ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಮೋದಿ ಜೊತೆ ಮಾತನಾಡಲು ಬಿಜೆಪಿಯವರಿಗೆ ಧಮ್ ಇಲ್ಲ'

|
Google Oneindia Kannada News

ಬೆಂಗಳೂರು, ಅಕ್ಟೋಬರ್ 05 : 'ಕರ್ನಾಟಕದ ಬಿಜೆಪಿ ನಾಯಕರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬಳಿ ಮಾತನಾಡಲು ಧಮ್ ಇಲ್ಲ. ದೆಹಲಿಯಲ್ಲಿ ಮೌನವಾಗಿದ್ದ ಬಿಜೆಪಿ ನಾಯಕರು ಬೆಂಗಳೂರಿಗೆ ಬಂದ ನಂತರ ಜನರ ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಕಳಸಾ-ಬಂಡೂರಿ ನಾಲಾ ಯೋಜನೆ ಕುರಿತು ಚರ್ಚಿಸಲು ದೆಹಲಿಗೆ ಸರ್ವಪಕ್ಷಗಳ ನಿಯೋಗವನ್ನು ತೆಗೆದುಕೊಂಡು ಹೋದಾಗ ಬಿಜೆಪಿ ನಾಯಕರು ಮೌನವಾಗಿದ್ದರು' ಎಂದು ದೂರಿದರು. [ಏನಿದು ಕಳಸಾ-ಬಂಡೂರಿ ಯೋಜನೆ?]

siddaramaiah

'ಪ್ರಧಾನಿ ಮುಂದೆ ಮಾತನಾಡದೇ ಮೌನವಾಗಿದ್ದ ಬಿಜೆಪಿ ನಾಯಕರು ಬೆಂಗಳೂರಿಗೆ ಬಂದ ನಂತರ ಜನರ ದಾರಿ ತಪ್ಪಿಸುವಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನರೇಂದ್ರ ಮೋದಿ ಅವರ ಬಳಿ ಮಾತನಾಡಲು ನಾಯಕರಿಗೆ ಧಮ್ ಇಲ್ಲ' ಎಂದು ಕುಟುಕಿದರು. [ಕಳಸಾ-ಬಂಡೂರಿ ವಿವಾದ ತಿರುಗೇಟು ಕೊಟ್ಟ ಸಿಎಂ]

'ಕಳಸಾ-ಬಂಡೂರಿ ವಿಚಾರದಲ್ಲಿ ಈಗಾಗಲೇ ಕರ್ನಾಟಕ ಸರ್ಕಾರ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಮಾತುಕತೆ ನಡೆಸಿದೆ. ಅದು ಮುರಿದು ಬಿದ್ದ ಮೇಲೆ ಈ ವಿಚಾರ ನ್ಯಾಯಾಧೀಕರಣದ ಮೆಟ್ಟಿಲೇರಿದೆ. ಸೋನಿಯಾ ಗಾಂಧಿ ಅವರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಅರ್ಥವಿಲ್ಲ' ಎಂದು ಸಿದ್ದರಾಮಯ್ಯ ತಿಳಿಸಿದರು. [ಮಹಾದಾಯಿ ವಿವಾದ : ಚರ್ಚೆಗೆ ಆಹ್ವಾನ ಕೊಟ್ಟ ಎಚ್ಡಿಕೆ]

'ಯಾವುದೇ ನೀರಾವರಿ ಯೋಜನೆಯಾದರೂ ರಾಜಕೀಯ ಮಾಡಬಾರದು. ಬಿಜೆಪಿಯವರು ಇದನ್ನು ಮೊದಲು ಅರಿತುಕೊಳ್ಳಬೇಕು. ರಾಜ್ಯಾದ್ಯಂತ ರೈತ ಚೈತನ್ಯ ಯಾತ್ರೆ ಮಾಡಿದರೆ ಬಿಜೆಪಿಯವರು ಪುನಃ ಅಧಿಕಾರಕ್ಕೆ ಬರಬಹುದು ಎಂದು ಅಂದುಕೊಂಡಿದ್ದಾರೆ. ಆದರೆ, ಈ ಕನಸು ನನಸಾಗುವುದಿಲ್ಲ' ಎಂದು ಮುಖ್ಯಮಂತ್ರಿಗಳು ಹೇಳಿದರು.

English summary
Karnataka Chief Minister Siddaramaiah on Monday said, state BJP leaders has no guts to talk with Narendra Modi about Kalasa-Banduri drinking water project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X