ಅನಕ್ಷರಸ್ಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಮೋಘ ಸಾಧನೆಗಳು
ಬೆಂಗಳೂರು,ಜನವರಿ 02: ಅಧಿಕಾರಕ್ಕೆ ಬಂದ ದಿನದಿಂದ ಅನಕ್ಷರಸ್ಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಮೋಘ ಸಾಧನೆಗಳು ಎಂದು ಕರ್ನಾಟಕ ಬಿಜೆಪಿ ಪಟ್ಟಿಯನ್ನ ಟ್ವೀಟ್ ಮೂಲಕ ಬಿಡುಗಡೆ ಮಾಡಿದೆ. ಅಪ್ರಯೋಜಕ ಅಸಮರ್ಥರ ಕೈಗೆ ಶಿಕ್ಷಣ ಇಲಾಖೆಯನ್ನು ಕೊಟ್ಟರೆ ಏನಾಗುತ್ತದೆ ಅನ್ನುವುದಕ್ಕೆ ಈ ಪ್ರಕರಣಗಳೇ ಸಾಕ್ಷಿ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.
ಅಧಿಕಾರಕ್ಕೆ ಬಂದ ದಿನದಿಂದ ಅನಕ್ಷರಸ್ಥ ಶಿಕ್ಷಣ ಸಚಿವ @Madhu_Bangarapp ಅವರ ಅಮೋಘ ಸಾಧನೆಗಳು:
— BJP Karnataka (@BJP4Karnataka) January 2, 2024
▪ ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಕ್ಲೀನ್
▪ ಚೆಕ್ ಬೌನ್ಸ್ ಮಾಡಿಸಿ ವಂಚನೆ
▪ ಪಠ್ಯ ಪರಿಷ್ಕರಣೆ ಮೂಲಕ ಎಡಬಿಡಂಗಿ ಸಿದ್ಧಾಂತ ಹೇರಿಕೆ
▪ ಮೊಟ್ಟೆ ವಿತರಣೆ ಶಿಕ್ಷಕರ ಜೇಬಿಗೆ ಕತ್ತರಿ
▪ ಅಪಾಯದ ಸ್ಥಿತಿಯಲ್ಲಿ ಶಾಲಾ ಕಟ್ಟಡಗಳು…

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಮೋಘ ಸಾಧನೆಗಳು
▪ ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಕ್ಲೀನ್
▪ ಚೆಕ್ ಬೌನ್ಸ್ ಮಾಡಿಸಿ ವಂಚನೆ
▪ ಪಠ್ಯ ಪರಿಷ್ಕರಣೆ ಮೂಲಕ ಎಡಬಿಡಂಗಿ ಸಿದ್ಧಾಂತ ಹೇರಿಕೆ
▪ ಮೊಟ್ಟೆ ವಿತರಣೆ ಶಿಕ್ಷಕರ ಜೇಬಿಗೆ ಕತ್ತರಿ
▪ ಅಪಾಯದ ಸ್ಥಿತಿಯಲ್ಲಿ ಶಾಲಾ ಕಟ್ಟಡಗಳು
ಇನ್ನೊಂದು ಟ್ವೀಟ್ ಮಾಡಿರುವ ಬಿಜೆಪಿ,ರಾಜ್ಯದಲ್ಲಿ ಭೀಕರ ಬರಗಾಲದ ಪರಿಣಾಮ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರ ಹಿತಕ್ಕಾಗಿ 10 ಸಾವಿರ ಕೋಟಿ ನೀಡುತ್ತೇವೆ ಎಂದು ಹೇಳುತ್ತಾರೆ, 1 ಸಾವಿರ ಕೋಟಿ ಬಿಡುಗಡೆ ಮಾಡುತ್ತಾರೆ. ಆದರೆ ರೈತರ ಪರಿಹಾರ ವಿಚಾರಕ್ಕೆ ಬಂದಾಗ ಕೇಂದ್ರ ಸರ್ಕಾರ, ಮೋದಿ ಸರ್ಕಾರ ಎಂದು ಬೊಟ್ಟು ಮಾಡಿ ತೋರಿಸುತ್ತಾರೆ ಎಂದು ಕಿಡಿಕಾರಿದೆ.
ಇನ್ನೂ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದ್ದು, ಸಮಾಜವಾದದ ಸೋಗಲಾಡಿ ಮುಖವಾಡ ಹಾಕಿ ರಾಜಕೀಯಕ್ಕೆ ಬಂದ ಲಾಲು ಪ್ರಸಾದ್ ಯಾದವ್ ಬಿಹಾರದಲ್ಲಿ ಗೂಂಡಾರಾಜ್ ಸ್ಥಾಪಿಸಿದ್ದರು. ಅದೇ ಸಮಾಜವಾದದ ಮುಖವಾಡ ಹಾಕಿ ಬಂದ ಮಜಾವಾದಿ ಸಿದ್ದರಾಮಯ್ಯ ರವರು ಕರ್ನಾಟಕವನ್ನು ಗೂಂಡಾರಾಜ್ ಮಾಡಿದ್ದಾರೆ.
ಕಾಂಗ್ರೆಸ್ ಸಚಿವರು ಮತ್ತು ಶಾಕಸರು ಗೂಂಡಾಗಳನ್ನಿಟ್ಟು ದಬ್ಬಾಳಿಕೆ ಮಾಡುತ್ತಾರೆ. ಕೆಳ ಹಂತದಲ್ಲಿ ಕಾಂಗ್ರೆಸ್ ಮುಖಂಡರೇ ಗೂಂಡಾಗಳಾಗಿ ಅಖಾಡಕ್ಕೆ ಇಳಿಯುತ್ತಿದ್ದಾರೆ. ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರೇ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ನ ಗೂಂಡಾಗಳಿಗೆ ಪ್ರತ್ಯೇಕ ಕಾನೂನು ಲಾಗು ಮಾಡಲಾಗಿದೆಯೇ? ಎಂದು ಪ್ರಶ್ನಿಸಿದೆ.
ಬರಗಾಲದಿಂದ ರಾಜ್ಯದ ರೈತ ಸಮುದಾಯ ಒಟ್ಟಾಗಿ ಅನುಭವಿಸಿದ ನಷ್ಟ ₹20,000 ಕೋಟಿ. ಉತ್ತರ ಕರ್ನಾಟಕ ಭಾಗದಿಂದಂತೂ ದಾಖಲೆಯ ಪ್ರಮಾಣದಲ್ಲಿ ರೈತರು ಗುಳೆ ಹೋಗಿದ್ದೂ ಅಲ್ಲದೇ, ಅತಿಹೆಚ್ಚು ರೈತರ ಆತ್ಮಹತ್ಯೆಗಳಿಗೆ ಸಾಕ್ಷಿಯಾಗಿದೆ. ಜೀವನ್ಮರಣ ಹೋರಾಟದಲ್ಲಿ ರೈತರಿರುವಾಗ ಅವರ ಕೈ ಹಿಡಿಯುವುದು ಬಿಟ್ಟು ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಯಲ್ಲಿ ನಿರತವಾಗಿದೆ. ಇಂಥ ಪರಿಸ್ಥಿತಿಯಲ್ಲೂ ರೈತರನ್ನು ಕಡೆಗಣಿಸಿ, ಅಲ್ಪಸಂಖ್ಯಾತರಿಗೆ ₹10,000 ಕೋಟಿ ತೆಗೆದಿಟ್ಟ ಈ ಸರ್ಕಾರ ರೈತರ ಹೆಣದ ಮೇಲೆ ಓಲೈಕೆ ರಾಜಕಾರಣ ಮಾಡುತ್ತಿರುವುದು ದುರಾದೃಷ್ಟವಲ್ಲ, ದುರಂತವೇ ನಿಜ ಎಂದು ಬಿಜೆಪಿ ಹೇಳಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications