Industry: ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದ ಯೋಜನೆಗಳು, ಅನುದಾನದ ವಿವರ
ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಈಗಾಗಲೇ ಕೈಗಾರಿಕಾ ನೀತಿ 2025-30 ಜಾರಿಗೊಳಿಸಲಾಗಿದೆ. ಇದಕ್ಕೆ ಅನುಮೋದನೆ ನೀಡುವ ಜೊತೆಗೆ ಸಾಕಷ್ಟು ಯೋಜನೆಗಳಿಗೆ ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಐಐಐಟಿ-ಬೆಂಗಳೂರಿನಲ್ಲಿ ಮೂಲಸೌಕರ್ಯ ವಿಸ್ತರಣೆ ಅನುದಾನ ಪೂರೈಕೆ ಒಳಗೊಂಡಂತೆ ವಿವಿಧ ಮೂಲ ಸೌಕರ್ಯ ಯೋಜನೆಗಳನ್ನು ಜಾರಿಗೆ ತರಲು ಅನುಮೋದನೆ ನೀಡಲಾಯಿತು.
ಒಂದು ವಾರದ ಹಿಂದಷ್ಟೇ ಇನ್ವೆಸ್ಟ್ ಕರ್ನಾಟಕ 2025 ಪೂರ್ಣಗೊಂಡಿದೆ. ಐಐಐಟಿ-ಬೆಂಗಳೂರು ಮೂಲ ಸೌಕರ್ಯ ಒದಗಿಸುವ ಒಟ್ಟು 817 ಕೋಟಿ ರೂ.ಯೋಜನೆಗೆ ಕರ್ನಾಟಕವು ಶೇ. 35 ರಷ್ಟು ಅಂದರೆ 285.95 ಕೋಟಿ ರೂ. ನೀಡುವುದಾಗಿ ಒಪ್ಪಿದೆ. ಇದನ್ನು ಮುಂದಿನ ತಿಂಗಳು ಮಂಡನೆ ಆಗಲಿರುವ ಕರ್ನಾಟಕ ಬಜೆಟ್ 2024-25ನಲ್ಲಿ ಘೋಷಿಸಲಿದೆ. ಬಾಕಿ ಮೊತ್ತವನ್ನು ಏಳು ವರ್ಷಗಳಲ್ಲಿ ನೀಡಲು ಸರ್ಕಾರ, ಸಂಪುಟವು ತೀರ್ಮಾನಿಸಿದೆ. ಬಾಕಿ ಹಣ ವಿವಿಧ ಮೂಲಗಳಿಂದ ಐಐಐಟಿ ಬೆಂಗಳೂರು ಪಡೆದುಕೊಳ್ಳಲು ಮುಂದಾಗಿದೆ ಎಂದು TNIE ವರದಿ ಮಾಡಿದೆ.

ಕರ್ನಾಟಕ ಸರ್ಕಾರ ಮೈಸೂರು, ಹುಬ್ಬಳ್ಳಿ ಮತ್ತು ಮಂಗಳೂರಿನಲ್ಲಿ ಸ್ಟಾರ್ಟ್ಅಪ್ ಉತ್ತೇಜನಕ್ಕಾಗಿ 75 ಕೋಟಿ ರೂ.ಗಳ ಕ್ಲಸ್ಟರ್ ಸೀಡ್ ಫಂಡ್ ಸ್ಥಾಪನೆಗೆ ನಿರ್ಧರಿಸಿದೆ. 70.805 ಕೋಟಿ ರೂ.ಗಳಲ್ಲಿ ಸೆಮಿ-ಕಂಡಕ್ಟರ್ ಫ್ಯೂಚರ್ ಆಕ್ಸಿಲರೇಟರ್ ಲ್ಯಾಬ್ 2.0 ಸ್ಥಾಪನೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ. 2025 ಮತ್ತು 2030 ರ ನಡುವೆ ರಾಜ್ಯವು ತನ್ನ ಪಾಲನ್ನು 50.33 ಕೋಟಿ ರೂ.ಗಳಿಗೆ ಒದಗಿಸುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.
50,000 ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸಲು ಕ್ಲೀನ್ ಮೊಬಿಲಿಟಿ ನೀತಿಗೆ ಸಚಿವ ಸಂಪುಟ ಅನುಮೋದಿಸಲಾಗಿದೆ. ಇದರಿಂದ 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿವೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕೌಶಲ್ಯ ತರಬೇತುದಾರರು ಮತ್ತು ಹತ್ತು ವೃತ್ತಿಪರ ಸಂಯೋಜಕರನ್ನು ಹೊರಗುತ್ತಿಗೆ ನೀಡಲಾಗುವುದು.
ಬೈಯಪ್ಪನಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್ನಲ್ಲಿ ಟರ್ನ್ಕೀ, ಲಂಪ್ಸಮ್-ಫಿಕ್ಸ್ಡ್ ಪ್ಲಾನ್ನಲ್ಲಿ ಯಾವುದೇ ಬದಲಾವಣೆ ಇಲ್ಲ. ಇದರ ಹೆಚ್ಚುವರಿ ದ್ವಿಪಥ ಆರ್ಒಬಿ ನಿರ್ಮಾಣಕ್ಕೆ 426.50 ಕೋಟಿ ರೂ.ಗೆ ಸಂಪುಟ ನಿರ್ಧರಿಸಿದೆ. ರಾಜ್ಯದ ಜಲ ಭದ್ರತೆಗಾಗಿ ಬೆಂಗಳೂರು 2,000 ಕೋಟಿ ರೂ. ವೆಚ್ಚದಲ್ಲಿ 16 ಕಾಮಗಾರಿ ಪ್ಯಾಕೇಜ್ಗಳ ಜಾರಿಗೆ ಒಪ್ಪಿಗೆ ನೀಡಲಾಗಿದೆ.
ವಿಜಯಪುರ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ, ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗ್ರಾಮ ಪಂಚಾಯತಿಗಳಿಗೆ ಮೇಲ್ದರ್ಜೆಗೆ ಏರಿಸಲಾಗುತ್ತದೆ. ಲೋಕೋಪಯೋಗಿ ಸೇರಿದಂತೆ ಇತರ ಇಲಾಖೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications