ಕುಮಾರಸ್ವಾಮಿ-ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆಗೆ ಬಿಜೆಪಿ ಸಿದ್ಧತೆ

Recommended Video

      ಸಿದ್ದರಾಮಯ್ಯ, ಕುಮಾರಸ್ವಾಮಿ ಹೇಳಿಕೆಗೆ ತಿರುಗಿ ಬಿದ್ದ ಬಿಜೆಪಿ | Oneindia Kannada

      ಬೆಂಗಳೂರು, ಜೂನ್ 28: ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರು ಇತ್ತೀಚೆಗೆ ನೀಡಿರುವ ಹೇಳಿಕೆಗಳನ್ನು ಖಂಡಿಸಿ ಅವರಿಬ್ಬರ ವಿರುದ್ಧ ಪ್ರತಿಭಟನೆ ನಡೆಸಲು ರಾಜ್ಯ ಬಿಜೆಪಿ ಸಜ್ಜಾಗಿದೆ.

      ಕೆಲಸ ನಾವು ಮಾಡಬೇಕು ಮತ ಮೋದಿಗೆ ಹಾಕ್ತೀರಾ? ಎಂದು ಸಿಎಂ ಕುಮಾರಸ್ವಾಮಿ ಅವರು ಮೊನ್ನೆಯಷ್ಟೆ ಕೇಳಿದ್ದರು, ಅದರ ಬೆನ್ನಲ್ಲೆ ಸಿದ್ದರಾಮಯ್ಯ ಅವರು ಸಹ ಅದೇ ಮಾದರಿಯ ಹೇಳಿಕೆ ನೀಡಿದ್ದರು. ಇದು ಭಾರಿ ಚರ್ಚೆಗೆ ಕಾರಣವಾಗಿತ್ತು.

      ಈ ಇಬ್ಬರು ಮೈತ್ರಿ ನಾಯಕರ ಹೇಳಿಕೆಯ ವಿರುದ್ಧ ರಾಜ್ಯ ಬಿಜೆಪಿಯು ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

      Karnataka BJP planing to do protest against Kumaraswamy-Siddaramaiah

      ಜೂನ್ 26 ರಂದು ಗ್ರಾಮ ವಾಸ್ತವ್ಯಕ್ಕೆಂದು ಕುಮಾರಸ್ವಾಮಿ ಅವರು ತೆರಳುವ ಸಂದರ್ಭದಲ್ಲಿ ವೈಟಿಪಿಎಸ್ ಪ್ರತಿಭಟನಾಕಾರರು ಬಸ್ ಗೆ ಮುತ್ತಿಗೆ ಹಾಕಿದೆ ಸಂದರ್ಭ ಸಿಟ್ಟಿಗೆದ್ದ ಕುಮಾರಸ್ವಾಮಿ, ವೋಟು ಮೋದಿಗೆ ಹಾಕ್ತೀರಾ, ಕೆಲಸ ಮಾಡಿಸುವಂತೆ ನನ್ನನ್ನು ಕೇಳುತ್ತೀರಾ? ಎಂದು ಕೂಗಾಡಿದ್ದರು, ಅಷ್ಟೆ ಅಲ್ಲದೆ, ಲಾಠಿ ಚಾರ್ಜ್ ಮಾಡಿಸಬೇಕಾ? ಎಂದು ಸಹ ಕೇಳಿದ್ದರು. ಇದು ರಾಜ್ಯದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

      ನಿನ್ನೆ ಬಾದಾಮಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು, ಅಕ್ಕಿ ಕೊಟ್ಟಿದ್ದು ನಾವು, ಮಕ್ಕಳಿಗೆ ಮೊಟ್ಟೆ ಕೊಟ್ಟಿದ್ದು ನಾವು, ಎಲ್ಲ ಅಭಿವೃದ್ಧಿ ನಾವು ಮಾಡಿ, ಮೋದಿಗೆ ಮತ ಹಾಕ್ತೀರಲ್ಲ ಎಂದು ಪ್ರಶ್ನೆ ಮಾಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+