ಸಿದ್ದರಾಮಯ್ಯ ಸಾಹೇಬರು ಯತೀಂದ್ರ ಅವರಿಗೆ "ಟಿಪ್ಪು" ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ..!
ಬೆಂಗಳೂರು,ಡಿಸೆಂಬರ್ 16: ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ಕೊಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರನ್ನು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು ಎಂದು ಕರ್ನಾಟಕ ಬಿಜೆಪಿ ಪಟ್ಟಿಯನ್ನ ಬಿಡುಗಡೆ ಮಾಡಿದೆ.
ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ಕೊಡುತ್ತಿರುವ @siddaramaiah ಅವರು ಅವರನ್ನು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು:
— BJP Karnataka (@BJP4Karnataka) December 16, 2023
▪️ಮೈಸೂರಿನಲ್ಲಿ ಟಿಪ್ಪು ವಿಮಾನ ನಿಲ್ದಾಣ
▪️ವಿಧಾನಸೌಧಕ್ಕೆ ಟಿಪ್ಪು ಸೌಧವೆಂದು ಮರು ನಾಮಕರಣ
▪️ಮೈಸೂರು ವಿವಿಗೆ ಟಿಪ್ಪು ಹೆಸರು
▪️ಟಿಪ್ಪುವಿನ 108 ಅಡಿ ಪ್ರತಿಮೆ
▪️ಟಿಪ್ಪು…
ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್ ಮಾಡಿದ್ದು, ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಅವರಿಗೆ "ಟಿಪ್ಪು" ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ.

ಸಿಎಂ ಅಲ್ಪಸಂಖ್ಯಾತರನ್ನ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು
▪️ಮೈಸೂರಿನಲ್ಲಿ ಟಿಪ್ಪು ವಿಮಾನ ನಿಲ್ದಾಣ
▪️ವಿಧಾನಸೌಧಕ್ಕೆ ಟಿಪ್ಪು ಸೌಧವೆಂದು ಮರು ನಾಮಕರಣ
▪️ಮೈಸೂರು ವಿವಿಗೆ ಟಿಪ್ಪು ಹೆಸರು
▪️ಟಿಪ್ಪುವಿನ 108 ಅಡಿ ಪ್ರತಿಮೆ
▪️ಟಿಪ್ಪು ಮದ್ಯದ ಬಾಟಲಿ
▪️ಬಿಎಂಟಿಸಿ/ಕೆಎಸ್ಆರ್ಟಿಸಿಗೆ ಟಿಪ್ಪು ಸಾರಿಗೆ ಎಂಬ ಹೆಸರು.
ನಾಡ ವಿರೋಧಿ, ಕನ್ನಡ ವಿರೋಧಿ, ಹಿಂದೂ ವಿರೋಧಿ, ಮತಾಂಧ ಟಿಪ್ಪುವನ್ನು ಕಾಂಗ್ರೆಸ್ ಸರ್ಕಾರ ಪಠ್ಯಪುಸ್ತಕದಲ್ಲಿ ಸೇರಿಸುವ ಮೂಲಕ ಈ ನಾಡಿನ ಮಕ್ಕಳ ಬ್ರೈನ್ ವಾಶ್ ಮಾಡುತ್ತಿದೆ. ನಮ್ಮ ಭಾರತೀಯ ಪರಂಪರೆಯನ್ನೇ ಅಳಿಸಿ ಹಾಕಿ ಪಾರ್ಸಿ ಪರಂಪರೆಗೆ ನಾಂದಿ ಹಾಡಿದ್ದ ಕ್ರೂರಿಯನ್ನು ಸಿದ್ದರಾಮಯ್ಯ ಅವರು ಕೇವಲ ತುಷ್ಟೀಕರಣಕ್ಕೆ ತಲೆ ಮೇಲೆ ಹೊತ್ತು ಮೆರೆಸುತ್ತಿದ್ದಾರೆ. ಪರಿಣಾಮ ಮಕ್ಕಳ ಭವಿಷ್ಯಕ್ಕೆ ಅನಾವಶ್ಯಕವಾದ ಟಿಪ್ಪುವಿನ ಪಠ್ಯವನ್ನು ತುಂಬುವುದಲ್ಲದೆ ಮೊಘಲರೇ ಈ ದೇಶದ ದೊರೆಗಳೆಂದು ಬಿಂಬಿಸಲಾಗುತ್ತಿದೆ. ಸುಳ್ಳು ಇತಿಹಾಸವನ್ನು ಮಕ್ಕಳಿಗೆ ನೀಡಿ ಕಾಂಗ್ರೆಸ್ ತನ್ನ ಎಡಬಿಡಂಗಿ ಸಿದ್ಧಾಂತವನ್ನು ಹೇರುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications