ಸಿದ್ದರಾಮಯ್ಯ ಸಾಹೇಬರು ಯತೀಂದ್ರ ಅವರಿಗೆ "ಟಿಪ್ಪು" ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ..!
ಬೆಂಗಳೂರು,ಡಿಸೆಂಬರ್ 16: ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ಕೊಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರನ್ನು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು ಎಂದು ಕರ್ನಾಟಕ ಬಿಜೆಪಿ ಪಟ್ಟಿಯನ್ನ ಬಿಡುಗಡೆ ಮಾಡಿದೆ.
ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ಕೊಡುತ್ತಿರುವ @siddaramaiah ಅವರು ಅವರನ್ನು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು:
— BJP Karnataka (@BJP4Karnataka) December 16, 2023
▪️ಮೈಸೂರಿನಲ್ಲಿ ಟಿಪ್ಪು ವಿಮಾನ ನಿಲ್ದಾಣ
▪️ವಿಧಾನಸೌಧಕ್ಕೆ ಟಿಪ್ಪು ಸೌಧವೆಂದು ಮರು ನಾಮಕರಣ
▪️ಮೈಸೂರು ವಿವಿಗೆ ಟಿಪ್ಪು ಹೆಸರು
▪️ಟಿಪ್ಪುವಿನ 108 ಅಡಿ ಪ್ರತಿಮೆ
▪️ಟಿಪ್ಪು…
ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್ ಮಾಡಿದ್ದು, ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಅವರಿಗೆ "ಟಿಪ್ಪು" ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ.

ಸಿಎಂ ಅಲ್ಪಸಂಖ್ಯಾತರನ್ನ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು
▪️ಮೈಸೂರಿನಲ್ಲಿ ಟಿಪ್ಪು ವಿಮಾನ ನಿಲ್ದಾಣ
▪️ವಿಧಾನಸೌಧಕ್ಕೆ ಟಿಪ್ಪು ಸೌಧವೆಂದು ಮರು ನಾಮಕರಣ
▪️ಮೈಸೂರು ವಿವಿಗೆ ಟಿಪ್ಪು ಹೆಸರು
▪️ಟಿಪ್ಪುವಿನ 108 ಅಡಿ ಪ್ರತಿಮೆ
▪️ಟಿಪ್ಪು ಮದ್ಯದ ಬಾಟಲಿ
▪️ಬಿಎಂಟಿಸಿ/ಕೆಎಸ್ಆರ್ಟಿಸಿಗೆ ಟಿಪ್ಪು ಸಾರಿಗೆ ಎಂಬ ಹೆಸರು.
ನಾಡ ವಿರೋಧಿ, ಕನ್ನಡ ವಿರೋಧಿ, ಹಿಂದೂ ವಿರೋಧಿ, ಮತಾಂಧ ಟಿಪ್ಪುವನ್ನು ಕಾಂಗ್ರೆಸ್ ಸರ್ಕಾರ ಪಠ್ಯಪುಸ್ತಕದಲ್ಲಿ ಸೇರಿಸುವ ಮೂಲಕ ಈ ನಾಡಿನ ಮಕ್ಕಳ ಬ್ರೈನ್ ವಾಶ್ ಮಾಡುತ್ತಿದೆ. ನಮ್ಮ ಭಾರತೀಯ ಪರಂಪರೆಯನ್ನೇ ಅಳಿಸಿ ಹಾಕಿ ಪಾರ್ಸಿ ಪರಂಪರೆಗೆ ನಾಂದಿ ಹಾಡಿದ್ದ ಕ್ರೂರಿಯನ್ನು ಸಿದ್ದರಾಮಯ್ಯ ಅವರು ಕೇವಲ ತುಷ್ಟೀಕರಣಕ್ಕೆ ತಲೆ ಮೇಲೆ ಹೊತ್ತು ಮೆರೆಸುತ್ತಿದ್ದಾರೆ. ಪರಿಣಾಮ ಮಕ್ಕಳ ಭವಿಷ್ಯಕ್ಕೆ ಅನಾವಶ್ಯಕವಾದ ಟಿಪ್ಪುವಿನ ಪಠ್ಯವನ್ನು ತುಂಬುವುದಲ್ಲದೆ ಮೊಘಲರೇ ಈ ದೇಶದ ದೊರೆಗಳೆಂದು ಬಿಂಬಿಸಲಾಗುತ್ತಿದೆ. ಸುಳ್ಳು ಇತಿಹಾಸವನ್ನು ಮಕ್ಕಳಿಗೆ ನೀಡಿ ಕಾಂಗ್ರೆಸ್ ತನ್ನ ಎಡಬಿಡಂಗಿ ಸಿದ್ಧಾಂತವನ್ನು ಹೇರುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications