BJP Manifesto 2023: ಎರಡು ಕಡೆ ಬಂದರು ನಿರ್ಮಾಣ, ಕರಾವಳಿ ಕರ್ನಾಟಕಕ್ಕೆ ಏನೇನು?
ರಾಜ್ಯ ಸಾರ್ವತ್ರಿಕ ಚುನಾವಣೆಗೆ ದಿನಗಣನೆ ಶುರುವಾಗಿದ್ದು ಮತದಾರರನ್ನು ಸೆಳೆಯಲು ಇಂದು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಸಮೃದ್ಧ ಕರ್ನಾಟಕಕ್ಕಾಗಿ ರಾಜ್ಯದ ಜನತೆಯಿಂದಲೇ, ರಾಜ್ಯದ ಜನತೆಗಾಗಿ, ರಾಜ್ಯದ ಜನತೆಗೋಸ್ಕರ ಅವರ ಸಲಹೆಗಳ ಆಧಾರದಲ್ಲಿ ರೂಪಿಸಲಾದ ಬಿಜೆಪಿ ಪ್ರಜಾ ಪ್ರಣಾಳಿಕೆ 2023 ಇಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಡುಗಡೆಗೊಳಿಸಿದರು. ಕರಾವಳಿ ಕರ್ನಾಟಕ ಭಾಗಕ್ಕೆ ಬಿಜೆಪಿ ಪ್ರಣಾಳಿಕೆಯಲ್ಲಿ ಯಾವ ಭರವಸೆಗಳನ್ನು ನೀಡಲಾಗಿದೆ ಎಂದು ನೋಡೋಣ.

ಕರಾವಳಿ ಕರ್ನಾಟಕಕ್ಕೆ ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳು ಹೀಗಿವೆ:-
1. ಕರಾವಳಿ ನವೋತ್ಥಾನ ಯೋಜನೆ' ಅಡಿಯಲ್ಲಿ 12,000 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯನ್ನು ಪ್ರಾರಮಭಿಸುತ್ತೇವೆ. ಈ ಮೂಲಕ ಕರ್ನಾಟಕವು ದೇಶದ ಕರಾವಳಿ ಪ್ರದೇಶಗಳ ಅಭಿವೃದ್ಧಿಯಲ್ಲಿ ಮುನ್ನಡೆ ಸಾಧಿಸುತ್ತದೆ.
* ರಾಜ್ಯದಲ್ಲಿ ಬಂದರುಗಳ ನಿರ್ವಹಣೆ ಸಾಮರ್ಥ್ಯವನ್ನು ಹೆಚ್ಚಸಲು 2028ರ ವೇಳೆಗೆ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಎಲ್ಲಾ ಸಣ್ಣ ಬಂದರುಗಳನ್ನು ನವೀಕರಿಸುತ್ತೇವೆ.

* ಕೇಣಿ ಮತ್ತು ಪಾವಿನಕುರ್ವೆಯಲ್ಲಿ ಬಂದರುಗಳ ನಿರ್ಮಾಣವನ್ನು ಪೂರ್ಣಗೊಳಿಸುತ್ತೇವೆ. ಇದರಿಂದ ಕರ್ನಾಟಕ ಅಂತಾರಾಷ್ಟ್ರೀಯ ಕರಾವಳಿ ವ್ಯಾಪಾರದ ಕೇಂದ್ರವಾಗಿ ಗುರುತಿಸಿಕೊಳ್ಳಲಿದೆ.
2. 2026ರ ವೇಳೆಗೆ ಡೀಸೆಲ್ ಚಾಲಿತ ಮೀನುಗಾರಿಕೆ ದೋಣಿಗಳನ್ನು ಎಲ್ಪಿಜಿ ಚಾಲಿತ ದೋಣಿಗೆಗಳಾಗಿ ಪರಿವರ್ತಿಸಲು 'ಪರಿಸರ ಸ್ನೇಹಿ ದೋಣಿ ಯೋಜನೆ' ಪ್ರಾರಂಭಿಸುವುದಾಗಿ ಬಿಜೆಪಿ ಹೇಳಿದೆ.
3. ಉತ್ತರ ಕನ್ನಡದಲ್ಲಿ ಏಮ್ಸ್ ಮಾದರಿಯಲ್ಲಿ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಸ್ಥಾಪಿಸುತ್ತೇವೆ.
4. ಪ್ರತಿ ಬಂದರಿಗೆ 100 ಕೋಟಿ ರೂ. ನೀಡುವ ಮೂಲಕ ರಾಜ್ಯದ 9 ಮೀನುಗಾರಿಕಾ ಬಂದರುಗಳನ್ನು ಮೇಲ್ದರ್ಜೆಗೆ ಏರಿಸಿ, ಆಧುನೀಕರಗೊಳಿಸುತ್ಥೆವೆ, ಡ್ರೆಡ್ಜಿಂಗ್ ಬಯೋವಾಲ್ಗಳನ್ನು ಸ್ಥಾಪಿಸಿ, ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸುವುದಾಗಿ ಬಿಜೆಪಿ ಭರವಸೆ ನೀಡಿದೆ.
5.'ಮಿಷನ್ ಕನೆಕ್ಷ್ ಕರ್ನಾಟಕ'ದ ಅಡಿಯಲ್ಲಿ ಬೆಂಗಳೂರು ಮತ್ತು ಮಂಗಳೂರನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ಅನ್ನು ಅತ್ಯಾಧುನಿಕ ಎಕ್ಸಪ್ರೆಸ್ವೇ ಆಗಿ ಪರಿವರ್ತಿಸುವುದಾಗಿ ಬಿಜೆಪಿ ಹೇಳಿದೆ.
ಬಿಜೆಪಿ ಸರ್ಕಾರ ತನ್ನ ಅಧಿಕಾರವಧಿಯಲ್ಲಿ ಕರಾವಳಿ ಕರ್ನಾಟಕಕ್ಕೆ ನೀಡಿದ ಕೊಡುಗೆಗಳೇನು? ಇದರ ಬಗ್ಗೆ ತಿಳಿಯೋಣ..
ಸಾಗರಮಾಲಾ ಯೋಜನೆಯಡಿ ಕರಾವಳಿ ಪ್ರದೇಶದಲ್ಲಿ 18 ಅಭಿವೃದ್ಧಿ ಯೋಜನೆಗಳನ್ನು ಪೂರ್ಣಗೊಳಿಸಿರುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ. ಜೊತೆಗೆ 950 ಕೋಟಿ ರೂ ಮೊತ್ತದ 14 ಯೋಜನೆಗಳಿಗೆ ಅನುಮೋದನೆ ನೀಡಿ, ಮಂಗಳೂರು ಬಂದರಿನಲ್ಲಿ 3ನೇ ಹಂತದ ನವೀಕರಣ ಕಾಮಗಾರಿ, ಮಲ್ಪೆ ಬಂದರಿನ ವಿಸ್ತರಣೆ ಕಾರ್ಯ ಮಾಡಲಾಗಿದೆ ಎಂದು ಅದು ಹೇಳಿದೆ.
ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಮೀನುಗಾರರಿಗೆ ವಿವಿಧ ಸಾಲಭ್ಯಗಳನ್ನು ಒದಗಿಸಿದೆ ಎಂದು ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ.
* 2022-23ರಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಮತ್ಸ್ಯ ಸಿರಿ ಯೋಜನೆಯಡಿ 100 ಆಳ ಸಮುದ್ರ ಮೀನುಗಾರಿಕೆ ದೋಣಿಗಳು.
* 7,668 ಮೀನುಗಾರರಿಗೆ ಮೀನುಗಾರಿಕೆ ದೋಣಿಗಳನ್ನು ಒದಗಿಸುವುದು. 3,532 ಯಾಂತ್ರೀಕೃತ ದೋಣಿಗಳಿಗೆ ಒಂದು ಲಕ್ಷ ಕಿಲೋ ಲೀಟರ್ಗೂ ಹೆಚ್ಚು ತೆರಿಗೆ ಮುಕ್ತ ಸಬ್ಸಿಡಿ ಡೀಸೆಲ್.
* ಕೇಬಲ್ ನೆಟ್ ಮೂಲಕ ಮೀನುಗಾರಿಕೆ ನಡೆಸಲು 1000 ಮೀನುಗಾರರಿಗೆ 3 ಲಕ್ಷ ಸಹಾಯಧನ.
* ಆಶ್ರಯ ರಹಿತ ಮೀನುಗಾರರಿಗೆ ಆದ್ಯತೆಯ ಮೇರೆಗೆ 5000 ಮನೆಗಳು.
* ಸಾಮಖ್ರಾಮಿಕ ಸಮಯದಲ್ಲಿ ನೋಂದಾಯಿತ 18,746 ಮೀನುಗಾರರಿಗೆ 3000 ಪರಿಹಾರ
ನಾರಾಯಣ ಗುರು ಅಭಿವೃದ್ಧ ನಿಗಮವನ್ನು ಸ್ಥಾಪಿಸಿ, ನಿಗಮಕ್ಕೆ ನೀಡಿದ ಹಣವನ್ನು ಬಿಲ್ಲವ, ಈಡಿಗ ಮತ್ತು ಸಾಮಧಾರಿ ಸಮುದಾಯಗಳ ಆರ್ಥಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ಬಳಸಲಾಗಿದೆ ಎಮದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications