ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಿಜೆಪಿ ನಾಯಕರಿಂದ ಅಮಿತ್ ಶಾ ಭೇಟಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 12 : ಕರ್ನಾಟಕದ ಬಿಜೆಪಿ ನಾಯಕರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಮಾಡಿದರು. 15 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ನಾಯಕರು ಹೈಕಮಾಂಡ್ ನಾಯಕರನ್ನು ಭೇಟಿಯಾದರು.

ಗುರುವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ರಾಜ್ಯ ನಾಯಕರ ನಿಯೋಗ ಸಂಸತ್ ಭವನದಲ್ಲಿ ಅಮಿತ್ ಶಾ ಭೇಟಿಯಾದರು. ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ರಾಜ್ಯದ ಜನತೆ ಹಾಗೂ ಕಾರ್ಯಕರ್ತರ ಪರವಾಗಿ ಸಿಹಿ ನೀಡಿದರು.

ಉಪ ಚುನಾವಣೆ ಬಳಿಕ ಕರ್ನಾಟಕಕ್ಕೆ ಉಡುಗೊರೆ ಕೊಟ್ಟ ಕೇಂದ್ರ ಉಪ ಚುನಾವಣೆ ಬಳಿಕ ಕರ್ನಾಟಕಕ್ಕೆ ಉಡುಗೊರೆ ಕೊಟ್ಟ ಕೇಂದ್ರ

ಸಂಸದರಾದ ಬಿ. ವೈ. ರಾಘವೇಂದ್ರ, ಪ್ರತಾಪ್ ಸಿಂಹ, ಜಿ. ಎಂ. ಸಿದ್ದೇಶ್ವರ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಾಜ್ಯದ ರಾಜಕೀಯ ಬೆಳವಣಿಗೆ ಕುರಿತು ಈ ಸಮಯದಲ್ಲಿ ಚರ್ಚೆ ನಡೆಸಲಾಯಿತು.

ಉಪ ಚುನಾವಣೆ ಫಲಿತಾಂಶ; ಬೆಳಗಾವಿಗೆ ಎಷ್ಟು ಸಚಿವ ಸ್ಥಾನ? ಉಪ ಚುನಾವಣೆ ಫಲಿತಾಂಶ; ಬೆಳಗಾವಿಗೆ ಎಷ್ಟು ಸಚಿವ ಸ್ಥಾನ?

15 ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸಿತ್ತು. ಇದರಿಂದಾಗಿ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತವನ್ನು ಪಡೆದಿತ್ತು. ಚುನಾವಣಾ ಫಲಿತಾಂಶದ ಬಗ್ಗೆ ಹೈಕಮಾಂಡ್ ನಾಯಕರು ಸಹ ಮೆಚ್ಚುಗೆ ಸೂಚಿಸಿದ್ದರು.

17 ಅನರ್ಹ ಶಾಸಕರಲ್ಲಿ ಉಪ ಚುನಾವಣೆ ಗೆದ್ದವರು, ಸೋತವರು 17 ಅನರ್ಹ ಶಾಸಕರಲ್ಲಿ ಉಪ ಚುನಾವಣೆ ಗೆದ್ದವರು, ಸೋತವರು

ಹೈಕಮಾಂಡ್ ನಾಯಕರ ಭೇಟಿ

ಹೈಕಮಾಂಡ್ ನಾಯಕರ ಭೇಟಿ

15 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕದ ಬಿಜೆಪಿ ನಾಯಕರು ಅಮಿತ್ ಶಾ ಭೇಟಿ ಮಾಡಿ ಉಪ ಚುನಾವಣೆ ಫಲಿತಾಂಶದ ಬಗ್ಗೆ ವಿವರಣೆ ನೀಡಿದರು. ಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದಿತ್ತು. ಇದರಿಂದಾಗಿ ಸರ್ಕಾರಕ್ಕೆ ಸ್ಪಷ್ಟ ಬಹುಮತ ಸಿಕ್ಕಿತ್ತು.

ಅಮಿತ್ ಶಾ ಬ್ಯುಸಿಯಾಗಿದ್ದರು

ಅಮಿತ್ ಶಾ ಬ್ಯುಸಿಯಾಗಿದ್ದರು

15 ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಡಿಸೆಂಬರ್ 9ರಂದು ಪ್ರಕಟಗೊಂಡಿತ್ತು. ಆದರೆ, ಪೌರತ್ವ ತಿದ್ದುಪಡಿ ಮಸೂದೆ ಮಂಡನೆ ವಿಚಾರದಲ್ಲಿ ಗೃಹ ಸಚಿವರೂ ಆಗಿರುವ ಅಮಿತ್ ಶಾ ಬ್ಯುಸಿ ಇದ್ದರು. ಆದ್ದರಿಂದ, ಗುರುವಾರ ಕರ್ನಾಟಕದ ಬಿಜೆಪಿ ನಾಯಕರು ಅಮಿತ್ ಶಾ ಭೇಟಿ ಮಾಡಿದರು.

ಯಡಿಯೂರಪ್ಪ ಭೇಟಿ ಯಾವಾಗ?

ಯಡಿಯೂರಪ್ಪ ಭೇಟಿ ಯಾವಾಗ?

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ದೆಹಲಿ ಪ್ರವಾಸ ಕೈಗೊಳ್ಳಬೇಕಿತ್ತು. ಆದರೆ, ಅಮಿತ್ ಶಾ ಬ್ಯುಸಿ ಇರುವ ಕಾರಣ ತಮ್ಮ ಪ್ರವಾಸವನ್ನು ಅವರು ಮುಂದೂಡಿದ್ದಾರೆ. ಮುಂದಿನ ವಾರ ಯಡಿಯೂರಪ್ಪ ದೆಹಲಿಗೆ ಭೇಟಿ ನೀಡಲಿದ್ದಾರೆ.

ಸಂಪುಟ ವಿಸ್ತರಣೆ ಯಾವಾಗ?

ಸಂಪುಟ ವಿಸ್ತರಣೆ ಯಾವಾಗ?

15 ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಸಂಪುಟ ವಿಸ್ತರಣೆ ಯಾವಾಗ? ಎಂಬ ಬಗ್ಗೆ ಪ್ರಶ್ನೆ ಎದ್ದಿದೆ. ಯಡಿಯೂರಪ್ಪ ಅವರು ದೆಹಲಿಗೆ ತೆರಳಿದಾಗ ಅಮಿತ್ ಶಾ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

English summary
After 15 seat by elections result Karnataka BJP leaders met the BJP national president Amit Shah. BJP bagged 12 seat in the by elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X