ಬಜೆಟ್ 2017: ಬೆಂಗಳೂರಿನಲ್ಲಿ ಅಂಬೇಡ್ಕರ್ ಆರ್ಥಿಕ ಸಂಶೋಧನಾ ಕೇಂದ್ರ

ಬೆಂಗಳೂರು, ಮಾರ್ಚ್ 15: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ವ್ಯಾಸಂಗ ಮಾಡಿದ್ದ ಲಂಡನ್ ಎಕನಾಮಿಕ್ಸ್ ಸಂಶೋಧನಾ ಸಂಸ್ಥೆಯ ಮಾದರಿಯಲ್ಲೇ ಬೆಂಗಳೂರಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಆರ್ಥಿಕ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವಿಚಾರವನ್ನು 2017ರ ರಾಜ್ಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ.

ಇದಲ್ಲದೆ, ರಾಯಚೂರಿನಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಹೈದರಾಬಾದ್ ಕರ್ನಾಟಕದಲ್ಲಿನ ವಿದ್ಯಾರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.[LIVE: ಮೇಕೆದಾಟು ಯೋಜನೆ ಅನುಷ್ಠಾನ : ಸಿದ್ದರಾಮಯ್ಯ]

Karnataka Budget 2017: Dr. Ambedkar economincs research institute in Bengaluru

ರಾಜ್ಯದ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಸನ, ಚಾಮರಾಜ ನಗರ ಹಾಗೂ ಯಾದಗಿರಿಯಲ್ಲಿ ಡಿಪ್ಲೊಮಾ ಕಾಲೇಜು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಇದಲ್ಲದೆ, ರಾಜ್ಯದಲ್ಲಿ ಕುರಿ ಸಾಕಾಣಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬಳ್ಳಾರಿಯ ಕುರಿಕುಪ್ಪೆಯಲ್ಲಿ ಕುರಿ ಸಂವರ್ಧನೆ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.[ಹಾಸನ, ಚಾಮರಾಜ ನಗರ, ಯಾದಗಿರಿಯಲ್ಲಿ ಡಿಪ್ಲೊಮಾ ಕಾಲೇಜು]

ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕ್ಯಾಂಟೀನ್ ಗಳಿಂದ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಸಿಗುವ ವ್ಯವಸ್ಥೆ ಜಾರಿಯಾಗಲಿದೆ.

ಇದಲ್ಲದೆ, 21 ಜಿಲ್ಲೆಗಳಿಂದ 49 ಹೊಸ ತಾಲೂಕುಗಳನ್ನು ರಚಿಸಲು ಸರ್ಕಾರ ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+