ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲಿ ವಾರದಲ್ಲಿನ ಎರಡನೇ ಬಂದ್ ಈಗ ಮುಕ್ತಾಯಗೊಂಡಿದೆ. ಕಳೆದ ಮಂಗಳವಾರ ಬೆಂಗಳೂರು ಬಂದ್, ಇಂದು ( ಸೆ29) ಕರ್ನಾಟಕ ಬಂದ್ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು. ಬಿಜೆಪಿ ಮತ್ತು ಜೆಡಿಎಸ್ ಈ ಬಂದ್ಗೆ ಬಾಹ್ಯ ಬೆಂಬಲವನ್ನು ನೀಡಿದ್ದವು. ಕಾವೇರಿ ಕಣಿವೆ ಭಾಗದಲ್ಲಿನ ಜಿಲ್ಲೆಗಳಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದವು.
ಅಗತ್ಯ ಸೇವೆ ಬಿಟ್ಟು ಉಳಿದೆಲ್ಲವೂ ಬಹುತೇಕ ಬಂದ್ ಆಗಿದ್ದವು, ಕರ್ನಾಟಕ ಬಂದ್ಗೆ ಸುಮಾರು ಎರಡು ಸಾವಿರ ಸಂಘಟನೆಗಳ ಸಾಥ್ ನೀಡಿದ್ದವು. ಹೊಟೇಲ್, ಮಾಲ್, ಚಲನಚಿತ್ರ ಮಂದಿರಗಳು ಸೇರಿದಂತೆ ವಾಣಿಜ್ಯ ಮಳಿಗೆಗಳು ಬಂದ್ ಆಗಿದ್ದವು. ಎರಡೆರಡು ಬಂದ್ ನಡೆದರು ಕೂಡಾ ಕರ್ನಾಟಕದ ಸಂಕಷ್ಟ ಮುಗಿಯದೇ, ಅಕ್ಟೋಬರ್ 15ರವರೆಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ CWMA ಸೂಚನೆ ನೀಡಿದೆ
Sep 29, 2023, 6:12 pm IST
ವಾರದ ಎರಡನೇ ಬಂದ್ ಶಾಂತಿಯುತ ಮುಕ್ತಾಯ
ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಕಾವೇರಿ ಕಣಿವೆ ಭಾಗದ ಜಿಲ್ಲೆಗಳಲ್ಲಿ ಬಂದ್ಗೆ ಉತ್ತಮ ವ್ಯಕ್ತವಾಗಿದ್ದವು. ಎರಡೆರಡು ಬಂದ್ ನಡುವೆಯೂ ಪ್ರಾಧಿಕಾರ ಮತ್ತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಿದೆ. ನೀರು ಬಿಡುಗಡೆ ಮಾಡಲು ಆದೇಶ ಬಂದಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಗಳ ಜತೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
Sep 29, 2023, 5:48 pm IST
ಸಿಎಂ ಮತ್ತು ಡಿಸಿಎಂ ಸುದೀರ್ಘ ಚರ್ಚೆ
ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಅದೇಶಿಸಿರುವ ಹಿನ್ನೆಲೆಯಲ್ಲಿ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಗಳ ಜತೆ ಸುದೀರ್ಘ ಚರ್ಚೆ.
Sep 29, 2023, 4:14 pm IST
ಮಂಡ್ಯ ವಿಶ್ವೇಶ್ವರಯ್ಯ ಪ್ರತಿಮೆ ಮುಂದೆ ಮತ್ತೆ ಧರಣಿ ಆರಂಭವಾಗಿದೆ. ತಮಿಳುನಾಡಿಗೆ ನೀರು ಬಿಡುವಂತೆ ಮಾಡಿದ ಹೊಸ ಆದೇಶ ಮತ್ತು ಕಾವೇರಿ ನೀರು ಪ್ರಾಧಿಕಾರದ ವಿರುದ್ಧ ರೈತರು, ಕನ್ನಡಪರ ಸಂಘಟನೆಗಳು ಧರಣಿ ನಡೆಸುತ್ತಿವೆ. ಮಂಡ್ಯದಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ಆರಂಭಿಸಿದ್ದಾರೆ.
Sep 29, 2023, 3:58 pm IST
ರಾಜ್ಯ ಸರ್ಕಾರ ತಮಿಳುನಾಡಿಗೆ ಅವೈಜ್ಞಾನಿಕವಾಗಿ ಹರಿಸುತ್ತಿರುವ ನೀರನ್ನು ಕೂಡಲೇ ನಿಲ್ಲಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಹಾಗೂ ರಾಜ್ಯ ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಕ್ಕೊತ್ತಾಯವನ್ನು ಮಾಡಿದರು.
Sep 29, 2023, 3:57 pm IST
ಕರ್ನಾಟಕ ಬಂದ್ ಮಧ್ಯೆ ರಾಜ್ಯಕ್ಕೆ ಮತ್ತೊಂದು ಶಾಕ್ ಸಿಕ್ಕಿದೆ. CWRC ಯಿಂದ ಇಂದು ಮತ್ತೊಂದು ಸಭೆ ನಡೆಯಿತು. ಸಭೆ ಬಳಿಕ ನಿತ್ಯ 3000 ಕ್ಯೂಸೆಕ್ ನೀರು ತಮಿಳುನಾಡಿಗೆ ನಿತ್ಯ ಹರಿಸುವಂತೆ ಕರ್ನಾಟಕಕ್ಕೆ ಸಮಿತಿ ಆದೇಶ ಹೊರಿಡಿಸುವ ಮೂಲಕ ಮತ್ತೆ ಶಾಕ್ ನೀಡಿದೆ.
Sep 29, 2023, 3:54 pm IST
ಕಾವೇರಿ ವಿಚಾರದಲ್ಲಿ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದೆ : ಬೊಮ್ಮಾಯಿ
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದ್ದು, ಈಗ ಕಾನೂನು ತಜ್ಞರು, ರೈತರನ್ನು ಕರೆದು ಮಾತನಾಡಿಸುತ್ತಿದೆ. ಈ ಕೆಲಸ ಮೊದಲೇ ಮಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Sep 29, 2023, 3:52 pm IST
ಕಾವೇರಿ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ: ತೇಜಸ್ವಿ ಸೂರ್ಯ
ಇವತ್ತು ರಾಜ್ಯದಲ್ಲಿ ಹಲವಾರು ರೈತಪರ ಸಂಘಟನೆಗಳು ಕುಡಿಯುವ ನೀರಿಗೆ ಸಂಕಷ್ಟ ಇದ್ದರೂ ಮಂಡ್ಯ ಮತ್ತು ಹಲವಾರು ಭಾಗದ ರೈತರಿಗೆ ಬೆಳೆಗಳಿಗೆ ನೀರಿನ ಕೊರತೆ ಇದ್ದರೂ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಬಂದ್ ಕರೆಕೊಟ್ಟಿದ್ದಾರೆ. ಈ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ತೇಜಸ್ವಿ ಸೂರ್ಯ ಹೇಳಿದರು.
Sep 29, 2023, 3:35 pm IST
ಸಂಕಷ್ಟ ಕಾಲದಲ್ಲಿ ಕಾವೇರಿ ನೀರು ಹರಿಸುವ ಹೊಸ ಸೂತ್ರಕ್ಕೆ ಅಗ್ರಹ: ಡಿ.ಕೆ.ಶಿವಕುಮಾರ್
ಮಳೆ ಇಲ್ಲದ ಸಂಕಷ್ಟದ ಕಾಲದಲ್ಲಿ ನೀರು ಹರಿಸುವ ಹೊಸ ಸೂತ್ರ ರೂಪಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಆಗ್ರಹ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು
ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಕಾವೇರಿ ಸಮಸ್ಯೆ ಇತ್ಯರ್ಥಕ್ಕೆ ವಿಶೇಷ ಅಧಿವೇಶನ ಕರೆಯುವಂತೆ ಸಿದ್ದರಾಮಯ್ಯಗೆ ಶಾಂತಕುಮಾರ್ ಮನವಿ ಮಾಡಿದರು.
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು. ಕಾವೇರಿ ಸಮಸ್ಯೆ ಬಗೆಹರಿಸಲು ವಿಶೇಷ ಅಧಿವೇಶನ ಕರೆಯಬೇಕು ಎಂದು ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.
Sep 29, 2023, 1:39 pm IST
ಒಂದು ಕಡೆ ಪರಮೇಶ, ಇನ್ನೊಂದು ಕಡೆ ಶಿವಕುಮಾರ, ಮತ್ತೊಂದು ಕಡೆ ಸಿದ್ದರಾಮನೂ ದಾರಿ ತೋರಿಲ್ಲ: ವಾಟಾಳ್ ನಾಗರಾಜ್
Sep 29, 2023, 1:21 pm IST
ನಮ್ಮ ಕುಟುಂಬ ಯಾವಾಗಲು ಕಾವೇರಿ ಹೋರಾಟದಲ್ಲಿ ಇದೆ: ನಟ ಯುವರಾಜ್ ಕುಮಾರ್
ನಮ್ಮ ಕುಟುಂಬ ಯಾವಾಗಲು ಕಾವೇರಿ ಹೋರಾಟದಲ್ಲಿ ಇದೆ. ಚಿತ್ರರಂಗ ಕಾವೇರಿ ಹೋರಾಟದ ಪರವಾಗಿದ್ದೇವೆ, ಹೋರಾಟಕ್ಕೆ ನಾವು ಸದಾ ಸಿದ್ದ ಎಂದು ಯುವ ಚಿತ್ರದ ನಾಯಕ ನಟ ಯುವರಾಜ್ ಕುಮಾರ್ ಹೇಳಿದರು.
Sep 29, 2023, 1:09 pm IST
ಬೆಂಗಳೂರಿನ ಜನರಿಗೆ ಕುಡಿಯಲು ನೀರು ಇರಲ್ಲ: ತೇಜಸ್ವಿ ಸೂರ್ಯ
ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿದೆ. ಕಾವೇರಿ ನದಿ ನೀರು ಹೀಗೆ ತಮಿಳುನಾಡಿಗೆ ಹೋಗುತ್ತಿದ್ದರೆ ಬೆಂಗಳೂರಿನ ಜನರಿಗೆ ಕುಡಿಯಲು ನೀರು ಇರಲ್ಲ. ಕರ್ನಾಟಕ ಸರ್ಕಾರವು CWMA (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಮುಂದೆ ತನ್ನ ವಾದವನ್ನು ಮಂಡಿಸಲು ವಿಫಲವಾಗಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
Sep 29, 2023, 12:55 pm IST
ಕಾವೇರಿ ಹೋರಾಟದಲ್ಲಿ ವಾಟಾಳ್ ನಾಗರಾಜ್ ವಿಭಿನ್ನ ವೇಷ ತೊಟ್ಟು ಪಾಲ್ಗೊಂಡರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಬುರ್ಖಾ ಧರಿಸಿ ತಲೆ ಮೇಲೆ ಕೊಡ ಹಿಡಿದು ಪ್ರತಿಭಟನೆ ಮಾಡಿದರು.
Sep 29, 2023, 12:49 pm IST
ಬ್ಲೇಡ್ನಲ್ಲಿ ಕೈ ಕೊಯ್ದುಕೊಂಡ ಪ್ರತಿಭಟನಾಕಾರ
ಚಿಕ್ಕಮಗಳೂರಿನಲ್ಲಿ ಕನ್ನಡ ಪರ ಹೋರಾಟಗಾರರೊಬ್ಬರು ಪ್ರತಿಭಟನೆ ವೇಳೆ ಬ್ಲೇಡ್ನಿಂದ ಕೊಚ್ಚಿದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕನ್ನಡ ಪರ ಹೋರಾಟಗಾರ ರಾಜು ಅವರಿಗೆ ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಕಳಸ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
Sep 29, 2023, 12:37 pm IST
ಕಾವೇರಿ ಹೆಸರಲ್ಲಿ ವೋಟು ಪಡೆದು ಮಂಡ್ಯ ಜನರ ಕತ್ತು ಕುಯ್ಯುವ ಕೆಸಲ ಮಾಡುತ್ತಿದ್ದಾರೆ ಎಂದು, ನಟ, ನಿರ್ದೇಶಕ ಪ್ರೇಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಹುಟ್ಟಿದ್ದು ಮಂಡ್ಯ ಜಿಲ್ಲೆಯಲ್ಲೇ, ಇವಾಗೂ ಎಮ್ಮೆ, ದನ ಸಾಕುತ್ತಿದ್ದೇನೆ. ಮಂಡ್ಯ ಜನ ನಾಟಕದ ಮಾತನಾಡಲ್ಲ, ಯಾವುದೇ ಪಕ್ಷ, ಯಾರೇ ಸಿಎಂ ಆದರೂ ರಾಜಕಾರಣ ಮಾಡ್ತಾರೆ. ಬಂಗಾರಪ್ಪ ಅವರಂತೆ ಇವರು ನೀರು ಬಿಡಬಾರದಿತ್ತು, ತಕ್ಷಣ ನೀರು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.
Sep 29, 2023, 12:07 pm IST
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇ೦ದು ಬೆ೦ಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವ ಡಿಕೆ ಶಿವಕುಮಾರ್ ಸಭೆ ನಡೆಸಲಿದ್ದಾರೆ.
Sep 29, 2023, 12:04 pm IST
ಮಳೆಯನ್ನು ಲೆಕ್ಕಿಸದೆ ಹಮಾಲಿ ಕಾರ್ಮಿಕ ಪ್ರತಿಭಟನೆ
ಕಾವೇರಿ ನೀರಿಗಾಗಿ ಕರೆನೀಡಿರುವ ಕರ್ನಾಟಕ ಬಂದ್ಗೆ ರಾಜ್ಯದ ವಿವಿಧ ಕಡೆಗಳಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ನಗರದಲ್ಲಿಯೂ ಸಹ ಹಮಾಲಿ ಕಾರ್ಮಿಕರು ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ 300ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರ ಸಂಘಟನೆಗಳು ಭಾಗಿಯಾಗಿವೆ. ಈ ಮೂಲಕ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ಕ್ರಮವನ್ನು ಪ್ರತಿಭಟನಾಕಾರರು ಖಂಡಿಸಿದ್ದಾರೆ.
Sep 29, 2023, 11:57 am IST
ಕಾವೇರಿ ನಮ್ಮದು ಎಂದು ತಮಿಳರು, ತಮಿಳುನಾಡು ವಿರುದ್ಧ ಅಕ್ರೋಶ
ಚಾಮರಾಜನಗರದಲ್ಲಿ ಬಂದ್ಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಪ್ರತಿಭಟನೆಗೆ ತಮಿಳರು ಕೂಡ ಜೊತೆಯಾಗಿದ್ದು ಕಾವೇರಿ ನಮ್ಮದು ಎಂದು ಘೋಷಣೆ ಕೂಗಿದ್ದಾರೆ. ಕಾಡಂಚಿನ ಗ್ರಾಮ ಹೂಗ್ಯಂನಲ್ಲಿ ತಮಿಳು ಮಾತೃಭಾಷೆಯಾದರೂ, ತಮಿಳುನಾಡು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಅಂಗಡಿ ಬಂದ್ ಮಾಡ, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿದ್ದಾರೆ.
Sep 29, 2023, 11:54 am IST
ಪೊಲೀಸರ ವಶಕ್ಕೆ ವಾಟಾಳ್ ನಾಗರಾಜ್
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಬೆಂಗಳೂರಿನ ಟೌನ್ಹಾಲ್ ಮುಂದೆ ಪ್ರತಿಭಟಿಸಲು ಆಗಮಿಸಿದ ವಾಟಾಳ್ ನಾಗರಾಜ್ ಅವರನ್ನು ಬಸ್ನಲ್ಲಿ ಕರೆದುಕೊಂಡು ಹೋಗಲಾಯಿತು.
#WATCH | Bengaluru: Pro-Kannada activist Vatal Nagaraj detained by the Town Hall Police during the Karnataka Bandh protest pic.twitter.com/h7t20O0AgK
ಕಾವೇರಿ ವಿವಾದ ಹಲವು ದಶಕಗಳಿಂದಲೂ ಇದೆ, ರೈತರಿಗೆ ನಾವು ಎಷ್ಟೇ ಧೈರ್ಯ ಹೇಳಿದರೂ, ಮಳೆಯಿಂದ ಇದಕ್ಕೆ ಪರಿಹಾರ ಸಿಗಬೇಕು. ಸರ್ಕಾರ ಈ ಸಮಸ್ಯೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು, ಹೋರಾಟಕ್ಕೆ ಕಲಾವಿದರು, ತಂತ್ರಜ್ಞರು, ಇಡೀ ಚಿತ್ರರಂಗ ಬೆಂಬಲ ನೀಡಲಿದೆ ಎಂದು ನಟ ವಿಜಯ ರಾಘವೇಂದ್ರ ಹೇಳಿದರು.
Sep 29, 2023, 11:46 am IST
ಇಂದಿನ ಹೋರಾಟಕ್ಕೆ ಕನ್ನಡ ಚಿತ್ರರಂಗ ಕೂಡ ಸಾಥ್ ಕೊಟ್ಟಿದೆ. ಫಿಲಂ ಚೇಂಬರ್ ಎದುರು ಕಲಾವಿದರು ಪ್ರತಿಭಟನೆ ಮಾಡುತ್ತಿದ್ದು, ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ನಟಿ ಪೂಜಾಗಾಂಧಿ ಎಚ್ಚರಿಕೆ ನೀಡಿದ್ದಾರೆ. ಕನ್ನಡಿಗರು ಹೆಚ್ಚು ತಾಳ್ಮೆ ಹೊಂದಿದ್ದಾರೆ ಎಂದು ಅದನ್ನು ಪರೀಕ್ಷೆ ಮಾಡಬೇಡಿ, ಎಲ್ಲಾ ಸಮಸ್ಯೆಗೂ ಪರಿಹಾರ ಇರುತ್ತೆ, ಕಾವೇರಿ ಸಮಸ್ಯೆಗೂ ಪರಿಹಾರ ಹುಡುಕಬೇಕು ಎಂದು ಒತ್ತಾಯಿಸಿದ್ದಾರೆ.
Sep 29, 2023, 11:29 am IST
ಚಿಕ್ಕಬಳ್ಳಾಪುರ: ಬಂದ್ ಇಲ್ಲ..ಬಸ್ ಇದೆ..ಆದ್ರೂ ಜನ ಬರ್ತಿಲ್ಲ
ಚಿಕ್ಕಬಳ್ಳಾಪುರ: ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಬಂದ್ಗೆ ಯಾರೂ ಕರೆ ಕೊಟ್ಟಿಲ್ಲ. ಸಂಘಟನೆಗಳು ಸುಮ್ಮನಾಗಿದ್ದರೂ ಜನರೇ ಸ್ವಯಂ ಪ್ರೇರಿತವಾಗಿ ಬಂದ್ಗೆ ಬೆಂಬಲಿಸಿದಂತಿದೆ. ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಗಳಿವೆ. ಆದರೆ ಪ್ರಯಾಣಿಕರಿಲ್ಲ. ಪ್ರಯಾಣಿಕರಿಲ್ಲದೆ ಬಸ್ ನಿಲ್ದಾಣ ಖಾಲಿ ಖಾಲಿಯಾಗಿ ಬಿಕೋ ಎನ್ನುವಂತಿದೆ. ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಎಂದಿನಂತೆ ಬಸ್ಗಳ ಆಗಮನವಾಗುತ್ತಿದೆ. ಆದರೆ ಕೇವಲ ಬೆರಳಣಿಕೆ ಪ್ರಯಾಣಿಕರು ಮಾತ್ರ ಬಸ್ ಹತ್ತುತ್ತಿದ್ದಾರೆ. ಬಹುತೇಕ ಬಸ್ಗಳು ಖಾಲಿ ಖಾಲಿಯಾಗಿವೆ. ಪ್ರಯಾಣಿಕರು ಯಾವಾಗ ಬರುತ್ತಾರೆ ಎಂದು ಕಾಯುವಂತಾಗಿದೆ.
Sep 29, 2023, 11:28 am IST
ಚಿಕ್ಕಬಳ್ಳಾಪುರ: ಬಂದ್ ಇಲ್ಲ..ಬಸ್ ಇದೆ..ಆದ್ರೂ ಜನ ಬರ್ತಿಲ್ಲ
ಚಿಕ್ಕಬಳ್ಳಾಪುರ: ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಬಂದ್ಗೆ ಯಾರೂ ಕರೆ ಕೊಟ್ಟಿಲ್ಲ. ಸಂಘಟನೆಗಳು ಸುಮ್ಮನಾಗಿದ್ದರೂ ಜನರೇ ಸ್ವಯಂ ಪ್ರೇರಿತವಾಗಿ ಬಂದ್ಗೆ ಬೆಂಬಲಿಸಿದಂತಿದೆ. ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಗಳಿವೆ. ಆದರೆ ಪ್ರಯಾಣಿಕರಿಲ್ಲ. ಪ್ರಯಾಣಿಕರಿಲ್ಲದೆ ಬಸ್ ನಿಲ್ದಾಣ ಖಾಲಿ ಖಾಲಿಯಾಗಿ ಬಿಕೋ ಎನ್ನುವಂತಿದೆ. ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಎಂದಿನಂತೆ ಬಸ್ಗಳ ಆಗಮನವಾಗುತ್ತಿದೆ. ಆದರೆ ಕೇವಲ ಬೆರಳಣಿಕೆ ಪ್ರಯಾಣಿಕರು ಮಾತ್ರ ಬಸ್ ಹತ್ತುತ್ತಿದ್ದಾರೆ. ಬಹುತೇಕ ಬಸ್ಗಳು ಖಾಲಿ ಖಾಲಿಯಾಗಿವೆ. ಪ್ರಯಾಣಿಕರು ಯಾವಾಗ ಬರುತ್ತಾರೆ ಎಂದು ಕಾಯುವಂತಾಗಿದೆ.
Sep 29, 2023, 11:22 am IST
ಚಾಮರಾಜನಗರದಲ್ಲಿ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ರೈತರು
ತಮಿಳುನಾಡಿನ ವಾಹನಗಳನ್ನು ಒದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಕಾರರ ಆಕ್ರೋಶಕ್ಕೆ ತಮಿಳಿಗರು ಬೆಚ್ಚಿಬಿದ್ದಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿ ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದಾರೆ. ಪ್ರತಿಭಟನಾಕಾರರು ನಗರದ ಸಿದ್ಧಾರ್ಥ ಚಿತ್ರಮಂದಿರದಲ್ಲಿ ತಮಿಳು ಪೋಸ್ಟರ್ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Sep 29, 2023, 11:16 am IST
ತಮಿಳುನಾಡು ಗಡಿಯಲ್ಲಿ ಹೈ ಅಲರ್ಟ್
ಗಡಿ ಜಿಲ್ಲೆಯಾದ ಚಾಮರಾಜನಗರದಲ್ಲಿ ಪ್ರತಿಭಟನೆ ತೀವ್ರವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡು ವಾಹನಗಳನ್ನು ಕರ್ನಾಟಕಕ್ಕೆ ಬಿಡದೆ ಪೊಲೀಸರು ತಡೆದಿದ್ದಾರೆ. ತಮಿಳುನಾಡು ನೋಂದಣಿಯ ಎಲ್ಲಾ ವಾಹನಗಳನ್ನು ರಾಜ್ಯದೊಳಕ್ಕೆ ಪ್ರವೇಶಿದಂತೆ ತಡೆದಿದ್ದು ವಾಪಸ್ ಕಳುಹಿಸುತ್ತಿದ್ದಾರೆ. ತಾಳವಾಡಿ ಸಮೀಪದ ರಾಂಪುರ, ಎಲ್ಲೆಕಟ್ಟೆ, ಕುಂಬಾರಗುಂಡಿ, ಅರಳವಾಡಿ ಕಡೆ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
Sep 29, 2023, 11:12 am IST
ಬೆಂಗಳೂರು ನಗರದಲ್ಲಿ ಕಾವೇರಿ ಹೋರಾಟ ತೀವ್ರವಾಗುತ್ತಿದೆ. ಕೆಪಿಸಿಸಿ ಕಚೇರಿ ಎದುರು ಕನ್ನಡಪಟ ಸಂಘಟನೆಗಳು ಪ್ರತಿಭಟನೆ ನಡೆಸಿದವು. ನಗರದಾದ್ಯಂತ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಬೈಕ್ ರ್ಯಾಲಿ ಮಾಡುತ್ತಿದ್ದು, ಕೆಪಿಸಿಸಿ ಕಚೇರಿ ಮುಂದೆ ಬೈಕ್ ನಿಲ್ಲಿಸಿ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Sep 29, 2023, 11:06 am IST
ಕಾವೇರಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವ ಡಿಕೆ ಶಿವಕುಮಾರ್ ಸಭೆ ನಡೆಸಲಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಗೂ ಮುನ್ನ ತಜ್ಞರನ್ನು ಭೇಟಿ ಮಾಡಿ ಸಲಹೆಗಳನ್ನು ಪಡೆಯಲು ಡಿಕೆಶಿ ನಿರ್ಧರಿಸಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯು ಇಂದು ದೆಹಲಿಯಲ್ಲಿ ನಡೆಯಲಿದೆ.
Sep 29, 2023, 11:03 am IST
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಕಾವೇರಿ ಹೋರಾಟ ಜೋರಾಗಿದೆ. ಪಾಲಿಟೆಕ್ನಿಕ್ ರಸ್ತೆಯಲ್ಲಿ ತೆರೆದಿದ್ದ ಅಂಗಡಿ ಮಳಿಗೆಗಳಲ್ಲಿ ಕನ್ನಡಪರ ಹೋರಾಟಗಾರರು ಮುಚ್ಚಿಸಿದ್ದಾರೆ. ಚಿಂತಾಮಣಿ ನಗರ ಸಂಪೂರ್ಣವಾಗಿ ಬಂದ್ ಆಗಿದ್ದು, ಹೋರಾಟಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ.
Sep 29, 2023, 11:00 am IST
ಬಂದ್ ಮಾಡದಂತೆ ಸಂಘಟನೆಗಳಿಗೆ ಮನವಿ ಮಾಡಿದ್ದೇವೆ. ಕಾನೂನಿನ ಪ್ರಕಾರ ಬಂದ್ ಮಾಡಬಾರದು. ನಿಯಮ ಉಲ್ಲ೦ಘಿಸಿದರೇ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ.
Sep 29, 2023, 10:58 am IST
ಹೊಸೂರು ಗಡಿಯಲ್ಲೇ ಇಳಿದ ಪ್ರಯಾಣಿಕರು
ಕಾವೇರಿ ಪರ ಹೋರಾಟ ಜೋರಾದ ಬೆನ್ನಲ್ಲೇ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಸಂಚರಿಸುವ ಪ್ರಯಾಣಿಕರು ಹೊಸೂರು ಬಳಿಯ ಗಡಿಯಲ್ಲಿ ಬಸ್ಗಳನ್ನು ಬದಲಾಯಿಸಿ ತಮ್ಮ ತಮ್ಮ ಸ್ಥಳಗಳಿಗೆ ತೆರಳಲು ಪರದಾಡಿದರು.
READ MORE
6:05 AM, 29 Sep
ಯಾವುದೇ ಕಾರಣಕ್ಕೂ ರಜನಿಕಾಂತ್ ಕರ್ನಾಟಕಕ್ಕೆ ಬರಬಾರದು.
ಕಾವೇರಿ ನದಿ ನೀರಿನ ವಿಷಯದಲ್ಲಿ ಮೌನ ವಹಿಸಿರುವ ನಟ ರಜನಿಕಾಂತ್ ಯಾವುದೇ ಕಾರಣಕ್ಕೂ ರಜನಿಕಾಂತ್ ಕರ್ನಾಟಕಕ್ಕೆ ಬರಬಾರದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ. ಅವರ ಚಿತ್ರಗಳನ್ನು ಬಿಡುಗಡೆ ಮಾಡಬಾರದು ಎಂದ ಅವರು ರಜನಿಕಾಂತ್ ಕನ್ನಡದವರಾಗಿ ಕನ್ನಡಿಗರ ಪರವಾಗಿ ಹೋರಾಟ ಮಾಡಬೇಕು ಎಂದರು.
6:06 AM, 29 Sep
ಕಾವೇರಿ ನೀರಿಗಾಗಿ ಕರುನಾಡು ಬಂದ್: ರಾಜ್ಯಾದ್ಯಂತ ಪೊಲೀಸರು ಫುಲ್ ಅಲರ್ಟ್!
ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಇಡೀ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಯಲ್ಲೂ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಬೆಂಗಳೂರು ಸೇರಿದಂತೆ ಒಟ್ಟು 80ಸಾವಿರ ಪೊಲೀಸರು, 200 KSRP ತುಕಡಿಗಳು, 80 CAR ತುಕಡಿ, ವಾಟರ್ ಜೆಟ್ಗಳು, ಅತಿಸೂಕ್ಷ್ಮ ಪ್ರದೇಶಗಳಾದ ಮಂಡ್ಯ, ಮೈಸೂರು ಭಾಗದಲ್ಲಿ ವಾಟರ್ ಜೆಟ್ಗಳ ನಿಯೋಜನೆ ಮಾಡಲಾಗಿದೆ.
6:10 AM, 29 Sep
ಕಾವೇರಿಗಾಗಿ ಹೋರಾಟ: ಸರ್ಕಾರದಿಂದ ನಿರ್ಬಂಧ!
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಇಂದು ನೂರಾರು ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಪೊಲೀಸ್ರು ಹೋರಾಟಗಾರರಿಗೆ ಎಚ್ಚರಿಕೆಯ ನೋಟಿಸ್ ನೀಡಿದೆ.
6:19 AM, 29 Sep
ಹಲವು ಹೋರಾಟಗಾರರಿಗೆ ನೋಟಿಸ್!
ಬೆಂಗಳೂರಿನ ಹಲವು ಹೋರಾಟಗಾರರಿಗೆ ನೋಟಿಸ್ ಕಳುಹಿಸಿರುವ ಪೊಲೀಸರು ಫ್ರೀಡಂ ಪಾರ್ಕ್ ಹೊರತುಪಡಿಸಿ ಯಾವ ಭಾಗದಲ್ಲೂ ಧರಣಿ, ಪ್ರತಿಭಟನೆ, ಮೆರವಣಿಗೆ ಮಾಡಬಾರದು. ಅಕಸ್ಮಾತ್, ಮಾಡಿದರೆ ಅದರಿಂದ ಉಂಟಾಗುವ ನಷ್ಟಕ್ಕೆ ನೀವೇ ಹೊಣೆಗಾರರು. ನಿಮ್ಮ ವಿರುದ್ಧವೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೋಲಿಸ್ ರು ನೋಟಿಸ್ನಲ್ಲಿ ಎಚ್ಚರಿಸಿದ್ದಾರೆ.
6:25 AM, 29 Sep
ಚಾಮರಾಜನಗರದಲ್ಲಿ ತಮಟೆ ಬಾರಿಸಿ ರಸ್ತೆ ತಡೆ, ಅರೆ ಬೆತ್ತಲೆ ಉರುಳುಸೇವೆ
ಕರ್ನಾಟಕ ಬಂದ್ ಹಿನ್ನೆಲೆ ಚಾಮರಾಜನಗರದಲ್ಲಿ ಇಂದು ಬೆಳಗ್ಗೆ 6 ರಿಂದಲೇ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಭುವನೇಶ್ವರಿ ವೃತ್ತದಲ್ಲಿ ಕಬ್ಬು ಬೆಳೆಗಾರರ ಸಂಘ, ಕನ್ನಡಪರ ಸಂಘಟನೆಗಳು ರಸ್ತೆ ತಡೆ ನಡೆಸಿ ತಮಿಳುನಾಡು ಹಾಗೂ ರಾಜ್ಯ ಸರ್ಜಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರೈತ ಮುಖಂಡರು ತಮಟೆ ಬಾರಿಸಿ ಅರೆಬೆತ್ತಲೆಯಾಗಿ ಉರುಳುಸೇವೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
6:32 AM, 29 Sep
ಕಾವೇರಿಗಾಗಿ ಹೋರಾಟ; ಶಾಲಾ-ಕಾಲೇಜುಗಳಿಗೆ ರಜೆ!
ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಮತ್ತು ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ ಮತ್ತು ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.
6:49 AM, 29 Sep
ಪ್ರತಿಭಟನಾಕಾರರಿಗೆ ಕಮಿಷನರ್ ಖಡಕ್ ವಾರ್ನಿಂಗ್
ಕರ್ನಾಟಕ ಬಂದ್ಗೆ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ. ಬಂದ್ ಮಾಡಿಸುವವರ ವಿರುದ್ಧ ಕಠಿಣ ಕ್ರಮ ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನಾಕಾರರು ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ಮಾಡಲು ಅವಕಾಶ ಇದೆ ಎಂದು ಹೇಳಿದ್ದಾರೆ.
7:02 AM, 29 Sep
ಶಾಸಕರು, ಎಂಪಿ ಗಳು ಸತ್ತೋದ್ರು, ಸತ್ತೋದ್ರು ಎಂದು ಆಕ್ರೋಶ
ಚಾಮರಾಜನಗರದ ಗುಂಡ್ಲುಪೇಟೆ ವೃತ್ತದಲ್ಲಿ ಕಾವೇರಿಗಾಗಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರು ಕುಣಿದು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು. ಶಾಸಕರು, ಎಂಪಿಗಳು ಸತ್ತೋದ್ರು, ಸತ್ತೋದ್ರು ಎಂದು ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
7:13 AM, 29 Sep
ಕಾವೇರಿಗಾಗಿ ಕರುನಾಡು ಬಂದ್; KSRTC ಬಸ್ ನಿಲ್ದಾಣಕ್ಕೂ ಬಂದ್ ಬಿಸಿ!
ಕಾವೇರಿ ನದಿ ನೀರು ವಿಚಾರವಾಗಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದೆ. ಇತ್ತ KSRTC, BMTC ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದು, ಬಂದ್ ಹಿನ್ನಲೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದೆ, ಬಂದ್ ಬಿಸಿ ತಟ್ಟಿದೆ.
#WATCH | Bengaluru: Pro-Kannada organisations call for Karnataka Bandh over the Cauvery water issue.
ಕಾವೇರಿ ನೀರಿಗಾಗಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಆದರೆ, ಬಳ್ಳಾರಿ ಜಿಲ್ಲೆಯಲ್ಲಿ ಕಾವೇರಿ ಹೋರಾಟಕ್ಕೆ ಯಾವುದೇ ಪ್ರತಿಕ್ರಿಯೆ ಇಲ್ಲ. ಎಂದಿನಂತೆ ಜನಜೀವನ ನಡೆಯುತ್ತಿದ್ದು, ಆಟೋ ಬಸ್ ಸಂಚಾರವಿದೆ.
7:34 AM, 29 Sep
ರೈತರಿಗೆ ಮೋಸ ಎಂದು ಕಿವಿ ಮೇಲೆ ಹೂವಿಟ್ಟುಕೊಂಡು ಪ್ರತಿಭಟನೆ
ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ಚಾಮರಾಜನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರೈತರು, ಕನ್ನಡಪರ ಸಂಘಟನೆಗಳು, ದಲಿತಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ, ಷರೀಫ್ ವೃತ್ತ, ಗುಂಡ್ಲುಪೇಟೆ ವೃತ್ತ, ಸಂತೇಮರಹಳ್ಳಿ ವೃತ್ತ, ಅಂಗಡಿ ಬೀದಿಗಳಲ್ಲಿ ಕಿವಿ ಮೇಲೆ ಹೂವಿಟ್ಟುಕೊಂಡು ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು.
7:49 AM, 29 Sep
ತಮಿಳುನಾಡು ಸಿಎಂ ಸ್ಟಾಲಿನ್ ಪ್ರತಿಕೃತಿ ದಹಿಸಿ ಆಕ್ರೋಶ
ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಬಂದ್ ಕಾವು ಹೆಚ್ಚಾಗಿದ್ದು, ಕನ್ನಡಪರ ಸಂಘಟನೆಗಳು ತಮಿಳುನಾಡು ಸಿಎಂ ಸ್ಟಾಲಿನ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಮಗಳೂರು ನಗರದ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಪ್ರತಿಕೃತಿ ದಹಿಸಿ, ರಾಜ್ಯ ಸರ್ಕಾರದ ವಿರುದ್ಧವೂ ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
8:01 AM, 29 Sep
ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಯತ್ನ; ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಕಾವೇರಿಗಾಗಿ ಕರ್ನಾಟಕ ಬಂದ್ ಕರೆ ನೀಡಿದ್ದು, ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಕರವೇ ಕಾರ್ಯಕರ್ತರು ಕನ್ನಡ ಬಾವುಟಗಳನ್ನು ಕೈಲಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ 20 ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
8:06 AM, 29 Sep
ಕರ್ನಾಟಕ ಬಂದ್: 150 ಜನರನ್ನ ವಶಕ್ಕೆ ಪಡೆದ ಪೊಲೀಸರು
ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕೆಲ ರೌಡಿಶೀಟರ್ಗಳು ಸೇರಿದಂತೆ 150 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
8:08 AM, 29 Sep
ಕಾವೇರಿಗಾಗಿ ಹೋರಾಟ; ಸಿಎಂ ನಿವಾಸದ ಬಳಿ ಹೈ ಅಲರ್ಟ್
ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ಖಂಡಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಸಿಎಂ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ದಾರಿಗಳಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಎರಡು ಕೆಎಸ್ ಆರ್ಪಿ, ಕಾವೇರಿ ನಿವಾಸದ ಬಳಿ ಒಂದು ಬಿಎಂಟಿಸಿ ಬಸ್, ಒಂದು ಕೆಎಸ್ ಆರ್ಪಿ ತುಕಡಿ ನಿಯೋಜಿಸಲಾಗಿದೆ.
8:11 AM, 29 Sep
ಚಿಕ್ಕಮಗಳೂರು ನಗರದಲ್ಲಿ ಟಮಟೆ ಚಳುವಳಿ ತಮಟೆ ಬಡಿಯುತ್ತಾ, ಖಾಲಿ ಮಡಕೆ ಹಿಡಿದು ಪ್ರದರ್ಶನ. ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಹೆಗಲ ಮೇಲೆ ಖಾಲಿ ಮಡಿಕೆ ಹೊತ್ತು ತಮಟೆ ಬಡಿಯುತ್ತಾ ಮೆರವಣಿಗೆ ರೈತ ಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪ ಗೌಡರಿಂದ ತಮಟೆ ಚಳುವಳಿ. ಚಿಕ್ಕಮಗಳೂರು ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಘಟನೆ
8:17 AM, 29 Sep
ತಮಿಳುನಾಡು ನೋಂದಣಿಯ ವಾಹನಗಳಿಗೆ ತಡೆ
ಕಾವೇರಿಗಾಗಿ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಕರೆ ಕೊಟ್ಟಿದ್ದು, ಕರ್ನಾಟಕಕ್ಕೆ ಎಂಟ್ರಿಯಾಗುತ್ತಿರುವ ತಮಿಳುನಾಡಿನ ಬಸ್, ಕಾರು ಹಾಗೂ ಬೈಕ್ ಗಳನ್ನ ಅತ್ತಿಬೆಲೆ ಗಡಿ ಬಳಿ ಪೊಲೀಸರು ತಡೆದು ವಾಪಸ್ ಕಳುಹಿಸುತ್ತಿದ್ದಾರೆ.
8:18 AM, 29 Sep
ಧಾರವಾಡ ಕರ್ನಾಟಕ ಬಂದ್ ಹಿನ್ನೆಲೆ
ಧಾರವಾಡ ನಗರದ ಜುಬಲಿ ವೃತ್ತದಲ್ಲಿ ಪ್ರತಿಭಟನೆ, ಮಹದಾಯಿ ರೈತರು ಹಾಗೂ ದಲಿತ ಸಂಘಟನೆಗಳ ಪ್ರೊಟೆಸ್ಟ್, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ.ಕಾವೇರಿ ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ, ಎಂಪಿಗಳು ರಾಜೀನಾಮೆ ನೀಡಬೇಕೆಂದು ರೈತರ ಆಗ್ರಹ.
8:20 AM, 29 Sep
ಅತ್ತಿಬೆಲೆ ಬಳಿ ಪ್ರತಿಭಟನಾಕಾರರನ್ನ ವಶಕ್ಕೆ ಪಡೆದ ಪೊಲೀಸರು
ಅತ್ತಿಬೆಲೆ ಬಳಿ ಕಾವೇರಿ ನದಿ ನೀರು ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಸದಸ್ಯರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
#WATCH | Karnataka: Bengaluru Police detain members of pro-Kannada organisations, protesting over the Cauvery Water Issue, near Attibele. pic.twitter.com/XOzVcQ9e9s
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕನ್ನಡ ಪರ ಕಾರ್ಯಕರ್ತರ ಬಂಧನ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕನ್ನಡ ಪರ ಕಾರ್ಯಕರ್ತರನ್ನು ಬಂಧಿಸಲಾಗಿದೆ. ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಲು ಯತ್ನಿಸಿದ ಕೆಲ ಪ್ರತಿಭಟನಾಕಾರರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
8:28 AM, 29 Sep
ಸೂಕ್ತ ಬಂದೋಬಸ್ತ್: ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ
ಕಾವೇರಿಗಾಗಿ ಹಲವು ಕನ್ನಡ ಪರ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದರಿಂದ ಸೂಕ್ತ ಬಂದೋಬಸ್ತ್ ಮಾಡಿದ್ದೇವೆ. ಸಂಘಟನೆಗಳ 50 ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಮ್ಮಲ್ಲಿ ಸಾಕಷ್ಟು ಸಿಬ್ಬಂದಿ ಇದ್ದಾರೆ ಮತ್ತು ಯಾವುದೇ ತಪ್ಪಾಗದಂತೆ ನಾವು ಎಚ್ಚರಿಕೆ ವಹಿಸಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದಾರೆ.
#WATCH | Karnataka: Mallikarjun Baladandi, Additional SP of Bengaluru Rural district says, "We have made proper arrangements as a bandh has been called by several pro-Kannada organisations. More than 50 people from the organisations have been taken into custody... We have… pic.twitter.com/Itk6ACtYg1
ಕರ್ನಾಟಕ ಬಂದ್ ಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವರ್ತಕರು ಅಂಗಡಿ ಮುಂಗಟ್ಟುಗಳನ್ನ ಮುಚ್ಚಿ ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ರಸ್ತೆಯಲ್ಲಿ ಸಂಚಾರ ಮಾಡುತ್ತಿರುವ ವಾಹನಗಳನ್ನ ಸಂಘಟನೆಯ ಕಾರ್ಯಕರ್ತರು ತಡೆಯುತ್ತಿದ್ದಾರೆ. ಇನ್ನು ಸ್ಟಾಲಿನ್ ಪ್ರತಿಕೃತಿ ದಹಿಸಿ ಕನ್ನಡ ಪರ ಸಂಘಟನೆ ಯ ಕಾರ್ಯಕರ್ತರು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
8:32 AM, 29 Sep
ಪರೀಕ್ಷೆ ಮುಂದೂಡಿದ ಗುಲ್ಬರ್ಗ ವಿಶ್ವವಿದ್ಯಾಲಯ
ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ನಿಂದಾಗಿ ಇಂದು ನಿಗದಿಯಾಗಿದ್ದ ಗುಲ್ಬರ್ಗ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅಕ್ಟೋಬರ್ 13ಕ್ಕೆ ಮುಂದೂಡಲಾಗಿದೆ. ನಿಗದಿತ ಪರೀಕ್ಷೆಯ ಸಮಯಕ್ಕಿಂತ ಕೆಲವೇ ಗಂಟೆಗಳ ಮೊದಲು ವಿಶ್ವವಿದ್ಯಾಲಯ ಈ ನಿರ್ಧಾರವನ್ನು ಪ್ರಕಟಿಸಿದೆ.
8:41 AM, 29 Sep
ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ
ತುಮಕೂರು ನಗರದ ಟೌನ್ ಹಾಲ್ ಬಳಿ ವಿವಿಧ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದು, ಸಿಎಂ ಎಂ.ಕೆ ಸ್ಟಾಲಿನ್ ಭಾವಚಿತ್ರಕ್ಕೆ ತುಳಿದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
8:45 AM, 29 Sep
ಕರ್ನಾಟಕದ 28 ಸಂಸದರಿಗೆ ಶೃದ್ಧಾಂಜಲಿ ಅರ್ಪಿಸಿ ಪ್ರತಿಭಟನೆ
ರಾಜ್ಯದಲ್ಲಿ ಕಾವೇರಿಗಾಗಿ ಹೋರಾಟದ ಕಿಚ್ಚು ಜೋರಾಗಿದ್ದು, ಗದಗ ಜಿಲ್ಲೆಯಲ್ಲಿ ರಾಜ್ಯದ 28 ಸಂಸದರಿಗೆ ಶೃದ್ಧಾಂಜಲಿ ಅರ್ಪಿಸಿ ಜಯ ಕರ್ನಾಟಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೀವಂತ ಇದ್ದರೂ ರಾಜ್ಯದ ಪಾಲಿಗೆ ಸತ್ತು ಹೋಗಿದ್ದಾರೆ ಅಂತ ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
8:50 AM, 29 Sep
ಕಾವೇರಗಾಗಿ ಹೋರಾಟ; ಮಂಡ್ಯದಲ್ಲಿ ಬಿಗಿ ಬಂದೋಬಸ್ತ್
ಕಾವೇರಿ ನದಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಹಲವು ಕನ್ನಡ ಪರ ಸಂಘಟನೆಗಳು ಇಂದು ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
#WATCH | Security arrangements tightened in Karnataka's Mandya as several pro-Kannada organisations called for a 'bandh' today regarding the Cauvery water issue. pic.twitter.com/66T5yM9Qkl
ಕಾವೇರಿ ನದಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ನಿಂದಾಗಿ ಬೆಂಗಳೂರಿನ ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ.
#WATCH | Karnataka: Less number of passengers were seen at Vijayanagar Metro Station, Bengaluru because of the Bandh called by various organizations regarding the Cauvery water issue. pic.twitter.com/MFM5OslnmI
ಕಾವೇರಿಗಾಗಿ ನಡೆಸುತ್ತರುವ ಕರ್ನಾಟಕ ಬಂದ್ಗೆ ನಮ್ಮ ಸಂಪೂರ್ಣ ಬೆಂಬಲ ಇದೆ.ಜೆಡಿಎಸ್ ಪಕ್ಷದಿಂದ ನೈತಿಕ ಬೆಂಬಲ ಘೋಷಣೆ ಮಾಡಿದ್ದೇವೆ.
9:10 AM, 29 Sep
ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಕಾವೇರಿ ಕಿಚ್ಚು
ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾವೇರಿ ಕಿಚ್ಚು ಮತ್ತಷ್ಟು ಹೆಚ್ಚಾಗಿದ್ದು, ಕರ್ನಾಟಕದ ಸಂಸದರ ಭಾವಚಿತ್ರದ ಮುಂದೆ ಕಾಲಿ ಬಿಂದಿಗೆ ಇಟ್ಟು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಬಸ್ ನಿಲ್ದಾಣದ ಬಳಿ ಖಾಲಿ ಬಿಂದಿಗೆಗೆ ಗಾಳ ಹಾಕಿ 28 ಸಂಸದರ ಚಿತ್ರ ಹಿಡಿದು ಅಣಕು ಪ್ರದರ್ಶನ ಮಾಡಿದ್ದಾರೆ.