ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವೇಷ ರಾಜಕಾರಣದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಬಿಜೆಪಿ

|
Google Oneindia Kannada News

ಬೆಂಗಳೂರು, ಮೇ 04: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವು ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ರಾಜ್ಯ ಬಿಜೆಪಿ ಇದರ ವಿರುದ್ಧವಾಗಿ ರಾಜ್ಯದಾದ್ಯಂತ ಮೇ 6ರಂದು ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ, ರಾಜ್ಯದ ಮೈತ್ರಿ ಸರ್ಕಾರವು ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸುವ ಬದಲಿಗೆ ವಿರೋಧ ಪಕ್ಷವನ್ನು ಅಧಿಕಾರ ಬಳಸಿ ಹತ್ತಿಕ್ಕುವ ಪ್ರಯತ್ನದಲ್ಲಿ ನಿರತವಾಗಿದೆ ಎಂದು ಹೇಳಿದೆ.

ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಆಗುವ ಸುಳಿವು ದೊರೆತ ಮೇಲಂತೂ ಮೈತ್ರಿ ಸರ್ಕಾರವು ಸ್ಥಿಮಿತ ಕಳೆದುಕೊಂಡಿದ್ದು ವಿರೋಧ ಪಕ್ಷದ ವಿರುದ್ದ ಹಾಗೂ ಮಾಧ್ಯಮಗಳನ್ನೂ ಹತ್ತಿಕ್ಕುವ ಕಾರ್ಯದಲ್ಲಿ ನಿರತವಾಗಿದೆ ಎಂದು ಬಿಜೆಪಿ ಹೇಳಿದೆ.

Karnataka BJP protesting against coalition government on May 6

ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ಬಗ್ಗೆ ವಿಶೇಷವಾಗಿ ಉಲ್ಲೇಖಿಸಿರುವ ಬಿಜೆಪಿ, ಧರ್ಮ ವಿಭಜನೆಗೆ ಮುಂದಾಗಿದ್ದ ಎಂ.ಬಿ.ಪಾಟೀಲ್ ಅವರು ದ್ವೇಷ ರಾಜಕಾರಣದ ಮುಂಚೂಣಿಯಲ್ಲಿದ್ದಾರೆ ಎಂದಿದೆ. ಮಾಧ್ಯಮಗಳ ಬಾಯಿ ಮುಚ್ಚಿಸುವ ಯತ್ನದಲ್ಲಿ ಎಂ.ಬಿ.ಪಾಟೀಲ್ ನಿರತರಾಗಿದ್ದಾರೆ ಎಂದು ಹೇಳಿದೆ.

ಪ್ರಚಾರದ ಕೊನೇ ದಿನ ರಾಹುಲ್ ನಾಡಿನಲ್ಲಿ ಅಮಿತ್ ಶಾ ಬೃಹತ್ ರೋಡ್ ಶೋಪ್ರಚಾರದ ಕೊನೇ ದಿನ ರಾಹುಲ್ ನಾಡಿನಲ್ಲಿ ಅಮಿತ್ ಶಾ ಬೃಹತ್ ರೋಡ್ ಶೋ

ಮೈತ್ರಿ ಸರ್ಕಾರದ ಈ ದ್ವೇಷ ರಾಜಕಾರಣವನ್ನು ವಿರೋಧಿಸಿ ಬಿಜಪಿಯು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೇ 6 ರಂದು ಪ್ರತಿಭಟನೆ ನಡೆಸಲಿದ್ದು, ರಾಜ್ಯಪಾಲರಿಗೆ ದೂರು ನೀಡಲಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

English summary
Karnataka BJP protesting state wise against coalition government on May 6. Karnataka BJP saying coalition government is doing hate politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X