ಎಂಕೆ ಗಣಪತಿ ಕುಟುಂಬಕ್ಕೆ ಬಿಜೆಪಿ ನಾಯಕರ ಸಾಂತ್ವನ

ಮಡಿಕೇರಿ, ಜುಲೈ 16: ಆತ್ಮಹತ್ಯೆಗೆ ಶರಣಾದ ಡಿವೈಎಸ್ಪಿ ಎಂಕೆ ಗಣಪತಿ ಅವರ ರಂಗಸಮುದ್ರದ ನಿವಾಸಕ್ಕೆ ಶನಿವಾರ ಭೇಟಿ ನೀಡಿದ ರಾಜ್ಯ ಬಿಜೆಪಿ ನಾಯಕರು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೆ ಎಸ್ ಈಶ್ವರಪ್ಪ, ಆರ್ ಅಶೋಕ್, ವಿ ಸೋಮಣ್ಣ, ಕೆಜಿ ಬೋಪಯ್ಯ ಸೇರಿದಂತೆ ವಿವಿಧ ಮುಖಂಡರು ಎರಡು ತಂಡವಾಗಿ ಭೇಟಿ ನೀಡಿ ಗಣಪತಿ ಅವರ ಪತ್ನಿ ಪಾವನಾ ಅವರಿಗೆ ಸಾಂತ್ವನ ಹೇಳಿದರು.[ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?]

bjp

ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಈಶ್ವರಪ್ಪ ಮತ್ತು ಅಶೋಕ್, ರಾಜ್ಯ ಸರ್ಕಾರ ಯಾವ ಹೋರಾಟಕ್ಕೂ ಬೆಲೆ ನೀಡುತ್ತಿಲ್ಲ. ಸಿಬಿಐ ತನಿಖೆಗೆ ಆದೇಶ ನೀಡುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದರು.['ಗಣಪತಿ ಅವರಿಗೆ ಅವರ ವಿರುದ್ಧದ ಕೇಸ್ ಗಳು ಕಾಡುತ್ತಿತ್ತು']

bjp

ಆರೋಪ ಕೇಳಿಬಂದಿರುವುದರಿಂದ ಸಚಿವ ಕೆಜೆ ಜಾರ್ಜ್ ರಾಜೀನಾಮೆ ನೀಡಬೇಕು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಸದನದಲ್ಲೂ ಹೋರಾಟ ನಡೆಸಿದ್ದವು. ಅಹೋರಾತ್ರಿ ಧರಣಿಯನ್ನು ನಡೆಸಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+