ಲೋಕಸಭಾ ಚುನಾವಣೆ 2019 : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ
Recommended Video

ಬೆಂಗಳೂರು, ಜನವರಿ 02 : 2019ರ ಲೋಕಸಭಾ ಚುನಾವಣೆಗೆ ಕರ್ನಾಟಕ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೆಚ್ಚಿನ ಅಧಿಕಾರವನ್ನು ಅಮಿತ್ ಶಾ ಅವರು ನೀಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆಯಂತೆ ಬಿ.ಎಸ್.ಯಡಿಯೂರಪ್ಪ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಜನವರಿ 10ರೊಳಗೆ ಪಟ್ಟಿಯನ್ನು ದೆಹಲಿಗೆ ಕಳುಹಿಸಿಕೊಡುವಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆ.
ಅಮಿತ್ ಶಾ ಅವರು ತಮ್ಮ ತಂಡದ ಮೂಲಕ ರಾಜ್ಯದಲ್ಲಿ ರಹಸ್ಯ ಸಮೀಕ್ಷೆ ನಡೆಸಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಬೇಕು?, ಹಾಲಿ ಸಂಸದರ ಪರ ಅಲೆ ಹೇಗಿದೆ? ಎಂದು ಈ ತಂಡ ವರದಿ ಸಿದ್ಧಪಡಿಸಿದ್ದು, ಹೈಕಮಾಂಡ್ ನಾಯಕರಿಗೆ ನೀಡಿದೆ.
ಕೆಲವು ಕ್ಷೇತ್ರಗಳಿಗೆ ಇಬ್ಬರಿಗಿಂತ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೊಣೆಯನ್ನು ಯಡಿಯೂರಪ್ಪ ಅವರು ಹೈಕಮಾಂಡ್ ನಾಯರಿಗೆ ನೀಡಿದ್ದಾರೆ. ಅನಂತ್ ಕುಮಾರ್ ಅವರ ನಿಧನದಿಂದ ತೆರವಾದ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. 28 ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ....

ಬೆಂಗಳೂರು ವಲಯ
* ಬೆಂಗಳೂರು ದಕ್ಷಿಣ - ತೇಜಸ್ವಿನಿ ಅನಂತ್ ಕುಮಾರ್
* ಬೆಂಗಳೂರು ಉತ್ತರ - ಡಿ.ವಿ.ಸದಾನಂದ ಗೌಡ
* ಬೆಂಗಳೂರು ಕೇಂದ್ರ - ಪಿ.ಸಿ.ಮೋಹನ್
* ಬೆಂಗಳೂರು ಗ್ರಾಮಾಂತರ - ಸಿ.ಪಿ.ಯೋಗೇಶ್ವರ, ತುಳಸಿ ಮುನಿರಾಜು ಗೌಡ

ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ
* ಚಿಕ್ಕಬಳ್ಳಾಪುರ - ಬಿ.ಎನ್.ಬಚ್ಚೇಗೌಡ, ಕಟ್ಟಾ ಸುಬ್ರಮಣ್ಯ ನಾಯ್ಡು
* ಕೋಲಾರ - ಡಿ.ಎಸ್.ವೀರಯ್ಯ, ಚಿ.ನಾ.ರಾಮು, ನಾರಾಯಣ ಸ್ವಾಮಿ
* ಮೈಸೂರು-ಕೊಡಗು - ಪ್ರತಾಪ್ ಸಿಂಹ
* ತುಮಕೂರು - ಜಿ.ಎಸ್.ಬಸವರಾಜು

ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
* ಚಾಮರಾಜನಗರ - ಎಂ.ಶಿವಣ್ಣ, ವಿ.ಶ್ರೀನಿವಾಸ ಪ್ರಸಾದ್
* ಚಿತ್ರದುರ್ಗ - ಜನಾರ್ದನ ಸ್ವಾಮಿ
* ಶಿವಮೊಗ್ಗ - ಬಿ.ವೈ.ರಾಘವೇಂದ್ರ
* ದಾವಣಗೆರೆ - ಜಿ.ಎಂ.ಸಿದ್ದೇಶ್ವರ
* ಚಿಕ್ಕಮಗಳೂರು - ಉಡುಪಿ - ಶೋಭಾ ಕರಂದ್ಲಾಜೆ, ಜಯಪ್ರಕಾಶ್ ಹೆಗ್ಡೆ

ದಕ್ಷಿಣ ಕನ್ನಡ, ಉತ್ತರ ಕನ್ನಡ
* ದಕ್ಷಿಣ ಕನ್ನಡ - ನಳೀನ್ ಕುಮಾರ್ ಕಟೀಲ್
* ಉತ್ತರ ಕನ್ನಡ - ಅನಂತ್ ಕುಮಾರ್ ಹೆಗಡೆ
* ಚಿಕ್ಕೋಡಿ - ರಮೇಶ್ ಕತ್ತಿ
* ಬೆಳಗಾವಿ - ಸುರೇಶ್ ಅಂಗಡಿ

ಧಾರವಾಡ, ಹಾವೇರಿ, ಕೊಪ್ಪಳ, ಬೀದರ್
* ಧಾರವಾಡ - ಪ್ರಹ್ಲಾದ್ ಜೋಶಿ
* ಹಾವೇರಿ-ಗದಗ - ಶಿವಕುಮಾರ್ ಉದಾಸಿ
* ಕೊಪ್ಪಳ - ಸಂಗಣ್ಣ ಕರಡಿ
* ಬೀದರ್ - ಭಗವಂತ್ ಖೂಬಾ
* ಬಾಗಲಕೋಟೆ - ಪಿ.ಸಿ.ಗದ್ದಿಗೌಡರ್
* ವಿಜಯಪುರ - ರಮೇಶ್ ಜಿಗಜಿಣಗಿ
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications