BREAKING: ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಸಿಎಂ ಘೋಷಣೆ
ಬೆಂಗಳೂರು, ಜು. 27: ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಇಂದು ಸಂಜೆ 7 ಗಂಟೆಗೆ ಕರೆಯಲಾಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಕಚೇರಿಯಿಂದ ಅಧಿಕೃತ ಮಾಹಿತಿ ಪ್ರಕಟವಾಗಿದ್ದು, ರೇಸ್ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಸಭೆಯನ್ನು ಕರೆಯಲಾಗಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.
ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಹೈಕಮಾಂಡ್ ನೇಮಕ ಮಾಡಿರುವ ವೀಕ್ಷಕ ಧರ್ಮೆಂದ್ರ ಪ್ರಧಾನ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕೆಲ ಹೊತ್ತಿನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಹಂಗಾಮಿ ಸಿಎಂ ಯಡಿಯೂರಪ್ಪ ಅವರ ಮೌನ ಬಿಜೆಪಿ ಹೈಕಮಾಂಡ್ಗೆ ಒಂದು ರೀತಿಯಲ್ಲಿ ಎಚ್ಚರಿಕೆ ಸಂದೇಶ ಎಂಬಂತೆ ವಿಶ್ಲೇಷಣೆ ಮಾಡಲಾಗುತ್ತಿದೆ. ಹೀಗಾಗಿ ಆದಷ್ಟು ಬೇಗ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಹೈಕಮಾಂಡ್ ನಿರ್ಧಾರ ಮಾಡಿದೆ ಎಂಬ ಮಾಹಿತಿ ಬಂದಿದೆ.

Recommended Video
ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಶಾಸಕರಿಗೆ ವೀಕ್ಷಕರು ತಿಳಿಸಲಿದ್ದಾರೆ. ಆ ಬಳಿಕ ನೂತನ ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಹಿರಿಯ ಶಾಸಕರು ಅನುಮೋದಿಸಲಿದ್ದಾರೆ.












Click it and Unblock the Notifications