ್ನಡ ಸಂಘಟನೆಗಳು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಿವೆ. ಇನ್ನೂ ಕರ್ನಾಟಕ ಬಂದ್ಗೆ ಸಾಕಷ್ಟು ಸಂಘಟನೆಗಳು ಬೆಂಬಲ ಸೂಚಿಸಿದ್ದರೆ, ಕೆಲವು ಸಂಘಟನೆಗಳು ನೈತಿಕ ಬೆಂಬಲವನ್ನಷ್ಟೇ ನೀಡಿವೆ. ಹೀಗಾಗಿ ಕನ್ನಡ ಸಂಘಟನೆಗಳಲ್ಲೇ ಬಂದ್ ಬಗ್ಗೆ ಗೊಂದಲವಿರುವಂತೆ ಕಾಣುತ್ತಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಬಿಸಿ ಕಾವೇರಿದ್ದು, ಕೆಲ ಜಿಲ್ಲೆಗಳಲ್ಲಿ ಯಾವುದೇ ಬಂದ್ ಬಿಸಿ ತಟ್ಟಿಲ್ಲ. ಇನ್ನೂ ಚಿಕ್ಕಬಳ್ಳಾಪುರ ಜಿಲ್ಲೆಯ ಜನತೆ ಬಂದ್ಗೆ ಬೆಂಬಲವನ್ನ ಸೂಚಿಸಿಲ್ಲ. ಬಲವಂತವಾಗಿ ಬಂದ್ ಗೆ ಮುಂದಾದ್ರೆ ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಿದ್ದ ಪೊಲೀಸ್ ಇಲಾಖೆ ಜಿಲ್ಲಾಡಳಿತ ತಿಳಿಸಿದೆ. ಕೇವಲ ಹತ್ತು ನಿಮಿಷ ಪಂಜಿನ ಮೆರವಣಿಗೆಗೆ ನಡೆಸಿದ ಕನ್ನಡ ಪರ ಸಂಘಟನೆಗಳು ಜಿಲ್ಲಾಢಳಿತ ಹಾಗು ಪೊಲೀಸ್ ಇಲಾಖೆಗೆ ಎಚ್ಚರಿಕೆಗೆ ಬೆದರಿವೆ ಎನ್ನಲಾಗಿದೆ. ಈಗಾಗಲೇ ಎಂದಿನಂತೆ ವಾಹನ ಸಂಚಾರ ಸಹಜ ಸ್ಥಿತಿಯಲ್ಲಿದೆ.
ಇನ್ನು ಚಿಕ್ಕಬಳ್ಳಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳದೆ ಶಾಲೆ ಮತ್ತು ಕಾಲೇಜಿಗೆ ತೆರಳಿ. ಚಿಕ್ಕಬಳ್ಳಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಜಿಲ್ಲೆಯಲ್ಲಿ ಶಾಲೆ ಮತ್ತು ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಮಾಹಿತಿ ನೀಡಿದರು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications