Get Updates
Get notified of breaking news, exclusive insights, and must-see stories!

ಶಾಸಕ ಮಾಡಾಳ್ ಮೆರವಣಿಗೆ ಮಾಡಿದ ಬೆಂಬಲಿಗರು: ಪೊಲೀಸರಿಗೆ ಸೆಡ್ಡು ಹೊಡೆದ ಬಿಜೆಪಿ ಕಾರ್ಯಕರ್ತರು- ವಿಡಿಯೊ ನೋಡಿ

ಜಾಮೀನು ಸಿಕ್ಕ ನಂತರ ಮಾಡಾಳ್‌ ವಿರೂಪಾಕ್ಷಪ್ಪ ಅವರು ಬೆಂಗಳೂರಿನಿಂದ ದಾವಣಗೆರೆ ಮೂಲಕ ಚನ್ನಗಿರಿಯನ್ನು ತಲುಪಿದರು. ಅವರನ್ನು ತೆರೆದ ಕಾರಿನಲ್ಲಿ ಬೆಂಬಲಿಗರು ಮೆರವಣಿಗೆ ಮಾಡಿದರು. ಹೂವು ಹಾರಗಳನ್ನು ಎರಚಿದರು. ಘೋಷಣೆ ಕೂಗಿದರು. ವಿಡಿಯೊ ನೋಡಿ

ದಾವಣಗೆರೆ, ಮಾರ್ಚ್‌ 07: ಲಂಚ ಪ್ರಕರಣದಲ್ಲಿ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನಿರೀಕ್ಷಣಾ ಜಾಮೀನು ಆದೇಶವನ್ನು ಸ್ವೀಕರಿಸಿದ ನಂತರ 48 ಗಂಟೆಗಳ ಒಳಗೆ ಲೋಕಾಯುಕ್ತ ಪೊಲೀಸ್ ತನಿಖಾಧಿಕಾರಿ (ಐಒ) ಮುಂದೆ ಹಾಜರಾಗುವಂತೆ ಶಾಸಕ ಮಾಡಾಳ್‌ ಅವರಿಗೆ ನ್ಯಾಯಮೂರ್ತಿ ಕೆ.ನಟರಾಜನ್ ತಿಳಿಸಿದರು.

ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಾಗ ನ್ಯಾಯಮೂರ್ತಿ ಕೆ ನಟರಾಜನ್ ಅವರು ವಿರೂಪಾಕ್ಷಪ್ಪ ಅವರು ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಆವರಣವನ್ನು ಪ್ರವೇಶಿಸಬಾರದು ಮತ್ತು ಸಾಕ್ಷ್ಯವನ್ನು ಹಾಳು ಮಾಡಬಾರದು ಎಂದು ಹೇಳಿದರು.

Karnataka BJP MLA Madal Virupakshappa gets bail Supporters welcome him with garlands

ಲೋಕಾಯುಕ್ತ ಪೊಲೀಸರು ತಮ್ಮ ಹಾಗೂ ಪುತ್ರ ಪ್ರಶಾಂತ್ ಮಾಡಾಳ್ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ. ವಿರೂಪಾಕ್ಷಪ್ಪ ಅವರನ್ನು ಆರೋಪಿ ನಂಬರ್ ಒನ್ ಎಂದು ಹೆಸರಿಸಲಾಗಿದ್ದು, ಅವರ ಪುತ್ರ ಪ್ರಶಾಂತ್ ಮಾಡಾಳ್‌ ಅವರನ್ನು ಆರೋಪಿ ನಂಬರ್ 2 ಎಂದು ಹೆಸರಿಸಲಾಗಿದೆ.

ವಿರೂಪಾಕ್ಷಪ್ಪ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲರು, ಹಂಚಿಕೆ, ಟೆಂಡರ್ ಸ್ವೀಕಾರ, ಖರೀದಿ ಆದೇಶ ನೀಡಿರುವುದು ವಿರೂಪಾಕ್ಷಪ್ಪ ಸದಸ್ಯರಾಗಿಲ್ಲದ ಸಮಿತಿಯಿಂದ ನಡೆದಿದೆ. ದೂರಿನಲ್ಲಿ ಮತ್ತು ಎಫ್‌ಐಆರ್‌ನಲ್ಲಿ ಎಲ್ಲಿಯೂ ವಿರೂಪಾಕ್ಷಪ್ಪ ವಿರುದ್ಧ ಅಕ್ರಮ ಸಲ್ಲಿಕೆಯ ನಿರ್ದಿಷ್ಟ ಆರೋಪವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

Karnataka BJP MLA Madal Virupakshappa gets bail Supporters welcome him with garlands

ಕೆಎಸ್‌ಡಿಎಲ್‌ಗೆ ಸುಗಂಧ ದ್ರವ್ಯ ಪೂರೈಕೆಯ ಟೆಂಡರ್‌ಗೆ ಸಂಬಂಧಿಸಿದಂತೆ 40 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ಪ್ರಶಾಂತ್ ಮಾಡಲ್ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ನಂತರ ಲೋಕಾಯುಕ್ತ ಪೊಲೀಸರು ಮಾಡಾಳ್‌ ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಶೋಧ ನಡೆಸಿದಾಗ 6 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

Karnataka BJP MLA Madal Virupakshappa gets bail Supporters welcome him with garlands

ಜಾಮೀನು ಸಿಕ್ಕ ನಂತರ ಮಾಡಾಳ್‌ ವಿರೂಪಾಕ್ಷಪ್ಪ ಅವರು ಬೆಂಗಳೂರಿನಿಂದ ದಾವಣಗೆರೆ ಮೂಲಕ ಚನ್ನಗಿರಿಯನ್ನು ತಲುಪಿದರು. ಅವರನ್ನು ತೆರೆದ ಕಾರಿನಲ್ಲಿ ಬೆಂಬಲಿಗರು ಮೆರವಣಿಗೆ ಮಾಡಿದರು. ಹೂವು ಹಾರಗಳನ್ನು ಎರಚಿದರು. ಮಾಡಾಳ್‌ ಪರ ಘೋಷಣೆ ಕೂಗಿದರು. ಹಾರ ತುರಾಯಿಗಳನ್ನು ಹಾಕಿದರು. ಇದೇ ವೇಳೆ, ಕರ್ತವ್ಯ ನಿರ್ವಹಣೆಯಲ್ಲಿ ತೊಡಗಿದ್ದ ಪೊಲೀಸರಿಗೆ ಸೆಡ್ಡು ಹೊಡೆದ ಸನ್ನೆ ಮಾಡಿ ಸವಾಲು ಹಾಕಿದರು.

ಈ ಘಟನೆಗೆ ಸಂಬಂಧಿಸಿದ ವಿಡಿಯೊ ಅನ್ನು ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. 'ಲೋಕಾಯುಕ್ತ ಪೊಲೀಸರ ಕೈಗೆ ಸಿಗದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಸಿಕ್ಕ ಕೆಲವೇ ಗಂಟೆಗಳಲ್ಲಿ ಪ್ರತ್ಯಕ್ಷರಾಗುತ್ತಾರೆ. ಮೆರವಣಿಗೆ ಮಾಡಿ ಪೊಲೀಸರಿಗೆ ಸೆಡ್ಡು ಹೊಡೆಯುತ್ತಾರೆ. ಬಿಜೆಪಿಗರು ಬಾವುಟ ಹಿಡಿದು ಸಂಭ್ರಮಿಸುತ್ತಾರೆ. ಇದು ರಾಜ್ಯದ ಜನತೆಗೆ ಮಾಡುವ ಅಪಮಾನ. ಬಿಜೆಪಿಯು ಕಾನೂನಿನ ಅಣಕವಾಡುತ್ತಿದೆ' ಎಂದು ಕಾಂಗ್ರೆಸ್‌ ಟೀಕಿಸಿದೆ.

ಇದೇ ವಿಚಾರವಾಗಿ ಬೆಳಿಗ್ಗೆ ಟ್ವೀಟ್‌ ಮಾಡಿದ್ದ ಕಾಂಗ್ರೆಸ್‌, 'ಭ್ರಷ್ಟಾಚಾರ ಆರೋಪ ಹೊತ್ತ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಿಎಂ ಕಚೇರಿಗೆ ಬಂದಿದ್ದರೂ ಬಂಧಿಸದೆ ಈಗ ನಾಪತ್ತೆ ಎಂಬ ಹೊಸ ನಾಟಕವಾಡುತ್ತಿದೆ. ನಾನು ಪ್ರಾಮಾಣಿಕ ಎಂದು ಕಣ್ಣೀರು ಹಾಕುವ ಬಸವರಾಜ ಬೊಮ್ಮಾಯಿ ಅವರೇ, ವಿರೂಪಾಕ್ಷಪ್ಪನವರಿಗೇನು ಅದೃಶ್ಯ ಯೋಗ ಸಿದ್ಧಿಸಿದೆಯೇ ಅಥವಾ ಸರ್ಕಾರವೇ ಅಡಗಿಸಿಟ್ಟಿದೆಯೇ?' ಎಂದು ಪ್ರಶ್ನೆ ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+