Karnataka Bandh: SSLC ಪರೀಕ್ಷೆಗೆ 'ಕರ್ನಾಟಕ ಬಂದ್' ಬಿಸಿ ತಟ್ಟುತ್ತಾ?
ಬೆಂಗಳೂರು, ಮಾರ್ಚ್ 20: ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ (ಕರ್ನಾಟಕ ಮಾಧ್ಯಮಿಕ ಶಾಲಾ ರಜೆ ಪ್ರಮಾಣಪತ್ರ - SSLC) ವಾರ್ಷಿಕ ಪರೀಕ್ಷೆಗಳು ಆರಂಭಕ್ಕೆ ಕ್ಷಣಗಣನೇ ಶುರುವಾಗಿದೆ. ಎರಡು ಕಾರಣಗಳಿಗೆ ಕನ್ನಡಪರ ಸಂಘಟನೆಗಳು ಮಾರ್ಚ್ 22ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಬಂದ್ ಬಿಸಿ ಪರೀಕ್ಷೆ ಮೇಲೆ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಮೇಲೆ, ಅವರ ಸಾರಿಗೆ ಸಂಚಾರದ ಮೇಲೆ ಪರಿಣಾಮ ಬೀರುತ್ತಾ?
ಈ ಮೊದಲೇ ಘೋಷಿಸಿದಂತೆ ಮಾರ್ಚ್ 22 ರಂದು ಕನ್ನಡಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್ ಮಾಡಿಯೇ ತಿರುತ್ತೇವೆ ಎಂದಿವೆ. ಇದು ರಾಜ್ಯಾದ್ಯಂತ ಶಾಲೆಗಳ ಕಾರ್ಯಚಟುವಟಿಕೆ, ಮುಖ್ಯವಾಗಿ SSLC ಪರೀಕ್ಷೆ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ. ಈ ಬಗ್ಗೆ ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಅಧಿಕೃತ ಪ್ರಕಟಣೆಗಾಗಿ ಕಾಯುತ್ತಿದ್ದಾರೆ.

SSLC ಯ 2025ರ ವಾರ್ಷಿಕ ಪರೀಕ್ಷೆಯು ವರ್ಷದ ಮಾರ್ಚ್ ಏಪ್ರಿಲ್ ಹೊತ್ತಿಗೆ ಬರುತ್ತದೆ. ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ SSLC ಪರೀಕ್ಷೆಗಗಳು ಜರುಗಲಿವೆ. ಇತ್ತ ಬಂದ್ ಮಾರ್ಚ್ 22 ರಂದು ನಡೆಯಲಿದೆ. ಒಂದು ದಿನ ಮೊದಲೇ ಪರೀಕ್ಷೆ ನಡೆಯುತ್ತಾದರೂ ವಿದ್ಯಾರ್ಥಿಗಳ ಸಂಚಾರಕ್ಕೆ ಅಡಚಣೆ ಆಗುವ ನಿರೀಕ್ಷೆ ಇದೆ. ಜೊತೆಗೆ ಎಸ್ಎಸ್ಎಲ್ಸಿ ಪೂರ್ವದ 9,8,7ನೇ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಉಂಟಾಗುವ ಸಾಧ್ಯತೆ ಇದೆ..
ಕರ್ನಾಟಕದ ಖಾಸಗಿ ಅನುದಾನ ರಹಿತ ಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ಗಳ ಪ್ರಕಾರ, ವಿದ್ಯಾರ್ಥಿಗಳ ವೇಳಾಪಟ್ಟಿ ಅಡ್ಡಿಪಡಿಸದಂತೆ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಇತ್ತ ರಾಜ್ಯ ಬಂದ್ ನಿರ್ಧಾರದಿಂದ ಹಿಂದೆ ಸರಿಯದಿರಲು ಹೋರಾಟಗಾರರು ನೀರ್ಣಯಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿಗೆಂದು ಸರ್ಕಾರ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಮಂಡಿಸಿದೆ. ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಹೆಚ್ಚಾಗಿದ್ದು, ರಾಜ್ಯ ಸಾರ್ವಜನಿಕ ಸಾರಿಗೆ ನಿರ್ವಾಹಕರ ಮೇಲೆ ಹಲ್ಲೆ ನಡೆಸಿದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ್ದ 'ಕನ್ನಡ ಒಕ್ಕೂಟ ಕರ್ನಾಟಕ ರಾಜ್ಯ' ಸಂಘಟನೆ ಕರ್ನಾಟಕ ಬಂದ್ಗೆ ಕರೆ ನೀಡಿದೆ.
ಬಂದ್ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪ್ರಯಾಣ ಸಂಕಷ್ಟ?
ಬೆಂಗಳೂರಿನಂತಹ ಮಹಾನಗರದಲ್ಲಿ ವಿದ್ಯಾರ್ಥಿಗಳು ಸಾರಿಗೆ ಸಮಸ್ಯೆ ಎದುರಿಸುವ ಸಾಧ್ಯತೆಗಳು ಇವೆ. ಚಾಲಕ ಸಂಘಟನೆಗಳು ಬಂದ್ ಬೆಂಬಲಿಸಿವೆ. ನಿತ್ಯ ವಿದ್ಯಾರ್ಥಿಗಳು ಪ್ರಯಾಣಿಕರು ಆಟೋಗಳನ್ನು ಅವಲಂಭಿಸಿದ್ದಾರೆ. ಹೀಗಾಗಿ ಅಂದು ಸಾರಿಗೆ ಸಮಸ್ಯೆ ಎದುರಿಸುವ ನಿರೀಕ್ಷೆ ಇದೆ. ಇನ್ನೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ಇತರ ಬಸ್ಗಳು ಬೆಂಬಲ ಬಗ್ಗೆ ಸ್ಪಷ್ಟಪಡಿಸಿಲ್ಲ. ಹೀಗಿದ್ದರು ವಿದ್ಯಾರ್ಥಿಗಳು ಸೂಕ್ತ ಸಮಯಕ್ಕೆ ತಲುಪವಲ್ಲಿ ವಿಳಂಬವಾಗಬಹುದು.
ಶೈಕ್ಷಣಿಕ ಸಂಸ್ಥೆಗಳಿಂದ ಅಗತ್ಯ ಎಚ್ಚರಿಕೆ
ಕರ್ನಾಟಕ ಬಂದ್ಗೆ ಕೇವಲ ಎರಡು ದಿನ ಬಾಕಿ ಇದೆ. ಪರೀಕ್ಷೆಗೆ ಒಂದು ದಿನ ಬಾಕಿ ಇದೆ. ಶಾಲಾ ಶೈಕ್ಷಣಿಕ ಸಂಸ್ಥೆಗಳು ಮುನ್ನೆಚ್ಚರಿಕೆ ವಹಿಸಿವೆ. ಕೆಲವು ಶಾಲೆಗಳು ಆನ್ಲೈನ್ ತರಗತಿಗಳನ್ನು ನಡೆಸುತ್ತಿವೆ. ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆ ನೀಡುತ್ತಿವೆ. ಮಾರ್ಚ್ 22 ಶನಿವಾರ ಬರುವ ಕಾರಣ ಎಸ್ಎಸ್ಎಲ್ಸಿ ಪರೀಕ್ಷೆ ಮೇಲೆ ಪರಿಣಾಮ ಆಗದು, ಬೇರೆ ತರಗತಿಗಳ ಮೇಲೆ, ವಿದ್ಯಾರ್ಥಿಗಳ ಪ್ರಯಾಣದ ಮೇಲೆ ಹೊಡೆತ ಬೀಳಬಹುದೆಂಬ ಆತಂಕ ಇದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ












Click it and Unblock the Notifications