Get Updates
Get notified of breaking news, exclusive insights, and must-see stories!

ಗಡಿ ವಿವಾದ: ಮಹಾರಾಷ್ಟ್ರ ನಾಯಕರದ್ದು ಅಸಂಬದ್ದ ಹೇಳಿಕೆ: ಸಿಎಂ ಟೀಕೆ

ಬೆಳಗಾವಿ, ಡಿಸೆಂಬರ್ 21: ಮಹಾರಾಷ್ಟ್ರದ ವಿರೋಧ ಪಕ್ಷದ ಶಾಸಕರು ಶಾಸನಸಭೆಯಲ್ಲಿ ಮತ್ತು ಹೊರಗಡೆ ಹದ್ದುಮೀರಿ, ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ. ಇದನ್ನು ನೋಡಿದರೆ ಅವರು ಮಾನಸಿಕ ಸಮತೋಲನ ಕಳೆದುಕೊಂಡಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆ ರಾಜ್ಯದ ಅಲ್ಲಿನ ವಿರೋಧ ಪಕ್ಷಗಳು ಇದೇ ವಿಚಾರದ ಮೇಲೆ ಅವರ ರಾಜಕಾರಣ ಮಾಡಲು ಹೊರಟಿದ್ದಾರೆ. ಹಿಂದೆಯೂ ಕಾಂಗ್ರೆಸ್ ನಾಯಕರು ರಾಜಕೀಯ ಲಾಭ ಪಡೆಯಲು ಹೋಗಿ ವಿಫಲರಾಗಿದ್ದಾರೆ. ಎರಡೂ ರಾಜ್ಯಗಳ ಜನ ಶಾಂತಿ ಸಾಮರಸ್ಯ ಕಾಪಾಡಿಕೊಂಡು, ವ್ಯಾಪಾರ ವ್ಯವಹಾರ, ಓಡಾಟ ಮಾಡುತ್ತಿರುವಾಗ ನೆರೆ ರಾಜ್ಯದವರು ಕರ್ನಾಟಕ ರಾಜ್ಯ ಪ್ರವೇಶಿಸಲು ಹೊರಟಿದ್ದಾರೆ ಎಂದರು.

ಜನರ ಬೆಂಬಲವಿಲ್ಲದಿದ್ದರೂ, ರಾಜಕೀಯ ಪಕ್ಷಗಳ ಧ್ವಜ ಹಿಡಿದು ರಾಜ್ಯ ಪ್ರವೇಶಕ್ಕೆ ಮುಂದಾಗಿದ್ದಾರೆ. ಇದನ್ನು ಗಮನಿಸಿದರೆ ಇದು ರಾಜಕೀಯ ಪ್ರೇರಿತ ಎಂದು ಸ್ಪಷ್ಟವಾಗುತ್ತದೆ. ರಾಜ್ಯದ ಕಾಂಗ್ರೆಸ್ ನಾಯಕರು ಮಹಾರಾಷ್ಟ್ರದಲ್ಲಿನ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಬೇಕು. ಇದು ಬೀದಿಯಲ್ಲಿ ಇತ್ಯರ್ಥವಾಗುವ ವಿಚಾರವಲ್ಲ ಎಂದು ಅವರು ಸಲಹೆ ನೀಡಿದರು.

ಚೀನಾ ಸೈನಿಕರಂತೆ ಹಿಮ್ಮೆಟ್ಟಿಸುತ್ತೇವೆ

ಚೀನಾ ಸೈನಿಕರಂತೆ ಹಿಮ್ಮೆಟ್ಟಿಸುತ್ತೇವೆ

ಮಹಾರಾಷ್ಟ್ರದವರೇ ಸುಪ್ರೀಂ ಕೋರ್ಟಿಗೆ ಹೋಗಿದ್ದಾರೆ. ಅವರಿಗೆ ತಮ್ಮ ದಾವೆ ದುರ್ಬಲವಾಗಿದೆ ಎಂದು ಅರಿವಾಗಿದೆ. ಅದಕ್ಕಾಗಿಯೇ ಇಂತಹ ಪರಿಸ್ಥಿತಿ ಸೃಷ್ಟಿಸಿ ಲಾಭ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ, ಆದರೆ ಅದು ಅದು ಯಶಸ್ವಿಯಾಗುವುದಿಲ್ಲ. ಇದು ಮಹಾರಾಷ್ಟ್ರದ ವಿರೋಧ ಪಕ್ಷದ ಅಪ್ರಬುದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅವರು ಚೀನಾ ರೀತಿ ಆಕ್ರಮಣ ಮಾಡುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ಚೀನಾ ಆಕ್ರಮಣವನ್ನು ನಮ್ಮ ಸೈನಿಕರು ಹಿಮ್ಮೆಟ್ಟಿಸಿದಂತೆ, ಅವರನ್ನು ಹಿಮ್ಮೆಟ್ಟಿಸುವ ಶಕ್ತಿ ಕನ್ನಡಿಗರಿಗೆ ಇದೆ. ನಾವು ಒಂದೇ ದೇಶದಲ್ಲಿರುವವರು. ಅದಾಗ್ಯೂ ಅವರು ಬಳಸಿದ ಪದಪ್ರಯೋಗಕ್ಕೆ ಉತ್ತರ ನೀಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ಇಲ್ಲ

ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ಇಲ್ಲ

ಕಾಂಗ್ರೆಸ್‌ ನಾಯಕರು ಬೆಳಗ್ಗೆ ಗಡಿ ವಿಚಾರವಾಗಿ ಮಾತನಾಡಿದ್ದಾರೆ. ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ಅದಕ್ಕೆ ಬೆಲೆ ಇಲ್ಲವೇ ಎಂದು ಹೇಳಿದ್ದಾರೆ. ಈ ವಿಚಾರವನ್ನು ಕೇಂದ್ರದ ಗೃಹ ಸಚಿವರ ಗಮನಕ್ಕೆ ತರಲಾಗುವುದು. ಅಂದಿನ ಸಭೆಯಲ್ಲಿ ಎರಡೂ ರಾಜ್ಯಗಳು ಶಾಂತಿ ವ್ಯವಸ್ಥೆಯನ್ನು ಕಾಪಾಡಬೇಕೆಂಬ ನಿರ್ಣಯದಂತೆ ರಾಜ್ಯದಿಂದ ಶಾಂತಿ ಸುವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ. ಒಂದೂ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲಾಗಿದೆ. ಶಾಂತಿ ಭಂಗವಾಗಲು ಬಿಟ್ಟಿಲ್ಲ. ಜನಸಾಮಾನ್ಯರ ಓಡಾಟ ಸಾಮಾನ್ಯವಾಗಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಆಗುವುದು ಅಷ್ಟೇ ಮುಖ್ಯ. ಯಾವುದೇ ಕಾನೂನು ಬಾಹಿರ ಚಟುವಟಿಕೆಗೆ ಸರ್ಕಾರ ಅವಕಾಶ ಕೊಡುವುದಿಲ್ಲ. ನಾಳೆ ವಿಧಾನಸಭೆಯಲ್ಲಿ ಈ ಬಗ್ಗೆ ಸುದೀರ್ಘವಾದ ಉತ್ತರವನ್ನೂ ಕೊಟ್ಟು ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ :

ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ :

ಮಹಾರಾಷ್ಟ್ರದಿಂದ ನೀರು ಬಿಡುವುದಿಲ್ಲ ಹಾಗೂ ಅಣೆಕಟ್ಟನ್ನು ಕೂಡ ಎತ್ತರಿಸಲಾಗುವುದು ಎಂದು ಮಹಾರಾಷ್ಟ್ರದ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಉತ್ತರಿಸಿದ ಬೊಮ್ಮಾಯಿಯವರು, ಎಲ್ಲ ನದಿಗಳು, ಅಂತಾರಾಜ್ಯ ನದಿಗಳು ಅಂತಾರಾರಾಜ್ಯ ಜಲ ವಿವಾದ ಕಾಯ್ದೆಯಡಿಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಮಹಾರಾಷ್ಟ್ರದ ನಾಯಕರಿಗೂ ಈ ಬಗ್ಗೆ ಅರಿವಿದೆ. ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅತಿಹೆಚ್ಚು ಮಳೆ ಬಂದಾಗ ನೀರನ್ನು ನಿಲ್ಲಿಸಲು ಸಾಧ್ಯವೇ. ಆಲಮಟ್ಟಿ ಜಲಾಶಯ ಎತ್ತರ 524.5 ಎಂದು ಟ್ರಿಬ್ಯೂನಲ್ ನಲ್ಲಿ ಆದೇಶವಾಗಿದೆ. ಈ ಬಗ್ಗೆ ಅಧಿಸೂಚನೆ ಆದ ತಕ್ಷಣ ಈ ಕೆಲಸವನ್ನೂ ಪ್ರಾರಂಭಿಸಲಾಗುವುದು ಎಂದರು.

ಆಯೋಗದ ಅಧ್ಯಕ್ಷ ಸಂಪರ್ಕದಲ್ಲಿದ್ದೇನೆ

ಆಯೋಗದ ಅಧ್ಯಕ್ಷ ಸಂಪರ್ಕದಲ್ಲಿದ್ದೇನೆ

ಪಂಚಮಸಾಲಿ ಸಮಾಜದವರು ತಮಗೆ 2ಎ ಮೀಸಲಾತಿ ನೀಡಲು ಆಗ್ರಹಿದ್ದರು. ಗುರುವಾರ ಅಂತಿಮ ಗಡುವು ನೀಡಿದ್ದಾರೆ. ಈ ಬಗ್ಗೆ ಉತ್ತರಿಸಿ ಗಡುವು ನೀಡಿದವರು ನಮ್ಮವರೇ, ನಾನು ಹಿಂದುಳಿದ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಸಂಪರ್ಕದಲ್ಲಿದ್ದೇನೆ. ಕೂಡಲೇ ಈ ಮೀಸಲಾತಿ ಬೇಡಿಕೆ ಸಂಬಂಧ ವರದಿ ಸಲ್ಲಿಕೆಯಾದ ತಕ್ಷಣವೇ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+