ಸಾಮಾಜಿಕ ಭದ್ರತೆ: ಕರ್ನಾಟಕಕ್ಕೆ ಎಷ್ಟನೇ ಸ್ಥಾನ?
ಬೆಂಗಳೂರು, ಜುನ್ 04: ಜನರಿಗೆ ಸಾಮಾಜಿಕ ಭದ್ರತೆ ನೀಡುವ ವಿಷಯದಲ್ಲಿ ಕರ್ನಾಟಕ ರಾಜ್ಯಕ್ಕೆ ಮೂರನೇ ಸ್ಥಾನ ಸಿಕ್ಕಿದೆ. ಪಿಎಐ(The Public Affairs Index) ಈ ವರದಿಯನ್ನು ನೀಡಿದೆ. ಒಂದು ಅಂಕ ಮೀಸಲಿಟ್ಟ ಜಾಗದಲ್ಲಿ ರಾಜ್ಯಕ್ಕೆ 0.547 ಅಂಕ ಲಭಿಸಿದೆ. 2012 ರಿಂದ 2015 ರ ನಡುವಿನ ಅವಧಿಯಲ್ಲಿ ಈ ಲೆಕ್ಕಾಚಾರ ಹಾಕಲಾಗಿದೆ.
ಸಾಮಾಜಿಕ ಭದ್ರತೆ ನೀಡುವಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡಿದ್ದರೆ, ತಮಿಳುನಾಡು ಎರಡನೇ ಸ್ಥಾನ ಪಡೆದುಕೊಂಡಿದೆ. ಉದ್ಯೋಗ, ಸಾಮಾಜಿಕ ನ್ಯಾಯ, ಸಾರ್ವಜನಿಕ ಆಡಳಿತ, ಅಲ್ಪಸಂಖ್ಯಾತರ ಕಲ್ಯಾಣ ಮುಂತಾದ ವಿಷಯಗಳನ್ನು ಆಧಾರವಾಗಿಟ್ಟುಕೊಂಡು ಅಧ್ಯಯನ ಮಾಡಲಾಗಿತ್ತು.[ಬೆಂಗಳೂರು, ಮುಂಬೈ, ದೆಹಲಿ ಸ್ಮಾರ್ಟ್ ಸಿಟಿಗಳಲ್ಲ: ಸಮೀಕ್ಷೆ]

ಎಸ್ ಸಿ, ಎಸ್ ಟಿ ಗೆ ಸೌಲಭ್ಯ ನೀಡಿಕೆ, ವಿದ್ಯಾರ್ಥಿ ವೇತನ ನೀಡಿಕೆ, ವಸತಿ ವ್ಯವಸ್ಥೆಯಲ್ಲಿ ಕರ್ನಾಟಕ ಸಾಧನೆ ಮಾಡಿದ್ದು ಮೂರನೇ ಸ್ಥಾನ ಲಭಿಸಲು ಕಾರಣವಾಗಿದೆ. ಮಿಜೋರಾಂ ಮತ್ತು ಸಿಕ್ಕಿಂ ಕರ್ನಾಟಕದ ನಂತರದ ಸ್ಥಾನ ಪಡೆದುಕೊಂಡಿವೆ.[ಜೂನ್ 8 ಅಥವಾ 9 ಕ್ಕೆ ರಾಜ್ಯದಲ್ಲಿ ಮುಂಗಾರು ಮಳೆ ಸಿಂಚನ]
ಪರಿಸರ ಉಳಿವಿಕೆ ವಿಷಯದಲ್ಲಿ ಕರ್ನಾಟಕ ಅಗ್ರ ಸ್ಥಾನಿಯಾಗಿ ಹೊರಹೊಮ್ಮಿದೆ. ಪಾರದರ್ಶಕ ಆಡಳಿತ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲೂ ಕರ್ನಾಟಕ ಸಾಧನೆ ಮಾಡಿದ್ದು ಮೂರನೇ ಸ್ಥಾನ ಪಡೆದುಕೊಂಡಿದೆ. ಆರೋಗ್ಯ ಕ್ಷೇತ್ರದಲ್ಲಿ 0.66 ಅಂಕ ಪಡೆದುಕೊಂಡಿದ್ದು 10 ನೇ ಸ್ಥಾನ ಲಭಿಸಿದೆ.
ದಿ ಪಬ್ಲಿಕ್ ಅಫೆರ್ಸ್ ಸೆಂಟರ್ ಆಡಳಿತಕ್ಕೆ ಸಂಬಂಧಿಸಿದ 25 ಸಂಗತಿಗಳನ್ನು ಇಟ್ಟುಕೊಂಡು ಸಮೀಕ್ಷೆ ಮಾಡಿತ್ತು. 68 ಉಪ ವಿಷಯಗಳನ್ನು ಇದು ಒಳಗೊಂಡಿತ್ತು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications