ಕೆಎಸ್ಆರ್ಟಿಸಿ ಬಸ್ಸುಗಳಿಗೆ ತಟ್ಟಿದ ಕಾವೇರಿ ಹೋರಾಟದ ಬಿಸಿ
ಬೆಂಗಳೂರು, ಸೆಪ್ಟೆಂಬರ್ 06 : ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಮಂಡ್ಯದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ರಾಜೀನಾಮೆಗೆ ಆಗ್ರಹಿಸಿದರು.
ಮಂಗಳವಾರ ಮಂಡ್ಯ ಬಂದ್ ನಡೆಸಲಾಗುತ್ತಿದೆ. ಕನ್ನಡಪರ ಸಂಘಟನೆಗಳು ಸೆಪ್ಟೆಂಬರ್ 9ರ ಶುಕ್ರವಾರ ಕರ್ನಾಟಕ ಬಂದ್ಗೆ ಕರೆ ನೀಡಿವೆ. ಮಂಡ್ಯದಲ್ಲಿ ರೈತರು ಕರ್ನಾಟಕ ಸರ್ಕಾರ ಮತ್ತು ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.[ಮಂಡ್ಯ ಬಂದ್ : ಕ್ಷಣ-ಕ್ಷಣದ ಮಾಹಿತಿ]

ಕಾವೇರಿ ಪ್ರತಿಭಟನೆ ಹಿನ್ನಲೆಯಲ್ಲಿ ತಮಿಳುನಾಡಿಗೆ ಸಂಚಾರ ನಡೆಸುವ 700 ಸರ್ಕಾರಿ ಬಸ್ಸುಗಳನ್ನು ಕರ್ನಾಟಕ ಸ್ಥಗಿತಗೊಳಿಸಿದೆ. ತಮಿಳುನಾಡಿನಿಂದ ಆಗಮಿಸಬೇಕಿದ್ದ 418 ಬಸ್ಸುಗಳ ಸಂಚಾರವೂ ಸ್ಥಗಿತಗೊಂಡಿದೆ. ಮಂಡ್ಯದಲ್ಲಿ ಪ್ರತಿಭಟನೆ ಜೋರಾಗಿದ್ದು ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.[ಕಾವೇರಿ ವಿವಾದ : ಹೊಸೂರು, ಮೈಸೂರು ರಸ್ತೆಗೆ ಕಾಲಿಡಬೇಡಿ!]
ತಜ್ಞರೊಂದಿಗೆ ಸಭೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ನೀರಾವರಿ ತಜ್ಞರೊಂದಿಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಕುರಿತು ಮಂಗಳವಾರ ಬೆಳಗ್ಗೆ ಸಭೆ ನಡೆಸಿದರು. ಸಂಜೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ.[ಬೆಂಗಳೂರಿಗರೇ ಎಚ್ಚರ!, ಕುಡಿಯೋಕೆ ಕಾವೇರಿ ನೀರು ಸಿಗಲ್ಲ!]
ಕರ್ನಾಟಕ ಕಾವೇರಿ ಮೇಲುಸ್ತುವಾರಿ ಸಮಿತಿಗೆ ತಕ್ಷಣ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸುವಂತೆ ಮನವಿ ಮಾಡುವ ಸಾಧ್ಯತೆ ಇದೆ. ಈ ಸಮಿತಿ ತಮಿಳುನಾಡಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸುವ ಸಾಧ್ಯತೆ ಇದೆ.
ಸೋಮವಾರ ಸುಪ್ರೀಂಕೋರ್ಟ್ 10 ದಿನಗಳ ಕಾಲ ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ನಷ್ಟು ನೀರು ಹರಿಸಬೇಕು ಎಂದು ಆದೇಶ ನೀಡಿದೆ. ಸೆಪ್ಟೆಂಬರ್ 16ರಂದು ಸುಪ್ರೀಂಕೋರ್ಟ್ನಲ್ಲಿ ಪುನಃ ಅರ್ಜಿಯ ವಿಚಾರಣೆ ನಡೆಯಲಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications