ಸಿದ್ದರಾಮಯ್ಯ ಬಜೆಟ್ ಬಗ್ಗೆ ನಿರೀಕ್ಷೆಗಳೇನು?
ಬೆಂಗಳೂರು, ಮಾರ್ಚ್ 17 : ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2016-17ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ 1.50 ಲಕ್ಷ ಕೋಟಿ ರೂ. ದಾಟಲಿದ್ದು, ಕೃಷಿ, ತಂತ್ರಜ್ಞಾನ ಕ್ಷೇತ್ರಕ್ಕೆ ಆದ್ಯತೆ ದೊರೆಯುವ ಸಾಧ್ಯತೆ ಇದೆ.
ಮಾರ್ಚ್ 18ರ ಶುಕ್ರವಾರ ಬೆಳಗ್ಗೆ 11.30ಕ್ಕೆ 11ನೇ ಬಾರಿ ಬಜೆಟ್ ಮಂಡನೆ ಮಾಡಲಿರುವ ಸಿದ್ದರಾಮಯ್ಯ ಅವರು, ಹಲವು ಮಹತ್ವಪೂರ್ಣ ಕಾರ್ಯಕ್ರಮಗಳನ್ನು ಪ್ರಕಟಿಸಲಿದ್ದಾರೆ. ಬಡವರಿಗೆ, ಕೃಷಿಕರಿಗೆ ಬಜೆಟ್ನಲ್ಲಿ ಹಲವು ಕಾರ್ಯಕ್ರಮಗಳನ್ನು ಘೋಷಣೆ ಮಾಡಲಿದ್ದಾರೆ. [ಬಜೆಟ್ 2016: ಅರುಣ್ ಜೇಟ್ಲಿ ಹೇಳಿದ ತೆರಿಗೆ ಲೆಕ್ಕವೇನು?]
ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಹೆಚ್ಚಾಗಿ ಸ್ಥಾಪಿಸಲು ಆದ್ಯತೆ ನೀಡಲಿದ್ದಾರೆ. ಬರಗಾಲ ಮತ್ತು ಸಾಲಭಾಧೆಯಿಂದ ಕಂಗೆಟ್ಟಿರುವ ರೈತರಿಗೂ ಅನೇಕ ಸೌಲಭ್ಯಗಳನ್ನು ನೀಡುವ ನಿರೀಕ್ಷೆ ಇದೆ. [ಕೇಂದ್ರ ಬಜೆಟ್ 2016: ಯಾವುದು ಅಗ್ಗ? ಯಾವುದು ತುಟ್ಟಿ?]

ಜನಸಾಮಾನ್ಯರ ಮೇಲೆ ಹೆಚ್ಚಿನ ತೆರಿಗೆ ಹೊರೆ ಹೇರದೆ ಪರ್ಯಾಯ ಮೂಲಗಳಿಂದ ಹೆಚ್ಚಿನ ಆದಾಯ ಸಂಗ್ರಹಿಸಲು ಒತ್ತು ನೀಡಲಿದ್ದಾರೆ. ಉಳ್ಳವರಿಂದ ಪಡೆದು ಇಲ್ಲದವರಿಗೆ ತಲುಪಿಸುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಬಡವರ ಮೇಲೆ ಯಾವುದೇ ಹೆಚ್ಚಿನ ತೆರಿಗೆ ಹೊರೆ ಹೇರದಿದ್ದರೂ ಮದ್ಯ, ಸಿಗರೇಟು ಸೇರಿದಂತೆ ವ್ಯಸನಗಳಿಗೆ ಅಂಟಿಕೊಂಡವರಿಗೆ ಬಜೆಟ್ ಭಾರವಾಗಲಿದೆ. [ಕರ್ನಾಟಕ ಬಜೆಟ್ 2015-16 : ಮುಖ್ಯಾಂಶಗಳು]
ರಾಜ್ಯ ಎದುರಿಸುತ್ತಿರುವ ವಿದ್ಯುತ್ ಕ್ಷಾಮದ ಹಿನ್ನೆಲೆಯಲ್ಲಿ ಸ್ವಂತವಾಗಿಯೇ ವಿದ್ಯುತ್ ತಯಾರಿಸುವ ಯೋಜನೆಗಳನ್ನು ಜಾರಿಗೊಳಿಸಲು ಮುಖ್ಯಮಂತ್ರಿಗಳು ಯೋಚಿಸಿದ್ದು, ವಿದ್ಯುತ್ ಕ್ಷೇತ್ರದತ್ತ ಹೆಚ್ಚಿನ ಗಮನ ಹರಿಸುವುದು ಅನಿವಾರ್ಯ ಎಂದು ತಮ್ಮ ಜತೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ ಅಧಿಕಾರಿಗಳಿಗೆ ನೇರವಾಗಿ ಹೇಳಿದ್ದಾರೆ. [ಕರ್ನಾಟಕದಲ್ಲಿ ವಿದ್ಯುತ್ ಕೊರತೆ : ಶಾಶ್ವತ ಪರಿಹಾರಗಳು]
ದೇಶದಲ್ಲಿ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕವೇ ನೀರಿನ ವಿಷಯದಲ್ಲಿ ಹೆಚ್ಚು ಕಷ್ಟಪಡುತ್ತಿರುವ ರಾಜ್ಯ. ಆದರೆ, ಒಂದು ವಿಷಯವನ್ನು ನಾವು ನೆನಪಿನಲ್ಲಿಡಬೇಕು. ನೀರನ್ನು ಉಳಿಸಿ ಕಾಪಾಡಿಕೊಂಡು ಸಂದರ್ಭಕ್ಕೆ ತಕ್ಕಂತೆ ಬಳಸಿಕೊಳ್ಳಲು ಸಾಧ್ಯವೇ ಹೊರತು ಉತ್ಪಾದಿಸಲು ಸಾಧ್ಯವಿಲ್ಲ. [ಬಜೆಟ್ ನಿರೀಕ್ಷೆಗಳೇನು? : ಕೇಳಿ]
ಮುಂದಿನ ಮಳೆಗಾಲದಿಂದ ನೀರನ್ನು ಸಂರಕ್ಷಿಸುವ ಕಾರ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಎಲ್ಲ ರಾಜಕೀಯ ಪಕ್ಷಗಳಿಗೂ ಮನವಿ ಮಾಡಿಕೊಳ್ಳಬೇಕು. ನೀರಿರಲಿ, ವಿದ್ಯುತ್ ಇರಲಿ, ಇನ್ನೇನೇ ಇರಲಿ. ರಾಜ್ಯದ ಸಂಪತ್ತು ರಾಜ್ಯದ ಜನರಿಗೆ ಎಂಬುದನ್ನು ಮರೆಯಕೂಡದು.
ಇಂತಹ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಕುರಿತು ಕಾರ್ಯಕ್ರಮ ರೂಪಿಸಬೇಕು. ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಇದಕ್ಕೇನು ನೆರವು ಬೇಕೋ? ಆ ನೆರವನ್ನು ನೀಡಲು ಸಿದ್ಧ ಎಂದು ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
ಹಾಗೆಯೇ ರೈತರು, ಮಹಿಳೆಯರು, ಶೋಷಿತರಿಗೆ ಹೆಚ್ಚಿನ ಬೆಂಬಲ ನೀಡುವ ಯೋಜನೆಗಳನ್ನು ಜಾರಿಗೊಳಿಸಲು ಸಿದ್ದರಾಮಯ್ಯ ಈಗಾಗಲೇ ತೀರ್ಮಾನಿಸಿದ್ದು, ಶುಕ್ರವಾರ ಮಂಡನೆ ಯಾಗುವ ಬಜೆಟ್ ನಿರೀಕ್ಷೆ ಹುಟ್ಟು ಹಾಕಿದೆ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications