ಉಪಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆಯ ಸುದ್ದಿಗೆ ತೆರೆ ಎಳೆದ ಬಿಜೆಪಿ ವರಿಷ್ಠರು
ಬೆಂಗಳೂರು, ಫೆ 5: ಪಕ್ಷಕ್ಕೆ ಬೇರಿಲ್ಲದ ಕೆ.ಆರ್.ಪೇಟೆ ಮತ್ತು ಶಿರಾ ಅಸೆಂಬ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಪಕ್ಷದಲ್ಲಿ ಬೈಎಲೆಕ್ಷನ್ ಸ್ಪೆಷಲಿಸ್ಟ್ ಎಂದೇ ಹೆಸರು ಪಡೆದಿದ್ದ ಸಿಎಂ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು.
ವಿಜಯೇಂದ್ರ ಮತ್ತು ಖುದ್ದು ಸಿಎಂ ಈ ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದರೂ, ಪಕ್ಷದಲ್ಲಿ ನಡೆಯುತ್ತಿದ್ದ ಆಂತರಿಕ ಬೆಳವಣಿಗೆಯಿಂದಾಗಿ ಮತ್ತೆಮತ್ತೆ ಆ ಸುದ್ದಿ ಮುನ್ನಲೆಗೆ ಬರುತ್ತಿತ್ತು.
ಉಪಚುನಾವಣೆಯ ನಂತರ ವಿಜಯೇಂದ್ರ ರಾಜಕೀಯವಾಗಿ ಬೆಳೆಯುತ್ತಿದ್ದ ರೀತಿ ಬಿಜೆಪಿಯವರಿಗೇ ಹೊಟ್ಟೆ ಉರಿಸುವಂತಿತ್ತು. ಜೊತೆಗೆ, ಸರಕಾರದ ದೈನಂದಿನ ಆಡಳಿತದಲ್ಲಿ ಮೂಗು ತೂರಿಸುತ್ತಿದ್ದಾರೆ ಎನ್ನುವ ದೂರು ವರಿಷ್ಠರ ಬಳಿಗೆ ಹೋಗಿತ್ತು.
ಬಸವಕಲ್ಯಾಣದಲ್ಲಿ ಕಾರ್ಯಕರ್ತರ ಮತ್ತು ಸ್ಥಳೀಯ ಮುಖಂಡರ ಸಭೆಯನ್ನು ವಿಜಯೇಂದ್ರ ನಡೆಸಿದ್ದರು. ಇದರಿಂದಾಗಿ, ಅವರು ಅಲ್ಲಿಂದ ಸ್ಪರ್ಧಿಸುತ್ತಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿತ್ತು. ಈಗ ವರಿಷ್ಠರು ಆ ಸುದ್ದಿಗೆ ತೆರೆ ಎಳೆದಿದ್ದಾರೆ.

ಕಾಂಗ್ರೆಸ್ ಶಾಸಕರಾಗಿದ್ದ ಬಿ.ನಾರಾಯಣ ರಾವ್
ಕಾಂಗ್ರೆಸ್ ಶಾಸಕರಾಗಿದ್ದ ಬಿ.ನಾರಾಯಣ ರಾವ್ ನಿಧನದ ನಂತರ ತೆರವಾಗಿರುವ ಬಸವಕಲ್ಯಾಣ ಅಸೆಂಬ್ಲಿ ಕ್ಷೇತ್ರದ ಉಪಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆಯಾಗುವ ಸಾಧ್ಯತೆಯಿದೆ. ಇಲ್ಲಿ ಇದುವರೆಗೆ ಬಿಜೆಪಿ ಗೆದ್ದದ್ದು ಒಂದೇ ಬಾರಿ. ಮರಾಠಿ ಪ್ರಾಬಲ್ಯವಿರುವ ಕ್ಷೇತ್ರವಾಗಿರುವುದರಿಂದ ಮರಾಠ ಅಭಿವೃದ್ದಿ ನಿಗಮವನ್ನು ಬಿಎಸ್ವೈ ಘೋಷಿಸಿದ್ದರು. ಇದು ಭಾರೀ ವಿರೋಧಕ್ಕೆ ಕಾರಣವಾಗಿತ್ತು.

ಬೆಳಗಾವಿ ಲೋಕಸಭಾ ಉಪಚುನಾವಣೆ
ಇತ್ತೀಚೆಗೆ ಹಲವು ಬಾರಿ ವಿಜಯೇಂದ್ರ ದೆಹಲಿಗೆ ಭೇಟಿ ನೀಡಿದ್ದರು. ಇದು, ಉಪಚುನಾವಣೆಯಲ್ಲಿ ಇವರು ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿಗೆ ಇನ್ನಷ್ಟು ಪುಷ್ಟಿ ನೀಡಿತ್ತು. ಈಗ, ಉಪಚುನಾವಣೆ ನಡೆಯುತ್ತಿರುವ ಮಸ್ಕಿ, ಬಸವಕಲ್ಯಾಣ ಅಸೆಂಬ್ಲಿ ಮತ್ತು ಬೆಳಗಾವಿ ಲೋಕಸಭಾ ಚುನಾವಣೆಯ ಪೈಕಿ, ಒಂದು ಕ್ಷೇತ್ರಕ್ಕೆ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಮಸ್ಕಿ ವಿಧಾನಸಭಾ ಉಪಚುನಾವಣೆಗೆ ವಿಜಯೇಂದ್ರ ಉಸ್ತುವಾರಿ
ಬಿಜೆಪಿ ವರಿಷ್ಠರು ಮಸ್ಕಿ ವಿಧಾನಸಭಾ ಉಪಚುನಾವಣೆಗೆ ವಿಜಯೇಂದ್ರ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಿದ್ದಾರೆ. ಆ ಮೂಲಕ, ಬಸವಕಲ್ಯಾಣದಿಂದ ಅವರು ಸ್ಪರ್ಧಿಸಲಿದ್ದಾರೆ ಎನ್ನುವ ಎಲ್ಲಾ ಸುದ್ದಿಗೆ ತೆರೆಬಿದ್ದಂತಾಗಿದೆ. ಇವರ ಜೊತೆಗೆ, ಶ್ರೀರಾಮುಲು, ರವಿಕುಮಾರ್, ನೇಮಿರಾಜ್ ನಾಯಕ್, ರಾಜೂ ಗೌಡ ಮತ್ತು ಶಿವರಾಜ್ ಪಾಟೀಲ್ ಅವರನ್ನೂ ಮಸ್ಕಿಗೆ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
Recommended Video

ಬಸವಕಲ್ಯಾಣಕ್ಕೆ ಬೇರೆ ಉಸ್ತುವಾರಿ
ಬಸವಕಲ್ಯಾಣದಲ್ಲಿ ಪಕ್ಷದ ಜಯಕ್ಕೆ ಗ್ರೌಂಡ್ ವರ್ಕ್ ಮಾಡುತ್ತಿದ್ದ ವಿಜಯೇಂದ್ರಗೆ ಅಲ್ಲಿನ ಉಸ್ತುವಾರಿಯನ್ನೂ ನೀಡದಿರುವುದು ಅಚ್ಚರಿಯನ್ನು ಉಂಟು ಮಾಡಿದೆ. ಬಸವಕಲ್ಯಾಣಕ್ಕೆ ಡಿಸಿಎಂ ಲಕ್ಷ್ಮಣ ಸವದಿ, ಸೋಮಣ್ಣ, ಬಸವರಾಜ ಬೊಮ್ಮಾಯಿ ಮುಂತಾದವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications