Narendra Modi PM Swearing: ನರೇಂದ್ರ ಮೋದಿಗೆ ಬಿ.ವೈ ವಿಜಯೇಂದ್ರ ಸ್ಪೆಷಲ್ ವಿಶ್
ಬೆಂಗಳೂರು, ಜೂನ್ 09: ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಭಾರತದ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನೇನು ಕೆಲವೇ ಗಂಟೆಗಳಲ್ಲಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಕೋಟ್ಯಂತರ ಭಾರತೀಯ ಸಾಕ್ಷಿಯಾಗಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ವಿಶೇಷ ಸಂದರ್ಭದಲ್ಲಿ ನರೇಂದ್ರ ಮೋದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ. ಸ್ವಾತಂತ್ರ್ಯಾ ನಂತರ ದೇಶದ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದ ಚಾರಿತ್ರಿಕ ಪ್ರಧಾನಿ ನಮ್ಮ ನೆಚ್ಚಿನ ನರೇಂದ್ರ ಮೋದಿ ಅವರು ಭಾರತದ ಹೆಮ್ಮೆ.

18ನೇ ಲೋಕಸಭೆಗೆ ನಡೆದ ಮಹಾ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟದ ಯಶಸ್ವಿ ನಾಯಕರಾಗಿ, ದಶಕ ಪೂರೈಸಿದ ಸಮರ್ಥ ಪ್ರಧಾನಿಯಾಗಿ. ತಮ್ಮ ಅಭಿವೃದ್ಧಿ ಕಾರ್ಯಗಳಿಂದ ಶತಕೋಟಿ ಭಾರತೀಯರು ಮೆಚ್ಚಿದ ನೇತಾರರಾಗಿ 3ನೇ ಬಾರಿ ಪ್ರಧಾನಿ ಪಟ್ಟಕ್ಕೇರುತ್ತಿರುವ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರನ್ನು ಕರುನಾಡಿನ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಕರ್ನಾಟಕದ ಬಿಜೆಪಿ ಅಭಿನಂದಿಸುತ್ತದೆ.
ದಕ್ಷಿಣ ಭಾರತದಲ್ಲಿ ಭಾರತೀಯ ಜನತಾ ಪಾರ್ಟಿ ಹಾಗೂ ಎನ್.ಡಿ.ಎ ಮೈತ್ರಿ ಕೂಟಕ್ಕೆ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿ ಕೊಟ್ಟಿರುವ ಕರ್ನಾಟಕದ ಜನತೆ ಮೋದಿ ಅವರ ಹ್ಯಾಟ್ರಿಕ್ ಸಾಧನೆಯ ಸಡಗರದಲ್ಲಿ ಬಹುದೊಡ್ಡ ಭಾಗೀದಾರರಾಗಿದ್ದು ಜಾಗತಿಕ ಮಟ್ಟದಲ್ಲಿ ಮೋದಿ ಜೀ ಅವರ ನೇತೃತ್ವದಲ್ಲಿ ಮುಂಚೂಣಿ ಸ್ಥಾನದಲ್ಲಿ ನಡೆದಿರುವ ಭಾರತದ ಅಭಿವೃದ್ಧಿಯು ಉತ್ತುಂಗಕ್ಕೆ ತಲುಪಬೇಕೆಂದು ಬಯಸಿ ಆಶೀರ್ವದಿಸಿದ್ದಾರೆ. ಅಂತೆಯೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆಗಳನ್ನು ಮೋದಿ ಅವರ ನೇತೃತ್ವದ ಎನ್.ಡಿ.ಎ ಸರ್ಕಾರದಿಂದ ನಿರೀಕ್ಷಿಸಿದ್ದಾರೆ.
ಅಚಲ ವಿಶ್ವಾಸದ ಸಂಕೇತವಾಗಿರುವ ಮೋದಿ ಜೀ ಅವರ ಆಡಳಿತದಲ್ಲಿ ಕನ್ನಡನಾಡು ಸಮೃದ್ಧವಾಗಿ ಬೆಳೆಯಲಿದೆ, ನಿರೀಕ್ಷೆ ಮೀರಿ ಕೊಡುಗೆಗಳನ್ನು ಪಡೆಯಲಿದೆ ಎಂಬ ನಿಶ್ಚಲ ನಂಬಿಕೆ ನಮ್ಮದಾಗಿದೆ. ರಾಜ್ಯದ ಜನತೆಯ ಆಶೀರ್ವಾದದ ಬೆಂಬಲ ಮೋದಿ ಜೀ ಅವರ ಅಭಿವೃದ್ಧಿ ಕಾರ್ಯಗಳಿಗೆ ಶ್ರೀರಕ್ಷೆಯಾಗಲಿ ಹಾಗೂ ಸುಭದ್ರ ಭಾರತ ಕಟ್ಟುವ ಅವರ ಯೋಜನೆಗಳಿಗೆ ಬೆನ್ನೆಲುಬಾಗಲಿ ಎಂಬ ಹಾರೈಕೆಯೊಂದಿಗೆ ಮಾನ್ಯ ನರೇಂದ್ರ ಮೋದಿಯವರನ್ನು ಆತ್ಮೀಯವಾಗಿ ಅಭಿಂದಿಸೋಣ ಎಂದು ಬಿ.ವೈ ವಿಜಯೇಂದ್ರ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications