ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಳೆ ರೆಸಾರ್ಟ್‌ನಲ್ಲಿ ಬಿಜೆಪಿ ಶಾಸಕರ ಜೊತೆ ಯಡಿಯೂರಪ್ಪ ಸಭೆ

|
Google Oneindia Kannada News

ಬೆಂಗಳೂರು, ಜನವರಿ 19: ದೆಹಲಿ ಗುರುಗ್ರಾಮದಲ್ಲಿ ಕೆಲವು ಬಿಜೆಪಿ ಶಾಸಕರನ್ನು ವಾಪಸ್ ಬರುವಂತೆ ಬುಲಾವ್ ಕಳುಹಿಸಿರುವ ಯಡಿಯೂರಪ್ಪ ಅವರು ನಾಳೆ ಅವರೊಂದಿಗೆ ಸಭೆ ನಡೆಸಲಿದ್ದಾರೆ.

ಬಿಜೆಪಿಯ ಎಲ್ಲ ಶಾಸಕರನ್ನು ಸ್ಥಳೀಯ ರೆಸಾರ್ಟ್‌ಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದ್ದು, ಅಲ್ಲಿಯೇ ಯಡಿಯೂರಪ್ಪ ಅವರು ಬಿಜೆಪಿ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ.

ಅಸಲಿಗೆ ಸಿದ್ದರಾಮಯ್ಯ ಬಳಿ ರಮೇಶ್ ಜಾರಕಿಹೊಳಿ ಇಟ್ಟಿದ್ದು ಒಂದೇ ಒಂದು ಷರತ್ತು? ಅಸಲಿಗೆ ಸಿದ್ದರಾಮಯ್ಯ ಬಳಿ ರಮೇಶ್ ಜಾರಕಿಹೊಳಿ ಇಟ್ಟಿದ್ದು ಒಂದೇ ಒಂದು ಷರತ್ತು?

ಬೆಂಗಳೂರು ಹೊರವಲಯದ ಗೋಲ್ಡನ್ ಪಾಮ್ಸ್‌ ರೆಸಾರ್ಟ್‌ಗೆ ಬಿಜೆಪಿ ಶಾಸಕರು ತೆರಳುವ ಸಾಧ್ಯತೆ ಇದ್ದು, ಎಲ್ಲ ಬಿಜೆಪಿ ಶಾಸಕರು ಕಡ್ಡಾಯವಾಗಿ ಬೆಂಗಳೂರಿಗೆ ಬರುವಂತೆ ಈಗಾಗಲೇ ಫರ್ಮಾನು ಹೊರಡಿಸಲಾಗಿದೆ.

Karnataka BJP MLAs may move to Golden pams resort tomorrow

ಆಪರೇಷನ್ ಕಮಲದ ಮುಂದಿನ ಹಂತದ ಬಗ್ಗೆ ಯಡಿಯೂರಪ್ಪ ಅವರು ತಮ್ಮ ಶಾಸಕರಿಗೆ ವಿವರಿಸುತ್ತಾರೆ. ಹಾಗೆ ಮುಂದಿನ ದಿನಗಳಲ್ಲಿ ಪಕ್ಷದ ತಂತ್ರಗಾರಿಕೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಹಠಾತ್ತನೆ ಕಾಂಗ್ರೆಸ್ ಶಾಸಕರು ರೆಸಾರ್ಟ್‌ಗೆ ಹೋಗಿದ್ದೇಕೆ? ಹಠಾತ್ತನೆ ಕಾಂಗ್ರೆಸ್ ಶಾಸಕರು ರೆಸಾರ್ಟ್‌ಗೆ ಹೋಗಿದ್ದೇಕೆ?

ಕಾಂಗ್ರೆಸ್ ಪಕ್ಷವು ತನ್ನೆಲ್ಲಾ ಶಾಸಕರನ್ನು ರೆಸಾರ್ಟ್‌ನಲ್ಲಿ ಬಚ್ಚಿಟ್ಟಿರುವ ಕಾರಣ ಬಿಜೆಪಿಯು ಹೊಸ ರಣತಂತ್ರಕ್ಕೆ ಮೊರೆ ಹೋಗಲಿದೆ ಎನ್ನಲಾಗುತ್ತಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂದಿನ ನಡೆ ಏನು?ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂದಿನ ನಡೆ ಏನು?

ಇಂದು ಬೆಳಿಗ್ಗೆಯಷ್ಟೆ, ಯಡಿಯೂರಪ್ಪ ಅವರು, ನಾವು ಸರ್ಕಾರ ಬೀಳೀಸುವುದಿಲ್ಲ, ಜೆಡಿಎಸ್-ಕಾಂಗ್ರೆಸ್ ಅವರು ಹೆರಬಾರದು ಎಂದು ಹೇಳಿದ್ದಾರೆ ಆದರೆ ರಾಜಕೀಯ ಪಕ್ಷಗಳ ಅಳುಕು ತಿರಿಲ್ಲ.

English summary
Karnataka BJP MLAs may move to Golden pams resort tomorrow. All BJP MLAs will have meeting their in Yeddyurappa's leadership.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X