ರಾಜ್ಯಕ್ಕೆ 319 ಮೆಗಾವ್ಯಾಟ್ ವಿದ್ಯುತ್ ನೀಡಲು ಕೇಂದ್ರದ ಒಪ್ಪಿಗೆ
ನವದೆಹಲಿ, ಫೆಬ್ರವರಿ, 26: ಕೇಂದ್ರ ಇಂಧನ ಸಚಿವರಾದ ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿರುವ ರಾಜ್ಯ ಬಿಜೆಪಿ ಸಂಸದರ ನಿಯೋಗ ಕರ್ನಾಟಕಕ್ಕೆ ಅಗತ್ಯವಿರುವ ವಿದ್ಯುತ್ ಪೂರೈಕೆ ಮಾಡುವಂತೆ ಮನವಿ ಮಾಡಿದೆ. ಇದಕ್ಕೆ ಸ್ಪಂದಿಸಿದ ಕೇಂದ್ರ ಸಚಿವರು ರಾಜ್ಯಕ್ಕೆ 319 ಮೆಗಾವ್ಯಾಟ್ ವಿದ್ಯುತ್ತನ್ನು ಪೂರೈಸಲು ಒಪ್ಪಿದ್ದಾರೆ.
ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ ಸದಾನಂದ ಗೌಡ ಮತ್ತು ರಾಜ್ಯದ ಸಂಸದರಾದ ಪ್ರಹ್ಲಾದ ಜೋಷಿ, ಪ್ರತಾಪ್ ಸಿಂಹ, ಭಗವಂತ ಖೂಬಾ ಅವರನ್ನು ಒಳಗೊಂಡ ನಿಯೋಗವು ಕೇಂದ್ರ ಸಚಿವರನ್ನು ಭೇಟಿ ಮಾಡಿ ಶುಕ್ರವಾರ ಬೆಳಗ್ಗೆ ಮನವಿ ಸಲ್ಲಿಕೆ ಮಾಡಿತು.[ಕರ್ನಾಟಕಕ್ಕೆ ಬೇಸಿಗೆ ಬಿಸಿ ಜೊತೆಗೆ ಲೋಡ್ ಶೆಡ್ಡಿಂಗ್ ಹೊರೆ]

ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಎದುರಾಗಿದೆ. ಪರಿಣಾಮ ವಿದ್ಯುತ್ ಕೊರತೆ ಕಂಡುಬಂದಿದೆ. ದಿನಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಕೊರತೆ ತೀವ್ರವಾಗಿರುವುದು ಅಭಿವೃದ್ಧಿಗೆ ಹೊಡೆತವನ್ನು ಉಂಟುಮಾಡುತ್ತಿದೆ ಮತ್ತು ರೈತರಿಗೆ, ಕೈಗಾರಿಕೆಗಳಿಗೆ ಆಗುತ್ತಿರುವ ಸಮಸ್ಯೆ ಆಗುತ್ತಿದೆ ಎಂದು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು.
ಬೇಸಿಗೆ ಆರಂಭವಾಗುತ್ತಿದೆ ಜತೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಹತ್ತಿರವಾಗುತ್ತಿವೆ. ರಾಜ್ಯಕ್ಕೆ 500 ಮೆಗಾ ವ್ಯಾಟ್ ವಿದ್ಯುತ್ ಅಗತ್ಯವಿದ್ದು ಇದನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಮನವಿ ಮಾಡಲಾಯಿತು.[ಸೌರಶಕ್ತಿಯಿಂದ ಮನೆ ಬೆಳಗಿಸಿದ ಮೈಸೂರಿನ 'ಭಕ್ತವತ್ಸಲ']

ಮನವಿಗೆ ಸ್ಪಂದಿಸಿದ ಮಾನ್ಯ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಂದ ಪ್ರಸ್ತುತ ಶೇಖರಣೆಯಲ್ಲಿರುವ ವಿದ್ಯುತ್ ಪ್ರಮಾಣವನ್ನು ಪರಿಶೀಲಿಸಿ, ಅದರ ಅನ್ವಯ ಕೂಡಲೇ ರಾಜ್ಯಕ್ಕೆ 319 ಮೆಗಾವ್ಯಾಟ್ ವಿದ್ಯುತ್ತನ್ನು ಪೂರೈಸಲು ಒಪ್ಪಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications