ರಾಜ್ಯದಲ್ಲಿ ಲೋಕಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ಮುಂದಿರುವ ಟಾಸ್ಕ್ಗಳು : ಬಿಜೆಪಿ
ಬೆಂಗಳೂರು, ಫೆಬ್ರವರಿ 03: ದೇಶದಲ್ಲಿ ಮತ್ತೊಮ್ಮೆ ಬಿಜೆಪಿಗೆ ದಾಖಲೆಯ 400 ಸ್ಥಾನಗಳು ಸಿಗಲಿದೆ ಎಂದು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ್ ಖರ್ಗೆ ಸಾಹೇಬರೇ ಒಪ್ಪಿಕೊಂಡಿದ್ದಾರೆ. ಆದರೂ ಕಾಂಗ್ರೆಸ್ಸಿಗರು ಅಭಿವೃದ್ಧಿ ಮಾಡುವುದು ಬಿಟ್ಟು ದಿಗಿಲು ಬಡಿದು ಮಂಗಗಳಂತೆ ಸರ್ಕಸ್ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಹೇಳಿದೆ.
ಲೋಕಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ಮುಂದಿರುವ ಟಾಸ್ಕ್ಗಳು
▪️ಕೋಮುಗಲಭೆ ಸೃಷ್ಟಿಸುವುದು
▪️ದೇಶ ವಿಭಜನೆಯ ಚರ್ಚೆ ಹುಟ್ಟು ಹಾಕುವುದು
▪️ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು
▪️ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು
▪️ಐಟಿ ಸೆಲ್ ಮೂಲಕ ಸುಳ್ಳು ಸುದ್ದಿ ಹಬ್ಬಿಸುವುದು
▪️ಭಾರತೀಯ ಪರಂಪರೆಯನ್ನು ಅವಮಾನಿಸುವುದು

ಅಭಿವೃದ್ಧಿ ಮಾತ್ರ ಕೇಳಬೇಡಿ - ಬಿಟ್ಟಿ ಪ್ರಚಾರ ಮಾತ್ರ ಮರಿಬೇಡಿ'! ಸುಳ್ಳಿನ ಮೇಲೆ ಸುಳ್ಳನ್ನು ಪೋಣಿಸುತ್ತಾ ಜನರ ಕಿವಿ ಮೇಲೆ ಹೂವಿಡುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂಲ ಉದ್ದೇಶ. ಸನ್ಮಾನ್ಯ ಮಜಾವಾದಿ ಸಿಎಂ ಸಿದ್ದರಾಮಯ್ಯ ಅವರ ನಿದ್ದೆಯಲ್ಲಿಯೂ ತುಷ್ಟೀಕರಣದ ರಾಜಕೀಯ ಅಡಗಿದೆ. ರೈತರು, ಬಡವರು, ಮಹಿಳೆಯರು, ಶ್ರಮಿಕರ ಕಷ್ಟ ಹೇಳಿಕೊಂಡರೆ ನಿದ್ರೆಗೆ ಶರಣಾಗುವ ಸಿದ್ದರಾಮಯ್ಯ ಸರ್ಕಾರ, ಅದೇ ಮತಾಂಧರು, ನಾಡ ದ್ರೋಹಿಗಳು, ಸಮಾಜಘಾತುಕರು ಬಳಿ ಬಂದರೆ ಸಾಕು ದಿಢೀರ್ ಅಂತ ನಿದ್ರೆಯಿಂದ ಎಚ್ಚರಗೊಳ್ಳುತ್ತಾರೆ ಎಂದು ಬಿಜೆಪಿ ಹೇಳಿದೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಗೆಲ್ಲಲು @INCKarnataka ದ ಮುಂದಿರುವ ಟಾಸ್ಕ್ಗಳು :
— BJP Karnataka (@BJP4Karnataka) February 3, 2024
▪️ಕೋಮುಗಲಭೆ ಸೃಷ್ಟಿಸುವುದು
▪️ದೇಶ ವಿಭಜನೆಯ ಚರ್ಚೆ ಹುಟ್ಟು ಹಾಕುವುದು
▪️ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು
▪️ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು
▪️ಐಟಿ ಸೆಲ್ ಮೂಲಕ ಸುಳ್ಳು ಸುದ್ದಿ ಹಬ್ಬಿಸುವುದು
▪️ಭಾರತೀಯ ಪರಂಪರೆಯನ್ನು…
ಇನ್ನೂ ಮತ್ತೊಂದು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ತಿಲಕ ಕಂಡರೆ ಭಯ, ಕೇಸರಿ ಕಂಡರೆ ಕಳವಳ, ಹನುಮ ಧ್ವಜ ಕಂಡರೆ ಭೀತಿ, ರಾಮಮಂದಿರ ಎಂದರೆ ಕಿರಿಕಿರಿ, ಹಿಂದೂಗಳು ಎಂದರೆ ದ್ವೇಷ ಸಾಧಿಸುವ ಕಲೆಯನ್ನು ಇತ್ತೀಚೆಗೆ ಭಯಾನಕವಾಗಿ ರೂಢಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಸಾಹೇಬರಿಗೆ ಟೋಪಿ ಕಂಡರೆ ಇರುವ ವ್ಯಾಮೋಹ ಹಿಂದೂ ನಂಬಿಕೆಗಳ ಮೇಲೆ ಇಲ್ಲದೆ ಇರುವುದು ಹಿಂದೂಗಳಿಗೆ ಮಾಡುತ್ತಿರುವ ದ್ರೋಹ, ವಂಚನೆ!
ಚುನಾವಣೆಗೂ ಮುನ್ನ ಟೆಂಪಲ್ ರನ್ ಮಾಡಿದ ನಕಲಿ ಹಿಂದೂ ಸಿದ್ದರಾಮಯ್ಯರವರು ಮುಖ್ಯಮಂತ್ರಿ ಆದ ಕೂಡಲೇ ಹಿಂದೂಗಳ ಮೇಲೇಕೆ ಇಷ್ಟೊಂದು ದ್ವೇಷ ಕಾರುತ್ತಿದಾರೆ ಎನ್ನುವ ಪ್ರಶ್ನೆ ನಾಡಿನ ಜನತೆಯನ್ನು ಕಾಡುತ್ತಿದೆ ಎಂದು ಬಿಜೆಪಿ ಹೇಳಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ












Click it and Unblock the Notifications