ಕರ್ನಾಟಕ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ
ಬೆಂಗಳೂರು, ಜೂನ್ 11 : ಕರ್ನಾಟಕ ಬಿಜೆಪಿ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದೆ. ಶುಕ್ರವಾರ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ ಲೆಹರ್ ಸಿಂಗ್ ಅವರನ್ನು ಪಕ್ಷದ ಸಹ-ಖಜಾಂಚಿಯಾಗಿ ನೇಮಕ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದರು. ಪಕ್ಷದ ಖಜಾಂಚಿಯಾಗಿ ಸುಬ್ಬಣ್ಣ, ಸಹ ಖಜಾಂಚಿಯಾಗಿ ಲೆಹರ್ ಸಿಂಗ್ ಅವರನ್ನು ನೇಮಿಸಲಾಗಿದೆ. [2018ರ ಚುನಾವಣೆಗೆ ಯಡಿಯೂರಪ್ಪ ತಂಡ ಸಿದ್ಧ]

ಬೆಂಗಳೂರು ನಗರದ ಅಧ್ಯಕ್ಷರಾಗಿ ಪಿ.ಎನ್.ಸದಾಶಿವ, ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾಗಿ ಎಸ್.ಮುನಿರಾಜು, ಶಿವಮೊಗ್ಗದ ಅಧ್ಯಕ್ಷರಾಗಿ ಎಸ್.ರುದ್ರೇಗೌಡ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿ ಡಿ.ಎನ್.ಜೀವರಾಜ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. [150 ಸ್ಥಾನ ಪಡೆಯಲು ಯಡಿಯೂರಪ್ಪ ತಂತ್ರವೇನು?]
ಮೇ 26ರಂದು ಯಡಿಯೂರಪ್ಪ ಅವರು ರಾಜ್ಯ ಪದಾಧಿಕಾರಿಗಳನ್ನು ಬದಲಾವಣೆ ಮಾಡಿದ್ದರು. ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬಿ.ಪಿ.ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ಶೋಭಾ ಕರಂದ್ಲಾಜೆ, ಸಿ.ಟಿ.ರವಿ ಅವರನ್ನು ನೇಮಕ ಮಾಡಲಾಗಿತ್ತು. ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿತ್ತು. [ಯಡಿಯೂರಪ್ಪ ಮುಂದಿರುವ 6 ಪ್ರಮುಖ ಸವಾಲುಗಳು]
ನೂತನ ಜಿಲ್ಲಾಧ್ಯಕ್ಷರ ಪಟ್ಟಿ














Click it and Unblock the Notifications