ರಾಜ್ಯ ಬಿಜೆಪಿ ನಾಯಕರಿಗೆ ತೇಜಸ್ವಿನಿ ಅನಂತ್ ಕುಮಾರ್ 'ನೀತಿಪಾಠ'
ಬೆಂಗಳೂರು, ಆಗಸ್ಟ್ 27: ಸಚಿವ ಸಂಪುಟ ರಚನೆ, ಖಾತೆ ಹಂಚಿಕೆ, ಉಪಮುಖ್ಯಮಂತ್ರಿ ಹುದ್ದೆಯ ಸೃಷ್ಟಿಯ ನಂತರ, ರಾಜ್ಯ ಬಿಜೆಪಿ ಮುಖಂಡರಲ್ಲಿ ಅಸಮಾಧಾನದ ಹೊಗೆ, ಪ್ರತ್ಯಕ್ಷವಾಗಿ ಇಲ್ಲದಿದ್ದರೂ, ಪರೋಕ್ಷವಾಗಿ ಕಾಣುತ್ತಿದೆ.
ಸಿಗಬೇಕಾದ ಮರ್ಯಾದೆ ಸಿಗದ ಸಚಿವರ ಬೆಂಬಲಿಗರು ಸಿಟ್ಟಾಗಿದ್ದಾರೆ. ಸಂಬಂಧಪಟ್ಟ ಮುಖಂಡರ ನಿವಾಸದ ಮುಂದೆ ಪ್ರತಿಭಟನೆ ನಡೆಸುವುದನ್ನು ಬಿಟ್ಟು, ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ, ಸಾರ್ವಜನಿಕರು ತೊಂದರೆ ಪಡುವಂತಾಗಿದೆ.
ಬಿಜೆಪಿ ಮುಖಂಡರ ಆಂತರಿಕ ಬೇಗುದಿಯನ್ನು ಪರೋಕ್ಷವಾಗಿ ಉಲ್ಲೇಖಿಸಿ, ಬಿಜೆಪಿ ನಾಯಕಿ, ಅದಮ್ಯ ಚೇತನ ಟ್ರಸ್ಟ್ ಮುಖ್ಯಸ್ಥೆಯಾಗಿರುವ ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್ ಒಂದನ್ನು ಮಾಡಿದ್ದಾರೆ.
Recommended Video

ಅವರು ಮಾಡಿರುವ ಟ್ವೀಟ್ ಹೀಗಿದೆ, "370 ಮತ್ತು 35ಎ ತೆಗೆದುಹಾಕಿ ಅಖಂಡ ಭಾರತದ ಕನಸನ್ನು ನನಸು ಮಾಡುತ್ತಿರುವ ಮೋದಿ ನಾಯಕತ್ವವನ್ನು ಗಟ್ಟಿಗೊಳಿಸಲು ಕರ್ನಾಟಕ ಭಾಜಪಾದ ಎಲ್ಲಾ ಕಾರ್ಯಕರ್ತರು ನಿಸ್ವಾರ್ಥವಾಗಿ ಕೆಲಸ ಮಾಡೋಣ, ಒಳಜಗಳ ಬದಿಗಿಟ್ಟು ಭಾರತವನ್ನು ವಿಶ್ವಗುರು ವಾಗಿಸಲು ಪ್ರತಿಜ್ಞೆ ಮಾಡೋಣ. @BJP4Karnataka"
ತೇಜಸ್ವಿನಿ ಅನಂತ್ ಕುಮಾರ್ ಅವರ ಈ ಮೇಲಿನ ಟ್ವೀಟ್ ನಲ್ಲಿ, ಬಿಜೆಪಿಯೊಳಗೆ ಎಲ್ಲವೂ ಸರಿಯಿಲ್ಲ ಎನ್ನುವುದಂತೂ ಅತ್ಯಂತ ಸ್ಪಷ್ಟವಾಗುತ್ತದೆ. ಖಾತೆ ಹಂಚಿಕೆ, ಮತ್ತಿತ್ತರ ಸಮಸ್ಯೆಗಳು, ಮುಂದಿನ ದಿನಗಳಲ್ಲಿ ಸ್ಪೋಟಗೊಳ್ಳಲಿದೆಯೋ ಅಥವಾ ಅಮಿತ್ ಶಾ, ಎಲ್ಲವನ್ನೂ ಹಿಸುಕಿ ಹಾಕಲಿದ್ದಾರೋ ಎನ್ನುವುದನ್ನು ಕಾದು ನೋಡಬೇಕಾಗಿದೆ.
ಮಾಜಿ ಸಚಿವ, ಕುಂದಗೋಳ ಕ್ಷೇತ್ರದ "ಕಾಂಗ್ರೆಸ್ ಮುಖಂಡ ಸಿ.ಎಸ್. ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರದ ಒತ್ತಡವೇ ಕಾರಣ" ಎಂದು ಬಿಜೆಪಿ ಮುಖಂಡರು ಹೇಳಿದ್ದರು. ಅದಕ್ಕೆ, ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದರು.
"ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರದ ಕಿರುಕುಳ ಕಾರಣ ಎಂದು ನಾಲಗೆ ಹರಿಬಿಟ್ಟಿರುವ ಬಿಜೆಪಿ ನಾಯಕರೇ, ದಿ.ಅನಂತಕುಮಾರ್ ಪತ್ನಿಗೆ ನೀಡಿರುವ ಕಿರುಕುಳವನ್ನು ನೆನಪು ಮಾಡಿಕೊಳ್ಳಿ. ಎಲ್ಲವನ್ನೂ ಸಹಿಸಿಕೊಂಡಿರುವ ಧೈರ್ಯವಂತ ಹೆಣ್ಣುಮಗಳು ತೇಜಸ್ವಿನಿಯವರು ಬಾಯಿ ಬಿಟ್ಟರೆ ನಿಮ್ಮ ಬಣ್ಣ ಬಯಲಾಗಲಿದೆ" ಎಂದು ಸಿದ್ದರಾಮಯ್ಯ, ಬಿಜೆಪಿ ಮುಖಂಡರಿಗೆ ಎಚ್ಚರಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications