Karnataka Bandh LIVE: ಕರ್ನಾಟಕ ಬಂದ್; ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ
ಬೆಂಗಳೂರು, ಫೆಬ್ರವರಿ 13: ಮಹಿಷಿ ವರದಿಗೆ ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಗುರುವಾರ ಕರೆ ನೀಡಿದ್ದ ಬಂದ್ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಯಾವುದೇ ಸಂಘಟನೆಯಿಲ್ಲದೇ ತರಾತುರಿಯಲ್ಲಿ ಬಂದ್ಗೆ ಕರೆ ನೀಡಿದ್ದ ಸಂಘಟನೆಗಳಿಗೆ ಮುಖಭಂಗವಾದಂತಾಗಿದೆ. ಬೆಂಗಳೂರಿನಲ್ಲಿ ಗುರುವಾರ ಬೆಳಿಗ್ಗೆ ಸ್ವಲ್ಪ ಮಟ್ಟಿಗೆ ಜನಸಂಚಾರ ವಿರಳ ಎನ್ನುವುದನ್ನು ಬಿಟ್ಟರೇ ಎಲ್ಲವೂ ಎಂದಿನಂತೆ ಜನಜೀವನ ಕಂಡು ಬಂತು. ಬಂದ್ ನಡೆಸುತ್ತೇವೆ ಎಂದು ಹೇಳಿದ್ದ ಆಟೋ, ಓಲಾ ಊಬರ್ ಚಾಲಕರೂ ಕೂಡ ಬಂದ್ ನಡೆಸಲು ಉತ್ಸುಕತೆ ತೋರಿಸಲಿಲ್ಲ. ಸಾರಿಗೆ, ಹೋಟೆಲ್, ಅಂಗಡಿ, ಮುಂಗಟ್ಟುಗಳು, ಆಸ್ಪತ್ರೆ ಎಂದಿನಂತೆ ನಡೆದವು.
ಕೆಲ ಸಂಘಟನೆಗಳು ಸಿಟಿ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಸರೋಜಿನಿ ಮಹಿಷಿ ವರದಿ ಜಾರಿಯಾಗಲೇಬೇಕು ಎಂದು ಒತ್ತಾಯಿಸಿದರು. ಮಂಗಳೂರಿನಲ್ಲಿ ಖಾಸಗಿ ಬಸ್ಗೆ ಕಲ್ಲು ತೂರಾಟ ಪ್ರಕರಣ ಬಿಟ್ಟರೇ, ಯಾವುದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ.
ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಬಂದ್ಗೆ ಬೆಂಬಲ ವ್ಯಕ್ತವಾಗಲಿಲ್ಲ. ಕೇವಲ ಪ್ರತಿಭಟನೆಗಳನ್ನು ನಡೆಸಿ, ಸರೋಜಿನಿ ಮಹಿಷಿ ವರದಿ ಜಾರಿಯಾಗಬೇಕು. ಕನ್ನಡಿಗರಿಗೆ ಉದ್ಯೋಗಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

"ಮಹಿಷಿ ವರದಿ ಜಾರಿ ಬಗ್ಗೆ ನನ್ನ ಬಳಿ ಬಂದು ನೇರವಾಗಿ ಮಾತನಾಡಿ, ಬಂದ್ ಮಾಡುವುದರಿಂದ ಏನೂ ಪ್ರಯೋಜನ ಇಲ್ಲ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಂದ್ ಕೈ ಬಿಡುವಂತೆ ಮನವಿ ಮಾಡಿದ್ದರು.
ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ದಿನಾಂಕ 13-2-2020ರಂದು ಗುರುವಾರ ವಿವಿಧ ಸಂಘಟನೆಗಳು ಬಂದ್ ಕರೆ ನೀಡಿರುವ ಕುರಿತು, ಮುಖ್ಯಮಂತ್ರಿ ಶ್ರೀ @BSYBJP ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. pic.twitter.com/UKPxwsw16V
— CM of Karnataka (@CMofKarnataka) February 12, 2020














Click it and Unblock the Notifications