ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ ಏನಿರುತ್ತೆ ಮತ್ತು ಏನಿರಲ್ಲ ತಿಳಿಯಿರಿ?
ಬೆಂಗಳೂರು, ಸೆಪ್ಟೆಂಬರ್ 27: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕರ್ನಾಟಕದಲ್ಲಿ ಸೆಪ್ಟೆಂಬರ್ 29ರಂದು ಬಂದ್ಗೆ ಘೋಷಣೆ ಮಾಡಲಾಗಿದ್ದು, ಅಂದು ಶುಕ್ರವಾರ ಯಾವ ಸೇವೆಗಳು ಲಭ್ಯವಿರುತ್ತದೆ, ಯಾವ ಸೇವೆ ಲಭ್ಯವಿರುವುದಿಲ್ಲ ಎಂದು ತಿಳಿಯೋಣ.
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ತಡೆಯುವಂತೆ ಒತ್ತಾಯಿಸಿ 29ರಂದು ಕರ್ನಾಟಕ ಬಂದ್ಗೆ ಕನ್ನಡ ಒಕ್ಕೂಟದ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸುವುದಾಗಿ ಸಂಘಟನೆ ಮುಖಂಡ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ಕರೆ ನೀಡಿದ್ದು, ಶುಕ್ರವಾರ ನಗರದಲ್ಲಿ ನಡೆಯಲಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಕನ್ನಡದ ಎಲ್ಲ ನಟರಿಗೆ ಮನವಿ ಮಾಡಿದ್ದಾರೆ.

ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರ ಮಾತನಾಡಿದ ವಾಟಾಳ್ ನಾಗರಾಜ್, ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಡೆಯಲಿರುವ ಕರ್ನಾಟಕ ಬಂದ್ ಗೆ ಈಗಾಗಲೇ 1900ಕ್ಕೂ ಹೆಚ್ಚು ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ತಿಳಿಸಿದ್ದಾರೆ.
ಕಳೆದ 20 ದಿನಗಳಲ್ಲಿ ನಗರದಲ್ಲಿ ನಡೆಯಲಿರುವ ಮೂರನೇ ಬಂದ್ ಇದಾಗಿದೆ. ಮೊದಲನೆಯದು ಸೆಪ್ಟೆಂಬರ್ 11 ರಂದು ಖಾಸಗಿ ಸಾರಿಗೆ ಒಕ್ಕೂಟಗಳು ಕರೆ ನೀಡಿದ್ದವು. ಎರಡನೆಯದು ಸೆಪ್ಟೆಂಬರ್ 26 ರಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯು ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಆಚರಿಸಿತು. ಶುಕ್ರವಾರ ಮೂರನೇ ಬಾರಿಗೆ ನಗರವು ಬಂದ್ಗೆ ಸಜ್ಜಾಗಿದೆ. ಕರ್ನಾಟಕ ಬಂದ್ಗೆ ಈಗಾಗಲೇ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಇನ್ನೂ ಕೆಲವು ಸಂಘಟನೆಗಳು ನಿರ್ಧಾರ ಕೈಗೊಳ್ಳಬೇಕಿದೆ.
ಭಾಗಶಃ ಯಾವ ಸೇವೆ ಇರಲ್ಲ:
1. ಓಲಾ ಮತ್ತು ಉಬರ್ ಸೇವೆಗಳು
2. ಆಟೋರಿಕ್ಷಾಗಳು
3. ಕಾರ್ಮಿಕ ಆಧಾರಿತ ಕೆಲಸಗಳು
4. ಟ್ರಕ್ ಸಾರಿಗೆ
5. ಮಾರುಕಟ್ಟೆಗಳು
6. ಬೀದಿ ವ್ಯಾಪಾರಿಗಳು
7. ಹೋಟೆಲ್ಗಳು
8. ಚಿತ್ರಮಂದಿರಗಳು
9. ಮಾಲ್ಗಳು
10. ಖಾಸಗಿ ಬಸ್ಸುಗಳು
11. ಬೇಕರಿಗಳು
ಭಾಗಶಃ ಯಾವ ಸೇವೆ ಇರುತ್ತದೆ:
1. ಆಸ್ಪತ್ರೆ
2. ಔಷಧಾಲಯಗಳು
3. ಆಂಬ್ಯುಲೆನ್ಸ್ ಸೇವೆಗಳು
4. ಮೆಟ್ರೋ ಸೇವೆ
5. ಮಿಲ್ಕ್ ಪಾರ್ಲರ್ಗಳು
ಇನ್ನು ನಿರ್ಧಾರ ಕೈಗೊಳ್ಳದಿರುವ ಸಂಸ್ಥೆಗಳು:
1. ಶಾಲೆ ಮತ್ತು ಕಾಲೇಜುಗಳು
2.ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ ಸೇವೆಗಳು.
ಹಲವೆಡೆ ಮಕ್ಕಳಿಗೆ ಪರೀಕ್ಷೆ ನಡೆಯುತ್ತಿದೆ, ಆದರೆ ಖಾಸಗಿ ಶಾಲಾ ವಾಹನ ಚಾಲಕರ ಸಂಘವು ತಮ್ಮ ನೈತಿಕ ಬೆಂಬಲವನ್ನು ನೀಡಿದೆ. 18 ದಿನಗಳ ಕಾಲ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಯ್ಲೂಆರ್ಸಿ) ರಾಜ್ಯಕ್ಕೆ ಮತ್ತೊಮ್ಮೆ ಆದೇಶ ನೀಡಿರುವುದರಿಂದ ಪ್ರತಿಭಟನೆಯು ಬೆಂಗಳೂರು ಮತ್ತು ಕರ್ನಾಟಕದ ಹಲವು ಭಾಗಗಳಲ್ಲಿ ಜನಸಾಮಾನ್ಯರ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಈ ಆದೇಶವನ್ನು ಕರ್ನಾಟಕ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಿದೆ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
29ರಂದು ಕರೆ ನೀಡಿರುವ ಬಂದ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಮಕುಮಾರ್ ಅವರು ವಿರೋಧ ವ್ತಕ್ತಪಡಿಸಿದ್ದು, ನೀರು ಬಿಡುವ ವಿಚಾರವಾಗಿ ಬಂದ್ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಬುಧವಾರ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಪರ ಸಂಘಟನೆಗಳು ನಗರದಾದ್ಯಂತ ವಿವಿಧ ಹೋಟೆಲ್ಗಳು ಮತ್ತು ಮಾಲ್ಗಳಿಗೆ ಭೇಟಿ ನೀಡಿ ಸೆಪ್ಟೆಂಬರ್ 29 ರಂದು ಮುಚ್ಚುವಂತೆ ಕೇಳಿಕೊಂಡಿವೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬುಧವಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಹೋರಾಟಗಾರರು ಭೇಟಿ ನೀಡಿ 29ರಂದು ವಿವಿಧ ಕನ್ನಡಪರ ಸಂಘಟನೆಗಳ ಆಶ್ರಯದಲ್ಲಿ ಕನ್ನಡ ಒಕ್ಕೂಟದಡಿ ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಬಲ ಕೋರಿದ್ದು, ಕಾವೇರಿ ವಿಚಾರವಾಗಿ ಶುಕ್ರವಾರ ಇಡೀ ರಾಜ್ಯ ಬಂದ್ ಆಗಲಿದೆ ಎಂದು ತಿಳಿಸಿದ್ದಾರೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications