Get Updates
Get notified of breaking news, exclusive insights, and must-see stories!

ಮಜಾ ಮಾಡಲು ಕಾಂಗ್ರೆಸ್‌ ಶಾಸಕರು ಸಿಂಗಾಪುರ, ಮಲೇಷ್ಯಾ ಹೋಗುವ ಸಿದ್ಧತೆಯಲ್ಲಿದ್ದಾರೆ

ಬೆಂಗಳೂರು, ಅಕ್ಟೋಬರ್‌ 30: ರಾಜ್ಯವನ್ನು ಸಮಸ್ಯೆಗಳ ಸರಮಾಲೆಯಲ್ಲಿ ಸಿಲುಕಿಸಿ ಕಾಂಗ್ರೆಸ್‌ ಶಾಸಕರು ಮಜಾ ಮಾಡಲು ಸಿಂಗಾಪುರ, ಮಲೇಷ್ಯಾ, ದುಬೈಗೆ ಪ್ರವಾಸ ಹೋಗುವ ಸಿದ್ಧತೆಯಲ್ಲಿದ್ದಾರೆ ಎಂದು ಬಿಜೆಪಿ ಹೇಳಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ, ಬರ ಪರಿಸ್ಥಿತಿ ಅಧ್ಯಯನಕ್ಕೆ ಬಿಜೆಪಿಯ 17 ತಂಡಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡಲಿವೆ ಎಂದು ಹೇಳಿದ್ದು, ಶಾಸಕರು ವಿಮಾನ ಹತ್ತುವ ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಎಂದು ಬಿಜೆಪಿ ಪ್ರಶ್ನೆಗಳನ್ನ ಮುಂದಿಟ್ಟಿದೆ.

Karnataka BJP lashed out at Congress MLAs
  • ಬರ ನಿರ್ವಹಣೆಗಾಗಿ 500 ಕೋಟಿ ಮಾತ್ರವೇ ಉಳಿದಿರುವುದು ನಿಜವೇ?
  • ಮೇವು ಕೊರತೆ ನಿವಾರಣೆಗೆ ಏನು ಕ್ರಮ ಕೈಗೊಳ್ಳಲಾಗಿದೆ?
  • ಕುಡಿಯುವ ನೀರಿನ ಸಮಸ್ಯೆಯ ಎದುರಾಗದಿರಲು ಕೈಗೊಂಡ ಕ್ರಮಗಳೇನು?
  • ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯದ ಸ್ಥಿತಿಗತಿ ಅರ್ಥಮಾಡಿಸಲು ಇದುವರೆಗೆ ಏನು ಮಾಡಲಾಗಿದೆ?
  • ಅಧಿಕಾರಕ್ಕೆ ಬಂದು ಐದು ತಿಂಗಳಾದರೂ ಶಾಸಕರು ತಮ್ಮ ಕ್ಷೇತ್ರಗಳಿಗೆ ಯಾವುದೇ ಅನುದಾನ ಕೊಡಿಸಿಲ್ಲವೇಕೆ?

ಇವುಗಳಿಗೆ ಉತ್ತರಿಸದೆ ವಿದೇಶಕ್ಕೆ ಹಾರುತ್ತಿರುವ ಕಾಂಗ್ರೆಸ್‌ ಶಾಸಕರ ಗುರಿ ಭ್ರಷ್ಟಚಾರ ಮಾಡಿ ತಮ್ಮ ಮಂಚದ ಅಡಿಯಲ್ಲಿ ಹಣ ಪೇರಿಸುವುದಷ್ಟೇ ಎಂದು ಬಿಜೆಪಿ ಹೇಳಿದೆ. ಸಿದ್ದರಾಮಯ್ಯರವರು ತಮ್ಮ ವೈಫಲ್ಯಗಳನ್ನು ಮರೆಮಾಚಲು ಜನರ ಗಮನ ಬೇರೆಡೆ ಸೆಳೆಯುವ ಸರ್ಕಸ್ಸಿನಲ್ಲಿ ತೊಡಗಿದ್ದಾರೆ. ಜನರ ಗಮನವನ್ನು ಉದ್ದೇಶಪೂರ್ವಕವಾಗಿ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ.

ಕಳೆದ ಒಂಭತ್ತು ವರ್ಷಗಳಲ್ಲಿ ದೇಶದ ಅಭಿವೃದ್ಧಿಯ ನಕಾಶೆಯನ್ನೇ ಬದಲಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಬಲಿಷ್ಠ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕರ್ನಾಟಕವನ್ನು ಕಡೆಗಣಿಸಿದೆ ಎಂಬ ಆರೋಪವೇ ಹಾಸ್ಯಾಸ್ಪದ. ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿರುವ ಅಂಶಗಳಲ್ಲಿ ಸುಳ್ಳುಗಳೇ ತುಂಬಿವೆ ಹೊರತು ಗುಲಗಂಜಿಯಷ್ಟೂ ಸತ್ಯಾಂಶವಿಲ್ಲ ಎಂದು ಬಿಜೆಪಿ ಕುಟುಕಿದೆ.

Karnataka BJP lashed out at Congress MLAs

15ನೇ ಹಣಕಾಸು ಮಧ್ಯಂತರ ವರದಿಯಲ್ಲಿ ಕರ್ನಾಟಕಕ್ಕೆ ₹5495 ಕೋಟಿ ವಿಶೇಷ ಅನುದಾನವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಿರಸ್ಕರಿಸಿದ್ದಾರೆಂದು ಸಿದ್ದರಾಮಯ್ಯರವರು ಹೇಳಿರುವುದೇ ಅತ್ಯಂತ ದೊಡ್ಡ ಸುಳ್ಳು, ಅಸಲಿಗೆ 15ನೇ ಹಣಕಾಸು ವರದಿಯಲ್ಲಿ ಈ ರೀತಿಯ ಅಂಶಗಳೇ ಪ್ರಸ್ತಾಪವಾಗಿಲ್ಲ. ತಮ್ಮ ಆಸ್ಥಾನ ಕಲಾವಿದರಿಂದ, ವಂಧಿಮಾಗದರಿಂದ, ಹೊಗಳು ಭಟ್ಟರಿಂದ ತಾವೊಬ್ಬ ಶ್ರೇಷ್ಠ ಆರ್ಥಿಕ ತಜ್ಞ ಎಂದು ಕರೆಸಿಕೊಳ್ಳುವ, 13 ಬಜೆಟ್‌ ಮಂಡಿಸಿದ್ದೇನೆಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುವ ಸಿದ್ದರಾಮಯ್ಯರವರಿಗೆ ಸಾರ್ವಜನಿಕ ಹಣಕಾಸಿನ ಸ್ಥಿತಿಗತಿಯ ಬಗ್ಗೆ ಕನಿಷ್ಟ ಜ್ಞಾನವಿಲ್ಲದಿರುವುದು ಅತ್ಯಂತ ಬೇಸರದ ಸಂಗತಿ!!

ಕಾಂಗ್ರೆಸ್‌ ಆಡಳಿತ ಹಿಡಿದ ರಾಜ್ಯಗಳಲ್ಲೆಲ್ಲಾ ಅಲ್ಲಿನ ಅರ್ಥಿಕತೆ ಅಧೋಗತಿಗಿಳಿದಿದೆ. ಈ ಬಗ್ಗೆ ಅಂಕಿ-ಅಂಶಗಳೇ ಸತ್ಯ ಹೇಳುತ್ತವೆ. ಆರ್ಥಿಕ ತಿಳುವಳಿಕೆ ಇರುವ ಯಾರಿಗೇ ಆದರೂ ತಿಳಿಯುವ ಈ ಸತ್ಯ ಸಿದ್ದರಾಮಯ್ಯರವರ ಕಣ್ಣಿಗೇ ಬೀಳುತ್ತಿಲ್ಲ ಎಂಬುದೇ ಬೃಹನ್ನಾಟಕ. ಮುಖ್ಯಮಂತ್ರಿ ಸ್ಥಾನದ ಜವಾಬ್ದಾರಿ ಹೊತ್ತವರು ಈ ರೀತಿ ಬಹಿರಂಗವಾಗಿ ಸುಳ್ಳು ನುಡಿಯುವುದು ಎಷ್ಟರ ಮಟ್ಟಿಗೆ ಸರಿ..? ಎಂದು ಬಿಜೆಪಿ ಪ್ರಶ್ನಿಸಿದೆ.

ಸಿದ್ದರಾಮಯ್ಯರವರು ಕೇಂದ್ರ ಸರ್ಕಾರದ ಮೇಲೆ ನಿರಂತರ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಹಿಂದಿನ ಅಸಲಿಯತ್ತೇ ಬೇರೆ. ಕರ್ನಾಟಕದಲ್ಲಿ ಚುನಾವಣೆಯನ್ನು ಗೆಲ್ಲಬೇಕೆಂಬ ಏಕೈಕ ಉದ್ದೇಶದಿಂದ ಬೇಕಾಬಿಟ್ಟಿ ಸುಳ್ಳುಗಳನ್ನು ಹೇಳಿ, ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೇನೋ ಬಂದರು, ಆದರೆ ಅವರು ನೀಡಿದ ಭರವಸೆಗಳನ್ನು ಈಡೇರಿಸಲು ಸಂಪೂರ್ಣ ವಿಫಲರಾಗಿದ್ದಾರೆ.

ಹಾಗಾಗಿ ಕರ್ನಾಟಕದ ಇತಿಹಾಸದಲ್ಲಿ ಹಿಂದೆಂದೂ ಕಂಡು ಕೇಳರಿಯದಂಥ ಆಡಳಿತ ವಿರೋಧಿ ಅಲೆ ಸಿದ್ದರಾಮಯ್ಯರವರ ಸರ್ಕಾರದ ವಿರುದ್ಧ ಐದೇ ತಿಂಗಳಲ್ಲಿ ಎದ್ದಿದೆ. ಈ ಆಡಳಿತ ವಿರೋಧಿ ಅಲೆಯನ್ನು ಮರೆಮಾಚಲು ಅವರು ಹೂಡಿರುವ ಹಲವು ತಂತ್ರಗಳ ಪೈಕಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿರುವುದೂ ಒಂದು. ಕೈಲಾಗದವರು ಹುಲಿ ಉಗುರಿನಿಂದ ಮೈ ಪರಿಚಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+