Get Updates
Get notified of breaking news, exclusive insights, and must-see stories!
Live

Karnataka Bandh LIVE: ಕಾವೇರಿಗಾಗಿ ಹೋರಾಟ, ಶಾಂತಿಯುತ ಕರ್ನಾಟಕ ಬಂದ್ ಮುಕ್ತಾಯ

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್​ ಆದೇಶದ ಬೆನ್ನಲ್ಲಿ ವಾರದಲ್ಲಿನ ಎರಡನೇ ಬಂದ್ ಈಗ ಮುಕ್ತಾಯಗೊಂಡಿದೆ. ಕಳೆದ ಮಂಗಳವಾರ ಬೆಂಗಳೂರು ಬಂದ್, ಇಂದು ( ಸೆ29) ಕರ್ನಾಟಕ ಬಂದ್​ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು. ಬಿಜೆಪಿ ಮತ್ತು ಜೆಡಿಎಸ್ ಈ ಬಂದ್​ಗೆ ಬಾಹ್ಯ ಬೆಂಬಲವನ್ನು ನೀಡಿದ್ದವು. ಕಾವೇರಿ ಕಣಿವೆ ಭಾಗದಲ್ಲಿನ ಜಿಲ್ಲೆಗಳಲ್ಲಿ ಬಂದ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದವು.

ಅಗತ್ಯ ಸೇವೆ ಬಿಟ್ಟು ಉಳಿದೆಲ್ಲವೂ ಬಹುತೇಕ ಬಂದ್ ಆಗಿದ್ದವು, ಕರ್ನಾಟಕ ಬಂದ್​ಗೆ ಸುಮಾರು ಎರಡು ಸಾವಿರ ಸಂಘಟನೆಗಳ ಸಾಥ್ ನೀಡಿದ್ದವು. ಹೊಟೇಲ್, ಮಾಲ್, ಚಲನಚಿತ್ರ ಮಂದಿರಗಳು ಸೇರಿದಂತೆ ವಾಣಿಜ್ಯ ಮಳಿಗೆಗಳು ಬಂದ್ ಆಗಿದ್ದವು. ಎರಡೆರಡು ಬಂದ್ ನಡೆದರು ಕೂಡಾ ಕರ್ನಾಟಕದ ಸಂಕಷ್ಟ ಮುಗಿಯದೇ, ಅಕ್ಟೋಬರ್ 15ರವರೆಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ CWMA ಸೂಚನೆ ನೀಡಿದೆ

Karnataka Bandh Live

Sep 29, 2023, 6:12 pm IST

ವಾರದ ಎರಡನೇ ಬಂದ್ ಶಾಂತಿಯುತ ಮುಕ್ತಾಯ

ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಕಾವೇರಿ ಕಣಿವೆ ಭಾಗದ ಜಿಲ್ಲೆಗಳಲ್ಲಿ ಬಂದ್​ಗೆ ಉತ್ತಮ ವ್ಯಕ್ತವಾಗಿದ್ದವು. ಎರಡೆರಡು ಬಂದ್ ನಡುವೆಯೂ ಪ್ರಾಧಿಕಾರ ಮತ್ತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಿದೆ. ನೀರು ಬಿಡುಗಡೆ ಮಾಡಲು ಆದೇಶ ಬಂದಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಗಳ ಜತೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
Sep 29, 2023, 5:48 pm IST

ಸಿಎಂ ಮತ್ತು ಡಿಸಿಎಂ ಸುದೀರ್ಘ ಚರ್ಚೆ

karnataka-bandh
ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಅದೇಶಿಸಿರುವ ಹಿನ್ನೆಲೆಯಲ್ಲಿ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಗಳ ಜತೆ ಸುದೀರ್ಘ ಚರ್ಚೆ.
Sep 29, 2023, 4:14 pm IST

ಮಂಡ್ಯ ವಿಶ್ವೇಶ್ವರಯ್ಯ ಪ್ರತಿಮೆ ಮುಂದೆ ಮತ್ತೆ ಧರಣಿ ಆರಂಭವಾಗಿದೆ. ತಮಿಳುನಾಡಿಗೆ ನೀರು ಬಿಡುವಂತೆ ಮಾಡಿದ ಹೊಸ ಆದೇಶ ಮತ್ತು ಕಾವೇರಿ ನೀರು ಪ್ರಾಧಿಕಾರದ ವಿರುದ್ಧ ರೈತರು, ಕನ್ನಡಪರ ಸಂಘಟನೆಗಳು ಧರಣಿ ನಡೆಸುತ್ತಿವೆ. ಮಂಡ್ಯದಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ಆರಂಭಿಸಿದ್ದಾರೆ.
Sep 29, 2023, 3:58 pm IST

ರಾಜ್ಯ ಸರ್ಕಾರ ತಮಿಳುನಾಡಿಗೆ ಅವೈಜ್ಞಾನಿಕವಾಗಿ ಹರಿಸುತ್ತಿರುವ ನೀರನ್ನು ಕೂಡಲೇ ನಿಲ್ಲಿಸಬೇಕು ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಹಾಗೂ ರಾಜ್ಯ ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಅವರ ನೇತೃತ್ವದಲ್ಲಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಕ್ಕೊತ್ತಾಯವನ್ನು ಮಾಡಿದರು.
Sep 29, 2023, 3:57 pm IST

ಕರ್ನಾಟಕ ಬಂದ್ ಮಧ್ಯೆ ರಾಜ್ಯಕ್ಕೆ ಮತ್ತೊಂದು ಶಾಕ್ ಸಿಕ್ಕಿದೆ. CWRC ಯಿಂದ ಇಂದು ಮತ್ತೊಂದು ಸಭೆ ನಡೆಯಿತು. ಸಭೆ ಬಳಿಕ ನಿತ್ಯ 3000 ಕ್ಯೂಸೆಕ್ ನೀರು ತಮಿಳುನಾಡಿಗೆ ನಿತ್ಯ ಹರಿಸುವಂತೆ ಕರ್ನಾಟಕಕ್ಕೆ ಸಮಿತಿ ಆದೇಶ ಹೊರಿಡಿಸುವ ಮೂಲಕ ಮತ್ತೆ ಶಾಕ್ ನೀಡಿದೆ.
Sep 29, 2023, 3:54 pm IST

ಕಾವೇರಿ ವಿಚಾರದಲ್ಲಿ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದೆ : ಬೊಮ್ಮಾಯಿ

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದ್ದು, ಈಗ ಕಾನೂನು ತಜ್ಞರು, ರೈತರನ್ನು ಕರೆದು ಮಾತನಾಡಿಸುತ್ತಿದೆ. ಈ ಕೆಲಸ ಮೊದಲೇ ಮಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Sep 29, 2023, 3:52 pm IST

ಕಾವೇರಿ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ: ತೇಜಸ್ವಿ ಸೂರ್ಯ

ಇವತ್ತು ರಾಜ್ಯದಲ್ಲಿ ಹಲವಾರು ರೈತಪರ ಸಂಘಟನೆಗಳು ಕುಡಿಯುವ ನೀರಿಗೆ ಸಂಕಷ್ಟ ಇದ್ದರೂ ಮಂಡ್ಯ ಮತ್ತು ಹಲವಾರು ಭಾಗದ ರೈತರಿಗೆ ಬೆಳೆಗಳಿಗೆ ನೀರಿನ ಕೊರತೆ ಇದ್ದರೂ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಬಂದ್ ಕರೆಕೊಟ್ಟಿದ್ದಾರೆ. ಈ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ತೇಜಸ್ವಿ ಸೂರ್ಯ ಹೇಳಿದರು.
Sep 29, 2023, 3:35 pm IST

ಸಂಕಷ್ಟ ಕಾಲದಲ್ಲಿ ಕಾವೇರಿ ನೀರು ಹರಿಸುವ ಹೊಸ ಸೂತ್ರಕ್ಕೆ ಅಗ್ರಹ: ಡಿ.ಕೆ.ಶಿವಕುಮಾರ್

ಮಳೆ ಇಲ್ಲದ ಸಂಕಷ್ಟದ ಕಾಲದಲ್ಲಿ ನೀರು ಹರಿಸುವ ಹೊಸ ಸೂತ್ರ ರೂಪಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಆಗ್ರಹ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು
Sep 29, 2023, 3:35 pm IST

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ರೈತ ಮುಖಂಡ ಕುರುಬೂರು ಶಾಂತಕುಮಾರ್

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಕಾವೇರಿ ಸಮಸ್ಯೆ ಇತ್ಯರ್ಥಕ್ಕೆ ವಿಶೇಷ ಅಧಿವೇಶನ ಕರೆಯುವಂತೆ ಸಿದ್ದರಾಮಯ್ಯಗೆ ಶಾಂತಕುಮಾರ್ ಮನವಿ ಮಾಡಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು. ಕಾವೇರಿ ಸಮಸ್ಯೆ ಬಗೆಹರಿಸಲು ವಿಶೇಷ ಅಧಿವೇಶನ ಕರೆಯಬೇಕು ಎಂದು ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.
Sep 29, 2023, 1:39 pm IST

ಒಂದು ಕಡೆ ಪರಮೇಶ, ಇನ್ನೊಂದು ಕಡೆ ಶಿವಕುಮಾರ, ಮತ್ತೊಂದು ಕಡೆ ಸಿದ್ದರಾಮನೂ ದಾರಿ ತೋರಿಲ್ಲ: ವಾಟಾಳ್ ನಾಗರಾಜ್
Sep 29, 2023, 1:21 pm IST

ನಮ್ಮ ಕುಟುಂಬ ಯಾವಾಗಲು ಕಾವೇರಿ ಹೋರಾಟದಲ್ಲಿ ಇದೆ: ನಟ ಯುವರಾಜ್ ಕುಮಾರ್

ನಮ್ಮ ಕುಟುಂಬ ಯಾವಾಗಲು ಕಾವೇರಿ ಹೋರಾಟದಲ್ಲಿ ಇದೆ: ನಟ ಯುವರಾಜ್ ಕುಮಾರ್
ನಮ್ಮ ಕುಟುಂಬ ಯಾವಾಗಲು ಕಾವೇರಿ ಹೋರಾಟದಲ್ಲಿ ಇದೆ. ಚಿತ್ರರಂಗ ಕಾವೇರಿ ಹೋರಾಟದ ಪರವಾಗಿದ್ದೇವೆ, ಹೋರಾಟಕ್ಕೆ ನಾವು ಸದಾ ಸಿದ್ದ ಎಂದು ಯುವ ಚಿತ್ರದ ನಾಯಕ ನಟ ಯುವರಾಜ್ ಕುಮಾರ್ ಹೇಳಿದರು.
Sep 29, 2023, 1:09 pm IST

ಬೆಂಗಳೂರಿನ ಜನರಿಗೆ ಕುಡಿಯಲು ನೀರು ಇರಲ್ಲ: ತೇಜಸ್ವಿ ಸೂರ್ಯ

ಬೆಂಗಳೂರಿನ ಜನರಿಗೆ ಕುಡಿಯಲು ನೀರು ಇರಲ್ಲ: ತೇಜಸ್ವಿ ಸೂರ್ಯ
ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿದೆ. ಕಾವೇರಿ ನದಿ ನೀರು ಹೀಗೆ ತಮಿಳುನಾಡಿಗೆ ಹೋಗುತ್ತಿದ್ದರೆ ಬೆಂಗಳೂರಿನ ಜನರಿಗೆ ಕುಡಿಯಲು ನೀರು ಇರಲ್ಲ. ಕರ್ನಾಟಕ ಸರ್ಕಾರವು CWMA (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಮುಂದೆ ತನ್ನ ವಾದವನ್ನು ಮಂಡಿಸಲು ವಿಫಲವಾಗಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
Sep 29, 2023, 12:55 pm IST

Karnataka Bandh Live
ಕಾವೇರಿ ಹೋರಾಟದಲ್ಲಿ ವಾಟಾಳ್ ನಾಗರಾಜ್ ವಿಭಿನ್ನ ವೇಷ ತೊಟ್ಟು ಪಾಲ್ಗೊಂಡರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಬುರ್ಖಾ ಧರಿಸಿ ತಲೆ ಮೇಲೆ ಕೊಡ ಹಿಡಿದು ಪ್ರತಿಭಟನೆ ಮಾಡಿದರು.
Sep 29, 2023, 12:49 pm IST

ಬ್ಲೇಡ್‌ನಲ್ಲಿ ಕೈ ಕೊಯ್ದುಕೊಂಡ ಪ್ರತಿಭಟನಾಕಾರ

ಚಿಕ್ಕಮಗಳೂರಿನಲ್ಲಿ ಕನ್ನಡ ಪರ ಹೋರಾಟಗಾರರೊಬ್ಬರು ಪ್ರತಿಭಟನೆ ವೇಳೆ ಬ್ಲೇಡ್‌ನಿಂದ ಕೊಚ್ಚಿದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕನ್ನಡ ಪರ ಹೋರಾಟಗಾರ ರಾಜು ಅವರಿಗೆ ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಕಳಸ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
Sep 29, 2023, 12:37 pm IST

ಕಾವೇರಿ ಹೆಸರಲ್ಲಿ ವೋಟು ಪಡೆದು ಮಂಡ್ಯ ಜನರ ಕತ್ತು ಕುಯ್ಯುವ ಕೆಸಲ ಮಾಡುತ್ತಿದ್ದಾರೆ ಎಂದು, ನಟ, ನಿರ್ದೇಶಕ ಪ್ರೇಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಹುಟ್ಟಿದ್ದು ಮಂಡ್ಯ ಜಿಲ್ಲೆಯಲ್ಲೇ, ಇವಾಗೂ ಎಮ್ಮೆ, ದನ ಸಾಕುತ್ತಿದ್ದೇನೆ. ಮಂಡ್ಯ ಜನ ನಾಟಕದ ಮಾತನಾಡಲ್ಲ, ಯಾವುದೇ ಪಕ್ಷ, ಯಾರೇ ಸಿಎಂ ಆದರೂ ರಾಜಕಾರಣ ಮಾಡ್ತಾರೆ. ಬಂಗಾರಪ್ಪ ಅವರಂತೆ ಇವರು ನೀರು ಬಿಡಬಾರದಿತ್ತು, ತಕ್ಷಣ ನೀರು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.
Sep 29, 2023, 12:07 pm IST

Karnataka Bandh Live
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇ೦ದು ಬೆ೦ಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವ ಡಿಕೆ ಶಿವಕುಮಾರ್ ಸಭೆ ನಡೆಸಲಿದ್ದಾರೆ.
Sep 29, 2023, 12:04 pm IST

ಮಳೆಯನ್ನು ಲೆಕ್ಕಿಸದೆ ಹಮಾಲಿ ಕಾರ್ಮಿಕ ಪ್ರತಿಭಟನೆ

ಕಾವೇರಿ ನೀರಿಗಾಗಿ ಕರೆನೀಡಿರುವ ಕರ್ನಾಟಕ ಬಂದ್‍ಗೆ ರಾಜ್ಯದ ವಿವಿಧ ಕಡೆಗಳಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ನಗರದಲ್ಲಿಯೂ ಸಹ ಹಮಾಲಿ ಕಾರ್ಮಿಕರು ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ 300ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರ ಸಂಘಟನೆಗಳು ಭಾಗಿಯಾಗಿವೆ. ಈ ಮೂಲಕ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ಕ್ರಮವನ್ನು ಪ್ರತಿಭಟನಾಕಾರರು ಖಂಡಿಸಿದ್ದಾರೆ.
Sep 29, 2023, 11:57 am IST

ಕಾವೇರಿ ನಮ್ಮದು ಎಂದು ತಮಿಳರು, ತಮಿಳುನಾಡು ವಿರುದ್ಧ ಅಕ್ರೋಶ

ಚಾಮರಾಜನಗರದಲ್ಲಿ ಬಂದ್‌ಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಪ್ರತಿಭಟನೆಗೆ ತಮಿಳರು ಕೂಡ ಜೊತೆಯಾಗಿದ್ದು ಕಾವೇರಿ ನಮ್ಮದು ಎಂದು ಘೋಷಣೆ ಕೂಗಿದ್ದಾರೆ. ಕಾಡಂಚಿನ ಗ್ರಾಮ ಹೂಗ್ಯಂನಲ್ಲಿ ತಮಿಳು ಮಾತೃಭಾಷೆಯಾದರೂ, ತಮಿಳುನಾಡು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಅಂಗಡಿ ಬಂದ್ ಮಾಡ, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿದ್ದಾರೆ.
Sep 29, 2023, 11:54 am IST

ಪೊಲೀಸರ ವಶಕ್ಕೆ ವಾಟಾಳ್‌ ನಾಗರಾಜ್‌

ಪೊಲೀಸರ ವಶಕ್ಕೆ ವಾಟಾಳ್‌ ನಾಗರಾಜ್‌
ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಬೆಂಗಳೂರಿನ ಟೌನ್‌ಹಾಲ್‌ ಮುಂದೆ ಪ್ರತಿಭಟಿಸಲು ಆಗಮಿಸಿದ ವಾಟಾಳ್‌ ನಾಗರಾಜ್‌ ಅವರನ್ನು ಬಸ್‌ನಲ್ಲಿ ಕರೆದುಕೊಂಡು ಹೋಗಲಾಯಿತು.
Sep 29, 2023, 11:48 am IST

ಕಾವೇರಿ ವಿವಾದ ಹಲವು ದಶಕಗಳಿಂದಲೂ ಇದೆ, ರೈತರಿಗೆ ನಾವು ಎಷ್ಟೇ ಧೈರ್ಯ ಹೇಳಿದರೂ, ಮಳೆಯಿಂದ ಇದಕ್ಕೆ ಪರಿಹಾರ ಸಿಗಬೇಕು. ಸರ್ಕಾರ ಈ ಸಮಸ್ಯೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು, ಹೋರಾಟಕ್ಕೆ ಕಲಾವಿದರು, ತಂತ್ರಜ್ಞರು, ಇಡೀ ಚಿತ್ರರಂಗ ಬೆಂಬಲ ನೀಡಲಿದೆ ಎಂದು ನಟ ವಿಜಯ ರಾಘವೇಂದ್ರ ಹೇಳಿದರು.
Sep 29, 2023, 11:46 am IST

ಇಂದಿನ ಹೋರಾಟಕ್ಕೆ ಕನ್ನಡ ಚಿತ್ರರಂಗ ಕೂಡ ಸಾಥ್ ಕೊಟ್ಟಿದೆ. ಫಿಲಂ ಚೇಂಬರ್ ಎದುರು ಕಲಾವಿದರು ಪ್ರತಿಭಟನೆ ಮಾಡುತ್ತಿದ್ದು, ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ನಟಿ ಪೂಜಾಗಾಂಧಿ ಎಚ್ಚರಿಕೆ ನೀಡಿದ್ದಾರೆ. ಕನ್ನಡಿಗರು ಹೆಚ್ಚು ತಾಳ್ಮೆ ಹೊಂದಿದ್ದಾರೆ ಎಂದು ಅದನ್ನು ಪರೀಕ್ಷೆ ಮಾಡಬೇಡಿ, ಎಲ್ಲಾ ಸಮಸ್ಯೆಗೂ ಪರಿಹಾರ ಇರುತ್ತೆ, ಕಾವೇರಿ ಸಮಸ್ಯೆಗೂ ಪರಿಹಾರ ಹುಡುಕಬೇಕು ಎಂದು ಒತ್ತಾಯಿಸಿದ್ದಾರೆ.
Sep 29, 2023, 11:29 am IST

ಚಿಕ್ಕಬಳ್ಳಾಪುರ: ಬಂದ್ ಇಲ್ಲ..ಬಸ್ ಇದೆ..ಆದ್ರೂ ಜನ ಬರ್ತಿಲ್ಲ

ಚಿಕ್ಕಬಳ್ಳಾಪುರ: ಕಾವೇರಿ ನೀರಿಗಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಬಂದ್‌ಗೆ ಯಾರೂ ಕರೆ ಕೊಟ್ಟಿಲ್ಲ. ಸಂಘಟನೆಗಳು ಸುಮ್ಮನಾಗಿದ್ದರೂ ಜನರೇ ಸ್ವಯಂ ಪ್ರೇರಿತವಾಗಿ ಬಂದ್‌ಗೆ ಬೆಂಬಲಿಸಿದಂತಿದೆ. ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್‌ಗಳಿವೆ. ಆದರೆ ಪ್ರಯಾಣಿಕರಿಲ್ಲ. ಪ್ರಯಾಣಿಕರಿಲ್ಲದೆ ಬಸ್ ನಿಲ್ದಾಣ ಖಾಲಿ ಖಾಲಿಯಾಗಿ ಬಿಕೋ ಎನ್ನುವಂತಿದೆ. ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಎಂದಿನಂತೆ ಬಸ್‌ಗಳ ಆಗಮನವಾಗುತ್ತಿದೆ. ಆದರೆ ಕೇವಲ ಬೆರಳಣಿಕೆ ಪ್ರಯಾಣಿಕರು ಮಾತ್ರ ಬಸ್ ಹತ್ತುತ್ತಿದ್ದಾರೆ. ಬಹುತೇಕ ಬಸ್‌ಗಳು ಖಾಲಿ ಖಾಲಿಯಾಗಿವೆ. ಪ್ರಯಾಣಿಕರು ಯಾವಾಗ ಬರುತ್ತಾರೆ ಎಂದು ಕಾಯುವಂತಾಗಿದೆ.
Sep 29, 2023, 11:28 am IST

ಚಿಕ್ಕಬಳ್ಳಾಪುರ: ಬಂದ್ ಇಲ್ಲ..ಬಸ್ ಇದೆ..ಆದ್ರೂ ಜನ ಬರ್ತಿಲ್ಲ

ಚಿಕ್ಕಬಳ್ಳಾಪುರ: ಕಾವೇರಿ ನೀರಿಗಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಬಂದ್‌ಗೆ ಯಾರೂ ಕರೆ ಕೊಟ್ಟಿಲ್ಲ. ಸಂಘಟನೆಗಳು ಸುಮ್ಮನಾಗಿದ್ದರೂ ಜನರೇ ಸ್ವಯಂ ಪ್ರೇರಿತವಾಗಿ ಬಂದ್‌ಗೆ ಬೆಂಬಲಿಸಿದಂತಿದೆ. ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್‌ಗಳಿವೆ. ಆದರೆ ಪ್ರಯಾಣಿಕರಿಲ್ಲ. ಪ್ರಯಾಣಿಕರಿಲ್ಲದೆ ಬಸ್ ನಿಲ್ದಾಣ ಖಾಲಿ ಖಾಲಿಯಾಗಿ ಬಿಕೋ ಎನ್ನುವಂತಿದೆ. ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಎಂದಿನಂತೆ ಬಸ್‌ಗಳ ಆಗಮನವಾಗುತ್ತಿದೆ. ಆದರೆ ಕೇವಲ ಬೆರಳಣಿಕೆ ಪ್ರಯಾಣಿಕರು ಮಾತ್ರ ಬಸ್ ಹತ್ತುತ್ತಿದ್ದಾರೆ. ಬಹುತೇಕ ಬಸ್‌ಗಳು ಖಾಲಿ ಖಾಲಿಯಾಗಿವೆ. ಪ್ರಯಾಣಿಕರು ಯಾವಾಗ ಬರುತ್ತಾರೆ ಎಂದು ಕಾಯುವಂತಾಗಿದೆ.
Sep 29, 2023, 11:22 am IST

ಚಾಮರಾಜನಗರದಲ್ಲಿ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ರೈತರು

ತಮಿಳುನಾಡಿನ ವಾಹನಗಳನ್ನು ಒದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಕಾರರ ಆಕ್ರೋಶಕ್ಕೆ ತಮಿಳಿಗರು ಬೆಚ್ಚಿಬಿದ್ದಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿ ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದಾರೆ. ಪ್ರತಿಭಟನಾಕಾರರು ನಗರದ ಸಿದ್ಧಾರ್ಥ ಚಿತ್ರಮಂದಿರದಲ್ಲಿ ತಮಿಳು ಪೋಸ್ಟರ್ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Sep 29, 2023, 11:16 am IST

ತಮಿಳುನಾಡು ಗಡಿಯಲ್ಲಿ ಹೈ ಅಲರ್ಟ್

ಗಡಿ ಜಿಲ್ಲೆಯಾದ ಚಾಮರಾಜನಗರದಲ್ಲಿ ಪ್ರತಿಭಟನೆ ತೀವ್ರವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡು ವಾಹನಗಳನ್ನು ಕರ್ನಾಟಕಕ್ಕೆ ಬಿಡದೆ ಪೊಲೀಸರು ತಡೆದಿದ್ದಾರೆ. ತಮಿಳುನಾಡು ನೋಂದಣಿಯ ಎಲ್ಲಾ ವಾಹನಗಳನ್ನು ರಾಜ್ಯದೊಳಕ್ಕೆ ಪ್ರವೇಶಿದಂತೆ ತಡೆದಿದ್ದು ವಾಪಸ್ ಕಳುಹಿಸುತ್ತಿದ್ದಾರೆ. ತಾಳವಾಡಿ ಸಮೀಪದ ರಾಂಪುರ, ಎಲ್ಲೆಕಟ್ಟೆ, ಕುಂಬಾರಗುಂಡಿ, ಅರಳವಾಡಿ ಕಡೆ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
Sep 29, 2023, 11:12 am IST

ಬೆಂಗಳೂರು ನಗರದಲ್ಲಿ ಕಾವೇರಿ ಹೋರಾಟ ತೀವ್ರವಾಗುತ್ತಿದೆ. ಕೆಪಿಸಿಸಿ ಕಚೇರಿ ಎದುರು ಕನ್ನಡಪಟ ಸಂಘಟನೆಗಳು ಪ್ರತಿಭಟನೆ ನಡೆಸಿದವು. ನಗರದಾದ್ಯಂತ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಬೈಕ್ ರ್‍ಯಾಲಿ ಮಾಡುತ್ತಿದ್ದು, ಕೆಪಿಸಿಸಿ ಕಚೇರಿ ಮುಂದೆ ಬೈಕ್ ನಿಲ್ಲಿಸಿ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Sep 29, 2023, 11:06 am IST

ಕಾವೇರಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವ ಡಿಕೆ ಶಿವಕುಮಾರ್ ಸಭೆ ನಡೆಸಲಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಗೂ ಮುನ್ನ ತಜ್ಞರನ್ನು ಭೇಟಿ ಮಾಡಿ ಸಲಹೆಗಳನ್ನು ಪಡೆಯಲು ಡಿಕೆಶಿ ನಿರ್ಧರಿಸಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯು ಇಂದು ದೆಹಲಿಯಲ್ಲಿ ನಡೆಯಲಿದೆ.
Sep 29, 2023, 11:03 am IST

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಕಾವೇರಿ ಹೋರಾಟ ಜೋರಾಗಿದೆ. ಪಾಲಿಟೆಕ್ನಿಕ್ ರಸ್ತೆಯಲ್ಲಿ ತೆರೆದಿದ್ದ ಅಂಗಡಿ ಮಳಿಗೆಗಳಲ್ಲಿ ಕನ್ನಡಪರ ಹೋರಾಟಗಾರರು ಮುಚ್ಚಿಸಿದ್ದಾರೆ. ಚಿಂತಾಮಣಿ ನಗರ ಸಂಪೂರ್ಣವಾಗಿ ಬಂದ್ ಆಗಿದ್ದು, ಹೋರಾಟಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ.
Sep 29, 2023, 11:00 am IST

ಬಂದ್ ಮಾಡದಂತೆ ಸಂಘಟನೆಗಳಿಗೆ ಮನವಿ ಮಾಡಿದ್ದೇವೆ. ಕಾನೂನಿನ ಪ್ರಕಾರ ಬಂದ್ ಮಾಡಬಾರದು. ನಿಯಮ ಉಲ್ಲ೦ಘಿಸಿದರೇ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ.
Sep 29, 2023, 10:58 am IST

ಹೊಸೂರು ಗಡಿಯಲ್ಲೇ ಇಳಿದ ಪ್ರಯಾಣಿಕರು

ಕಾವೇರಿ ಪರ ಹೋರಾಟ ಜೋರಾದ ಬೆನ್ನಲ್ಲೇ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಸಂಚರಿಸುವ ಪ್ರಯಾಣಿಕರು ಹೊಸೂರು ಬಳಿಯ ಗಡಿಯಲ್ಲಿ ಬಸ್‌ಗಳನ್ನು ಬದಲಾಯಿಸಿ ತಮ್ಮ ತಮ್ಮ ಸ್ಥಳಗಳಿಗೆ ತೆರಳಲು ಪರದಾಡಿದರು.
READ MORE

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+