ಕರ್ನಾಟಕದ ಬಿಜೆಪಿ - ಕಾಂಗ್ರೆಸ್ ನಡುವೆ ನೀರು ಹಂಚಿಕೆ ವಿಚಾರಕ್ಕೆ ಜಟಾಪಟಿ!
ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ನ ನಡುವೆ ಮತ್ತೊಂದು ಸುತ್ತಿನ ವಾಕ್ಸಮರ ಶುರುವಾಗಿದೆ. ಎರಡೂ ಪಕ್ಷಗಳು ಟ್ವೀಟ್ವಾರ್ ಶುರು ಮಾಡಿಕೊಂಡಿದ್ದು. ಎರಡೂ ಪಕ್ಷಗಳ ವಾಕ್ಸಮರ ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ. ಮೊದಲಿಗೆ ಕೇರಳ, ತಮಿಳುನಾಡು, ತೆಲಂಗಾಣಕ್ಕೆ ಉಪಕಾರಿಯಾಗಿ, ಕರ್ನಾಟಕಕ್ಕೆ ದ್ರೋಹ ಬಗೆದಿರುವ ನಾಡದ್ರೋಹಿ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ಟ್ವೀಟ್ ಮಾಡಿದೆ. ಇದಕ್ಕೆ 7 ಪ್ರಶ್ನೆಗಳ ಮೂಲಕ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ರಾಜ್ಯದಲ್ಲಿ ಬಿರುಬಿಸಿಲು ಇದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ನೀರಿನ ಸಮಸ್ಯೆ ಎದುರಾಗುವ ಆತಂಕ ಇದೆ. ಇದೀಗ ರಾಜ್ಯ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆಯೇ ನೀರಿನ ವಿಚಾರವಾಗಿ ಜಗಳ ನಡೆದಿದೆ. ಅದೇನು ಎನ್ನುವ ವಿವರ ನೋಡೋಣ.

ರಾಜ್ಯ ಕಾಂಗ್ರೆಸ್ ಸರ್ಕಾರವು ನೆರೆಯ ತೆಲಂಗಾಣಕ್ಕೆ ನೀರು ಬಿಟ್ಟಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಬಿಜೆಪಿ - ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದೆ. ಇದಕ್ಕೆ ಕಾಂಗ್ರೆಸ್ ಪಕ್ಷವು 7 ಪ್ರಶ್ನೆಗಳನ್ನು ಕೇಳಿದೆ. ಅಲ್ಲದೆ ನಾವು ಜನಪರ ಆಡಳಿತ ನೀಡುತ್ತಿದ್ದೇವೆ ಎಂದೂ ಕಾಂಗ್ರೆಸ್ ಸರ್ಕಾರ ಹೇಳಿಕೊಂಡಿದೆ.
ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತವನ್ನು ಸಹಿಸದೆ ಹೊಟ್ಟೆ ಉರಿಯಿಂದ ಕಪೋಕಲ್ಪಿತ ಕಥೆಗಳನ್ನು ಸೃಷ್ಟಿಸಿ ನಂಜು ಕಾರುತ್ತಿರುವ ರಾಜ್ಯ ಬಿಜೆಪಿ ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ, ಅನುದಾನ ಕಡಿತದ ಅನ್ಯಾಯದ ಬಗ್ಗೆ ಏಕೆ ತುಟಿ ಬಿಚ್ಚುತ್ತಿಲ್ಲವೇಕೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

* ಮುಂದುವರಿದು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೆರೆ, ಬರ ಪರಿಹಾರದಲ್ಲಿ ಮೋಸವಾದಾಗ ಏಕೆ ಬಾಯ್ತೆರೆಯಲಿಲ್ಲ?
* ಜಿ.ಎಸ್.ಟಿ ಪರಿಹಾರದಲ್ಲಿ ದ್ರೋಹ ಬಗೆದಾಗ ಏಕೆ ಕನ್ನಡಿಗರು ನೆನಪಾಗಲಿಲ್ಲ?
* ಪಿ.ಎಂ ಕೇರ್ಸ್ ಫಂಡ್ನಲ್ಲಿ ಮೋಸವಾದಾಗ ಧಮ್ಮು ತಾಕತ್ತು ತೋರಿಸಲಿಲ್ಲ?
* ಮೇಕೆದಾಟು, ಕಳಸಾ ಬಂಡೂರಿ, ಭದ್ರಾಮೇಲ್ದಂಡೆ ಯೋಜನೆಯಂತಹ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಬಳಿ ಏಕೆ ಧ್ವನಿ ಎತ್ತಲಿಲ್ಲ?
ಕೇರಳ, ತಮಿಳುನಾಡು, ತೆಲಂಗಾಣಕ್ಕೆ ಉಪಕಾರಿಯಾಗಿ, ಕರ್ನಾಟಕಕ್ಕೆ ದ್ರೋಹ ಬಗೆದಿರುವ ನಾಡದ್ರೋಹಿ @INCKarnataka !!#CongressFailsKarnataka pic.twitter.com/hF2lLTK7Pq
— BJP Karnataka (@BJP4Karnataka) March 4, 2025
* ನೀವು ಅಧಿಕಾರದಲ್ಲಿದ್ದಾಗ ನಿಮ್ಮದೇ ಪಕ್ಷದ ಶಾಸಕರಾಗಿದ್ದ ಶಿವರಾಜ್ ಪಾಟೀಲ್ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುತ್ತೇವೆ ಎಂದು ನಾಡದ್ರೋಹಿ ಹೇಳಿಕೆ ಕೊಟ್ಟಾಗಲೂ ನೀವು ಮೌನವಹಿಸಿದ್ದೇಕೆ?
* ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಂದಿನ ನಿಮ್ಮದೇ ಸರ್ಕಾರ ಅಗತ್ಯ ಅನುದಾನವನ್ನೇಕೆ ಕೊಡಲಿಲ್ಲ?
* ಕೋತಿ ತಾನು ತಿಂದು ಮೇಕೆ ಮೂತಿ ಒರೆಸಿತು ಎಂಬ ಮಾತಿನಂತೆ ನಾಡು, ನುಡಿ, ನೆಲ, ಜಲದ ರಕ್ಷಣೆಯ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲದ ಬಿಜೆಪಿಗರು ಮೋದಿಯನ್ನು ಮೆಚ್ಚಿಸುವ ಭರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ಮರೆತು ನಾಡಿಗೆ ದ್ರೋಹ ಬಗೆದು, ಈಗ ವಿಶ್ವಮಟ್ಟದಲ್ಲಿ ಶ್ಲಾಘನೆ ಪಡೆದ ಗ್ಯಾರಂಟಿ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿರುವುದನ್ನು ನಾಡಿನ ಜನತೆ ಎಂದಿಗೂ ಒಪ್ಪುವುದಿಲ್ಲ ಎಂದು ಹೇಳಿದೆ. ಇದೀಗ ಈ ಎರಡೂ ಟ್ವೀಟ್ಗಳು ವೈರಲ್ ಆಗಿವೆ.
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications