ಬಜೆಟ್ 2017: ಅಲ್ಪಸಂಖ್ಯಾತ, ಹಿಂದುಳಿದವರಿಗೆ ಭರ್ಜರಿ ಕೊಡುಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 2017ರ ಬಜೆಟ್ ನಲ್ಲಿ ಸಮಾಜ ಕಲ್ಯಾಣ ,ಅಲ್ಪಸಂಖ್ಯಾತ ಹಿಂದುಳಿದ ವರ್ಗಕ್ಕೆ ಏನೆಲ್ಲ ನೀಡಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
ಬೆಂಗಳೂರು, ಮಾರ್ಚ್. 15 : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ 2017-18ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು,ಅಲ್ಪಸಂಖ್ಯಾತ, ಹಿಂದುಳಿದ ವರ್ಗಕ್ಕೆ ಕೆಲವು ವಿಶೇಷ ಕೊಡುಗೆಗಳನ್ನು ನೀಡಿದ್ದಾರೆ.

ಸಮಾಜ ಕಲ್ಯಾಣ
* ಎಸ್ಸಿ, ಎಸ್ಟಿ ವಿಧವೆಯರನ್ನು ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ
* ಅಂತರ್ಜಾತಿ ವಿವಾಹವಾದ ಮಾಡಿಕೊಳ್ಳುವರಿಗೆ 2 ಲಕ್ಷ ಸಹಾಯಧನ.[ಬಜೆಟ್ 2017: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ]
* ಆಶಾದೀಪ ಯೋಜನೆ ಅಡಿಯಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಎಸ್ ಮತ್ತು ಎಸ್ ಟಿ ಕಾರ್ಮಿಕರಿಗೆ ಉದ್ಯೋಗ.
* ದಾವಣಗೇರೆ ಜಿಲ್ಲೆಯ ಸೇವಾಲಾಲ್ ಸಮುದಾಯಕ್ಕೆ 5 ಕೋಟಿ ರು.
* ಆದಿವಾಸಿ ಜನರಿಗೆ ಉದ್ಯೋಗ ನೀಡಲು 200 ಕೋಟಿ ರು.[ಶಿಕ್ಷಕರಿಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ]
* 1 ಲಕ್ಷ ಎಸ್ ಟಿ ಮತ್ತು 1 ಲಕ್ಷ ಎಸ್ ಸಿ ವಿದ್ಯಾರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ.
* ಜಿಲ್ಲೆಗೆ ಒಂದರಂತೆ ತಲಾ 1 ಕೋಟಿ ರೂ. ವೆಚ್ಚದಲ್ಲಿ 30 ಮೊರಾರ್ಜಿ ವಸತಿ ಶಾಲೆಗಳನ್ನು ವಿಜ್ಞಾನ ಮತ್ತು ಗಣಿತ ವಿಷಯಗಳೊಂದಿಗೆ ಪಿ.ಯು.ಸಿ.ಗೆ ಮೇಲ್ದರ್ಜೆಗೆ
* 14 ಜಿಲ್ಲಾ ಕಛೇರಿಗಳ ಜೊತೆಗೆ 5 ಜಿಲ್ಲೆಗಳಲ್ಲಿ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಕಚೇರಿ.
* ವಾಹನ ಚಾಲನಾ ಪರವಾನಗಿ ಹೊಂದಿರುವ 3500 ಪರಿಶಿಷ್ಟ ಜಾತಿ ಮತ್ತು 1500 ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿಗಳನ್ನು ಖರೀದಿಸಲು 3 ಲಕ್ಷ ರು.ಗಳವರೆಗೆ ಸಹಾಯಧನ.
* ಕಾನೂನು ಪದವಿಧರರ ಮಾಸಿಕ ತರಬೇತಿ ಭತ್ಯೆಯನ್ನು 2000 ರು.ಗಳಿಂದ 5000 ರು.ಗಳಿಗೆ ಹೆಚಿಳ.
*ಜೇನುಕುರುಬ, ಕೊರಗ, ಸೋಲಿಗ, ಕಾಡುಕುರುಬ, ಎರವ, ಗೌಡಲು, ಹಸಲುರು, ಇರುಳಿಗ, ಸಿದ್ಧಿ, ಮಲೆಕುಡಿಯ, ಹಕ್ಕಿಪಿಕ್ಕಿ, ತೋಡ, ಮೇದ ಇತ್ಯಾದಿ ಆದಿವಾಸಿ ಸಮುದಾಯಗಳ ಅಭಿವೃದ್ಧಿಗೆ ಮತ್ತು ಸ್ವಯಂ ಉದ್ಯೋಗ ಕಲ್ಪಿಸಲು 200 ಕೋಟಿ ರು.ಗಳ ಅನುದಾನ.
ಹಿಂದುಳಿದ ವರ್ಗ
ಹಿಂದುಳಿದ ವರ್ಗಕ್ಕೆ ಒಟ್ಟು 3154 ಕೋಟಿ ರುಗಳನ್ನು ನೀಡಲಾಗಿದೆ.[LIVE: ಬೆಂಗಳೂರಿನಲ್ಲಿ ಬಾಡಿಗೆ ಸೈಕಲ್ ಯೋಜನೆ]
* ವಿಶ್ವಕರ್ಮ ಸಮುದಾಯ ಅಭುವೃದ್ದಿಗೆ 25 ಕೋಟಿ ರು.
* ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ಸ್ಥಾಪನೆ.
* ಅಂಭೀಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪನೆ.
* ರಾಜ್ಯದಲ್ಲಿ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ಶಾಲೆಗಳ ಸ್ಥಾಪನೆ.[ಬಜೆಟ್ 2017: ದ್ವಿಚಕ್ರವಾಹನ ಖರೀದಿ ದುಬಾರಿ, ಮದ್ಯ ಬೆಲೆ ಹೆಚ್ಚಳ]
* ಹಾಸ್ಟೆಲ್ ವಿದ್ಯಾರ್ಥಿಗಳ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳು, ಕ್ಷೌರ ಹಾಗೂ ಸಮವಸ್ತ್ರ ವೆಚ್ಚಗಳನ್ನು ಅನುಕ್ರಮವಾಗಿ 200 ರು.ಗಳಿಂದ 400ಕ್ಕೆ, 150 ರೂ.ಗಳಿಂದ 300 ಕ್ಕೆ ಹಾಗೂ 499 ರು.ಗಳಿಂದ 1000 ರು.ಗಳಿಗೆ ಹೆಚ್ಚಿಸಲಾಗಿದೆ.
* ಸರ್ಕಾರಿ ಹಾಸ್ಟೆಲ್ ಗಳ/ವಸತಿ ಹಾಗೂ ಆಶ್ರಮ ಶಾಲೆಗಳ ಆಹಾರ ಭತ್ಯೆಯನ್ನು ಪ್ರತಿ ವಿದ್ಯಾರ್ಥಿಗೆ ಮಾಸಿಕ 100 ರು.ಗಳಷ್ಟು ಹೆಚ್ಚಿಸಲಾಗಿದೆ.
* ಸೇನೆಗಳಿಗೆ ಆಯ್ಕೆಯಾಗುವ ಅವಕಾಶಗಳನ್ನು ಹೆಚ್ಚಿಸಲು 3000 ಅಭ್ಯರ್ಥಿಗಳಿಗೆ ತರಬೇತಿ.
* ಮಡಿವಾಳ, ಸವಿತಾ ಸಮಾಜ, ತಿಗಳ, ಕುಂಬಾರ ಸಮುದಾಯಗಳ ಅಭಿವೃದ್ಧಿಗಾಗಿ 60 ಕೋಟಿ ರೂ.ಗಳ ಅನುದಾನ.
* ಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಸ್ವಾಯತ್ತ ಸಂಸ್ಥೆಯನ್ನಾಗಿ ಮಾಡಲಾಗುವುದು.
ಬುಡಬುಡಕಿ, ಗೊಂದಳಿ, ಹೆಳವ, ಪಿಚಗುಂಟ, ಜೋಗಿ, ಗೊಲ್ಲ, ಶಿಕ್ಕಲಿಗಾರ, ಹಾವುಗಾರ ಇತ್ಯಾದಿ ಅಲೆಮಾರಿ ಮತ್ತು
* ಅರೆ ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ 100 ಕೋಟಿ ರು.ಗಳು.
* 100 ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗ ವೇತನವನ್ನು ಮಂಜೂರು ಮಾಡಲಾಗುವುದು.
* 2017-18ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಒಟ್ಟಾರೆಯಾಗಿ 3,154 ಕೋಟಿ ರೂ. ಒದಗಿಸಲಾಗಿದೆ.
ಅಲ್ಪಸಂಖ್ಯಾತ
* ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ 175 ಕೋಟಿ ರೂ. ಮೀಸಲು.
* ರಾಜ್ಯದಲ್ಲಿ 200 ಮೌಲಾನ ಅಜಾದ್ ಶಾಲೆ ಸ್ಥಾಪನೆ.
* ಜಿಲ್ಲಾ ಕೇಂದ್ರಗಳಲ್ಲಿ ಶಾದಿ ಮಾಲ್ ಸಮುದಾಯ ಭವನಕ್ಕೆ 2ಕೋಟಿ ರು.
*ತಾಲೂಕು ಕೇಂದ್ರಗಳಲ್ಲಿ ಶಾದಿ ಮಾಲ್ ಸಮುದಾಯ ಭವನಕ್ಕೆ 1ಕೋಟಿ ರು.[ಬಜೆಟ್ 2017: ನಮ್ಮ ಬೆಂಗಳೂರಿಗೆ ಸಿಕ್ಕಿದ್ದೇನು?]
* 1ಸಾವಿರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸೇನೆ ಸೇರಲು ಉಚಿತ ತರಬೇತಿ.
* ಹೆಚ್ಚು ಅಲ್ಪಸಂಖ್ಯಾತ ಇರುವ ಕಡೆಗಳಲ್ಲಿ ಮೂಲ ಸೌಕರ್ಯಕ್ಕಾಗಿ 8 ಸಾವಿರ ಕೋಟಿ ಕ್ರಿಯಾ ಯೋಜನೆ.
* 10 ಕೋಟಿ ರುಗಳಲ್ಲಿ ಮಂಗಳೂರಲ್ಲಿ ಹಜ್ ಭವನ ನಿರ್ಮಾಣ.
* ಹೊಸದಾಗಿ ಅಲ್ಪಸಂಖ್ಯಾತರ 20 ಮೊರಾರ್ಜಿ ದೇಸಾಯಿ ವಸತಿ ಶಾಲೆ, 05 ಪದವಿ ಪೂರ್ವ ಕಾಲೇಜು, 2,ಮಾದರಿ ವಸತಿ ಶಾಲೆಗಳು ಹಾಗೂ 25 ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರಾರಂಭ.
* ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಎಲ್ಲಾ ಕಛೇರಿಗಳನ್ನು ಹಾಗೂ ಒಂದು ಸಭಾಂಗಣವನ್ನು ಒಳಗೊಂಡ ಮೌಲಾನಾ ಅಬುಲ್ ಕಲಾಂ ಆಜಾದ್ ಭವನ.
* ವಕ್ಫ್ ಸಂಸ್ಥೆಗಳ ನಿರ್ವಹಣೆ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲು ಬೆಂಗಳೂರಿನಲ್ಲಿ ತರಬೇತಿ ಕೇಂದ್ರ ಪ್ರಾರಂಭ.
* ಉರ್ದು ಕನ್ವೆನ್ಷನ್ ಹಾಲ್ ಮತ್ತು ಸಾಂಸ್ಕೃತಿಕ ಕೇಂದ್ರ ನಿರ್ಮಾಣಕ್ಕೆ 20 ಕೋಟಿ ರೂ. ಅನುದಾನ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications