Get Updates
Get notified of breaking news, exclusive insights, and must-see stories!

ಇಂದು ಬಿಜೆಪಿ-ದಳ ಮೈತ್ರಿ ದಳದ ಮೊದಲ ರಾಜ್ಯಮಟ್ಟದ ಸಭೆ: ಯಾರೆಲ್ಲಾ ಭಾಗಿ? ಯಾವ ವಿಷಯ ಚರ್ಚೆ?

ಬೆಂಗಳೂರು ಮಾರ್ಚ್ 29: ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡು ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಸ್ಪರ್ಧಿಸಲು ಮುಂದಾಗಿದೆ. ಈ ನಡುವೆ ಮೊದಲ ರಾಜ್ಯಮಟ್ಟದ ಸಭೆ ನಡೆಸಲು ಬಿಜೆಪಿ-ದಳ ಮೈತ್ರಿ ಪಕ್ಷಗಳು ನಿರ್ಧರಿಸಿವೆ. ಹೀಗಾಗಿ ಇಂದು ಉಭಯ ಪಕ್ಷಗಳ ನಾಯಕರ ಸಭೆ ನಡೆಯಲಿದೆ.

ಇಂದು ಬೆಳಗ್ಗೆ 11 ಗಂಟೆಗೆ ಖಾಸಗಿ ಹೊಟೇಲ್‌ನಲ್ಲಿ ಸಭೆ ನಿಗದಿ ಮಾಡಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರ್‌ವಾಲ್‌ ಭಾಗವಹಿಸಲಿದ್ದಾರೆ.

Karnataka BJP-Dal alliance parties to hold first state-level meeting today

ಯಾವೆಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ?

*ಸ್ಥಳೀಯ ನಾಯಕರ ವಿರೋಧ ಶಮನ ಮಾಡುವುದು ಹೇಗೆ?

*ಎರಡೂ ಪಕ್ಷಗಳ ಕಾರ್ಯಕರ್ತರನ್ನು ಹೇಗೆ ಒಗ್ಗೂಡಿಸಬೇಕು?

* ಪ್ರಚಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸದವರ ಓಲೈಕೆ ಹೇಗೆ?

*ಈ ವಿಚಾರಗಳ ಬಗ್ಗೆ ಉಭಯ ನಾಯಕರ ನಡುವೆ ಚರ್ಚೆ

ಸಭೆಯಲ್ಲಿ ಯಾರೆಲ್ಲಾ ಭಾಗಿ?

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸೇರಿದಂತೆ ಉಭಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್‌ನ ಕಾರ್ಯತಂತ್ರಕ್ಕೆ ಪ್ರತಿಯಾಗಿ ಮೈತ್ರಿ ಪಕ್ಷವು ರಣತಂತ್ರ ರೂಪಿಸುವ ಕುರಿತು ಚರ್ಚೆಗಳು ನಡೆಯಲಿವೆ. ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಜಂಟಿ ಕೋರ್‌ ಕಮಿಟಿ ಸಭೆಗಳನ್ನು ನಡೆಸಲಾಗುತ್ತಿದೆ. ಆದರೆ ರಾಜ್ಯ ಮಟ್ಟದ ಜಂಟಿ ಕೋರ್‌ ಕಮಿಟಿ ಸಭೆಯು ಇದೇ ಮೊದಲ ಬಾರಿಗೆ ನಡೆಸಲಾಗುತ್ತಿದೆ.

Karnataka BJP-Dal alliance parties to hold first state-level meeting today

ಸಭೆಯಲ್ಲಿ ಎರಡು ಪಕ್ಷಗಳ ಕಾರ್ಯಕರ್ತರನ್ನು ಹೇಗೆ ಜೋಡಿಸಬೇಕು? ಸ್ಥಳೀಯ ನಾಯಕರ ವಿರೋಧ ಶಮನ ಮಾಡುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ಅಲ್ಲದೇ ಕೆಲವು ಕ್ಷೇತ್ರಗಳಲ್ಲಿ ಪ್ರಮುಖ ಮುಖಂಡರು ಮೈತ್ರಿ ಪ್ರಚಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ವೈಯಕ್ತಿಕ ಹಿತಾಸಕ್ತಿಯನ್ನು ಬದಿಗೊತ್ತಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಸಹಕಾರ ನೀಡುವ ಸಲಹೆ-ಸೂಚನೆ ನೀಡುವ ಕುರಿತು ಸಹ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ. ಹಾಸನ ಕ್ಷೇತ್ರದಲ್ಲಿ ಬಿಜೆಪಿಯ ಕೆಲವರು ಜೆಡಿಎಸ್‌ಗೆ ವಿರೋಧ ಮಾಡುತ್ತಿದ್ದು, ಇದನ್ನು ಶಮನ ಮಾಡಲು ಕಾರ್ಯತಂತ್ರ ರೂಪಿಸಲಾಗುತ್ತದೆ.

ಯಾವ ಕ್ಷೇತ್ರಗಳ ಬಗ್ಗೆ ಚರ್ಚೆ?

ತುಮಕೂರು ಕ್ಷೇತ್ರದಲ್ಲಿ ಕಾಮಗ್ರೆಸ್‌ ವಿರುದ್ಧ ರಣತಂತ್ರ ಹೆಣೆಯುವ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ಮಂಡ್ಯ ಕ್ಷೇತ್ರದಲ್ಲಿ ಹಾಲಿ ಸಂಸದೆ ಸುಮಲತಾ ಅವರಿಗೆ ಈ ಬಾರಿ ಬಿಜೆಪಿಯಿಂದ ಟಿಕೆಟ್ ತಪ್ಪಿದೆ. ಇದರಿಂದ ಸುಮಲತಾ ಅವರು ಮುನಿಸಿಕೊಂಡಿದ್ದು, ಅವರ ಮನವೊಲಿಕೆ ಮಾಡುವ ಬಗ್ಗೆ ಉಭಯ ಪಕ್ಷಗಳ ಮುಖಂಡರು ಚರ್ಚೆ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕಾಗಿ ರಾಜ್ಯದ ಹಲವೆಡೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್‌ ಕಾರ್ಯಕರ್ತರು, ನಾಯಕರು ಭಾಗವಹಿಸುವ ಕುರಿತು ಮಾತುಕತೆ ನಡೆಯಲಿದೆ. ನರೇಂದ್ರ ಮೋದಿಯವರ ಸಮಾವೇಶದಲ್ಲಿ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಭಾಗಿಯಾಗುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ಅಲ್ಲದೇ, ಮಂಡ್ಯದಲ್ಲಿ ಮೋದಿ ಸಮಾವೇಶವನ್ನು ಜಂಟಿಯಾಗಿ ಯಶಸ್ವಿ ಮಾಡುವ ಕುರಿತು ಸಹ ಸಮಾಲೋಚನೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.

ರಾಜ್ಯದ ಹಲವು ಕ್ಷೇತ್ರದಲ್ಲಿ ಜೆಡಿಎಸ್‌ ಮತಗಳು ಬಿಜೆಪಿಗಿಂತಲೂ ಹೆಚ್ಚಿವೆ. ಅಂತಹ ಕ್ಷೇತ್ರದಲ್ಲಿ ಸ್ಥಳೀಯ ನಾಯಕರು ಸಮಾವೇಶದಲ್ಲಿ ಭಾಗಿಯಾಗಲು ಅನುವು ಮಾಡಿಕೊಡುವ ಕುರಿತು ಚರ್ಚೆ ನಡೆಯಲಿವೆ. ಇದರಿಂದ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದಂತಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಮಣಿಸಲು ಯಾವೆಲ್ಲಾ ಕಾರ್ಯತಂತ್ರಗಳನ್ನು ರೂಪಿಸಬೇಕೋ ಆ ಅಂಶಗಳ ಕುರಿತ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+