ಸಿದ್ದರಾಮಯ್ಯ ಸಾಹೇಬ್ರು ನಿದ್ದೆಯಿಂದ ತಕ್ಷಣವೇ ಎಚ್ಚರಗೊಳ್ಳುವಂತೆ ಮಾಡುವ ಅಂಶಗಳು: ಬಿಜೆಪಿ
ಬೆಂಗಳೂರು, ಜನವರಿ 17: ಮಜವಾದಿ ಸಿದ್ದರಾಮಯ್ಯ ಅವರು ನಿದ್ದೆಗೆ ಶರಣಾಗುವಂತೆ ಮಾಡುವ ಅಂಶಗಳು ಎಂದು ಒಂದಿಷ್ಟು ವಿಚಾರಗಳನ್ನು ಪಟ್ಟಿ ಮಾಡಿದೆ. ರೈತರಿಗೆ ಕೊಡುವ ಪರಿಹಾರ, ಕರ್ನಾಟಕಕ್ಕೆ ಕಾವೇರಿ ನೀರು, ಮಹಿಳೆಯರಿಗೆ ಕೊಡಬೇಕಾದ ರಕ್ಷಣೆ, ಹಿಂದೂ ದೇವಾಲಯಗಳಿಗೆ ಅನುದಾನ, ಈಡೇರಿಸಲಾಗದ ಗ್ಯಾರಂಟಿಗಳು ಇವು ಸಿದ್ದರಾಮಯ್ಯ ನಿದ್ದೆಗೆ ಶರಣಾಗುವಂತೆ ಮಾಡುವ ಅಂಶಗಳು ಎಂದು ಬಿಜೆಪಿ ಟೀಕಿಸಿದೆ.
ಮಜವಾದಿ @siddaramaiah ಅವರು ನಿದ್ದೆಗೆ ಶರಣಾಗುವಂತೆ ಮಾಡುವ ಅಂಶಗಳು :
— BJP Karnataka (@BJP4Karnataka) January 17, 2024
▪ ರೈತರಿಗೆ ಕೊಡುವ ಪರಿಹಾರ
▪ ಕರ್ನಾಟಕಕ್ಕೆ ಕಾವೇರಿ ನೀರು
▪ ಮಹಿಳೆಯರಿಗೆ ಕೊಡಬೇಕಾದ ರಕ್ಷಣೆ
▪ ಹಿಂದೂ ದೇವಾಲಯಗಳಿಗೆ ಅನುದಾನ
▪ ಈಡೇರಿಸಲಾಗದ ಗ್ಯಾರಂಟಿಗಳು
ಸಿದ್ದರಾಮಯ್ಯ ಸಾಹೇಬ್ರು ನಿದ್ದೆಯಿಂದ ತಕ್ಷಣವೇ ಎಚ್ಚರಗೊಳ್ಳುವಂತೆ ಮಾಡುವ ಅಂಶಗಳು :
▪…
ಸಿದ್ದರಾಮಯ್ಯ ಸಾಹೇಬ್ರು ನಿದ್ದೆಯಿಂದ ತಕ್ಷಣವೇ ಎಚ್ಚರಗೊಳ್ಳುವಂತೆ ಮಾಡುವ ಅಂಶಗಳು
▪ ಮೌಲ್ವಿಗಳಿಗೆ ₹10 ಸಾವಿರ ಕೋಟಿ ಕೊಡಬೇಕು
▪ ಮತಾಂಧ ಜಿಹಾದಿಗಳನ್ನು ರಕ್ಷಣೆ ಮಾಡಬೇಕು
▪ ಪಿಎಫ್ಐ ಗೂಂಡಾಗಳನ್ನು ಅಮಾಯಕರೆಂದು ಬಿಡಬೇಕು
▪ ಶಾಲೆಗಳಲ್ಲಿ ಹಿಜಾಬ್ ಹಾಕಿಕೊಂಡು ಹೋಗಬಹುದು
▪ ಗ್ಯಾಂಗ್ ರೇಪ್ ಮಾಡಿದವರನ್ನು ಹೊರ ಬಿಡಬೇಕು

ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿಗಳನ್ನು ಸೃಷ್ಟಿಸುವುದು ಸಿಎಂ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿಯೇ "ಸಿದ್ದಿ"ಸಿದೆ. ನಕಲಿ ಸುದ್ದಿಗಳನ್ನು ರಚಿಸುತ್ತಾ ಕಾಲಹರಣ ಮಾಡುವ ಬದಲು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಯೋಚಿಸಿದ್ದರೆ, ರೈತರು ಆತ್ಮಹತ್ಯೆಗೆ ಶರಣಾಗುತ್ತಿರಲಿಲ್ಲ, ಮಹಿಳೆಯರ ಮೇಲೆ ಹಲ್ಲೆ , ಮಾನಭಂಗಗಳು ನಡೆಯುತ್ತಿರಲಿಲ್ಲ.
ಎಲ್ಲೆಂದರಲ್ಲಿ ಸದಾ ನಿದ್ದೆಗೆ ಜಾರುವುದು ನೀವು ಎಂಬುದು ಜಗತ್ತಿಗೆ ತಿಳಿದಿರುವ ವಿಷಯ. ದಿನಕ್ಕೆ 18 ಗಂಟೆ ಕೆಲಸ ಮಾಡುವ ಪ್ರಧಾನಿಯವರನ್ನು ಅವಹೇಳನ ಮಾಡಿದರೆ ಜನ ನಂಬುತ್ತಾರೆ ಎಂಬ ಭ್ರಮೆಯಿಂದ ಆದಷ್ಟು ಬೇಗ ಹೊರ ಬನ್ನಿ. ಸರ್ಕಾರವನ್ನು ಮೋದಿ ಮಾದರಿಯಲ್ಲಿ ಮುನ್ನಡೆಸಿ ಜನರ ಸಮಸ್ಯೆಯನ್ನು ಬಗೆಹರಿಸಿ.

ಇನ್ನೊಂದು ಟ್ವೀಟ್ ಮಾಡಿರುವ ಬಿಜೆಪಿ, ನೇಮಕಾತಿಗಳು ನಡೆಯುವಲ್ಲೆಲ್ಲವೂ ಕಾಂಗ್ರೆಸ್ ಬಂದಾಗಿನಿಂದ ಅಲ್ಲೋಲ ಕಲ್ಲೋಲಗಳೇ ನಡೆಯುತ್ತಿವೆ. ಕರ್ನಾಟಕ ಲೋಕಸೇವಾ ಆಯೋಗದಲ್ಲೂ ಹಿತಾಸಕ್ತಿಗಳ ಸಂಘರ್ಷ ಶುರುವಾಗಿದ್ದು ಸಾವಿರಾರು ನೇಮಕಾತಿಗಳ ಸ್ಥಿತಿ ಡೋಲಾಯಮಾನವಾಗಿದೆ. ಕೆಪಿಎಸ್ಸಿ ಒಳಗೂ ನಡೆಯುತ್ತಿರುವ ಜಟಾಪಟಿ ನೋಡಿದರೆ ಹಲೋ ಅಪ್ಪ ಎಂದು ಅಲ್ಲಿಗೂ ಫೋನ್ ಹೋದಂತಿದೆ. ಕೆಪಿಎಸ್ಸಿಯಲ್ಲೂ #ATMSarkara ಹೊಸ ಎಟಿಎಂ ತೆರೆದಿರುವುದು ಸ್ಪಷ್ಟವಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications