ಕನ್ನಡ ಚಲನಚಿತ್ರ ನೋಡಬಯಸುವವರ ಬಾಯಿಗೆ ಶ್ಯಾವಿಗೆ ಪಾಯಸ
ಬೆಂಗಳೂರು, ಮಾರ್ಚ್ 15 : ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ಚಿತ್ರಗಳ ಆನಂದ ನೋಡಬಯಸುವವರಿಗೆ ಬಜೆಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಸದ ಸುದ್ದಿಯನ್ನು ನೀಡಿದ್ದಾರೆ. ಜೊತೆಗೆ ಕನ್ನಡ ಚಿತ್ರರಂಗದ ಅಭಿವೃದ್ಧಿಗಾಗಿ ಹಲವಾರು ಘೋಷಣೆಗಳನ್ನು ಕೂಡ ಮಾಡಿದ್ದಾರೆ.
ರಾಜ್ಯದಲ್ಲಿನ ಮಲ್ಟಿಫ್ಲೆಕ್ಸ್ ಚಿತ್ರಮಂದಿರದ ಒಂದು ಪರದೆಯಲ್ಲಿ ಮಧ್ಯಾಹ್ನ 1.30 ರಿಂದ 7.30ರವರೆಗಿನ ಪ್ರಮುಖ ಅವಧಿಯಲ್ಲಿ ಕನ್ನಡ ಹಾಗೂ ಪ್ರಾದೇಶಿಕ ಭಾಷೆಗಳ ಚಲನಚಿತ್ರ ಪ್ರದರ್ಶನ ಕಡ್ಡಾಯ ಮಾಡಲಾಗಿದೆ.[ಬಜೆಟ್ 2017: ಅಲ್ಪಸಂಖ್ಯಾತ, ಹಿಂದುಳಿದವರಿಗೆ ಭರ್ಜರಿ ಕೊಡುಗೆ]

ಮಲ್ಟಿಪ್ಲೆಕ್ಸ್ ಗಳಿಗೆ ಹೋದವರು ಕನ್ನಡ ಚಿತ್ರಪ್ರದರ್ಶನ ಕಾಣದೆ ವಾಪಸ್ ಬರುತ್ತಿದ್ದವರಿಗೆ, ಮಧ್ಯಾಹ್ನ 1.30ರಿಂದ ಸಂಜೆ 7.30ರವರೆಗೆ ಕನ್ನಡ ಚಿತ್ರ ಪ್ರದರ್ಶನ ಕಡ್ಡಾಯ ಮಾಡಿರುವುದು ಸಕ್ಕರೆ ಭರಿತ ಸ್ಯಾವಿಗೆ ಪಾಯಸ ಸವಿದಂತಾಗಿದೆ. ಆದರೆ, ಇದನ್ನು ಕಡ್ಡಾಯ ತರಲು ಸಿದ್ದರಾಮಯ್ಯ ಏನೇನು ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದು ಪ್ರಶ್ನೆ.[21 ಜಿಲ್ಲೆಗಳಲ್ಲಿ 43 ಹೊಸ ತಾಲೂಕುಗಳ ರಚನೆ]
ರಾಜ್ಯದಲ್ಲಿ ಮಲ್ಟಿಪ್ಲೆಕ್ಸ್ಗಳೂ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೀತಿಯ ಪ್ರವೇಶದರ ನೀತಿ ಜಾರಿಗೆ ಕ್ರಮಕ್ಕೆ ಸಿದ್ದರಾಮಯ್ಯ ಸರಕಾರ ತೆಗೆದುಕೊಂಡಿದೆ. ಅಂದರೆ, 200 ರು.ಗಳ ಗರಿಷ್ಠ ಪ್ರವೇಶದರ ನಿಗದಿ ಮಾಡಲಾಗಿದೆ. ಮಲ್ಪಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಹೆಚ್ಚು ಬೆಲೆ ತೆರುತ್ತಿದ್ದವರು ಸ್ವಲ್ಪ ನಿರಾಳರಾಗಬಹುದು.[ಶಿಕ್ಷಕರಿಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ]
ಚಲನಚಿತ್ರೋದ್ಯಮದ ಕಾರ್ಮಿಕರು, ತಂತ್ರಜ್ಞರು ಹಾಗೂ ಕಲಾವಿದರ ಆರೋಗ್ಯ ಸೇವೆಗಾಗಿ ಸ್ಥಾಪಿಸಿರುವ ದತ್ತಿ ನಿಧಿಯ ಮೊತ್ತ 1 ಕೋಟಿ ರು.ಗಳಿಂದ 10 ಕೋಟಿ ರು.ಗಳಿಗೆ ಹೆಚ್ಚಳ ಮಾಡಲಾಗಿದೆ. ಅಲ್ಲದೆ, ಮೈಸೂರು ಬಳಿಯ ಹಿಮ್ಮಾವಿನಲ್ಲಿ ಕನ್ನಡ ಚಿತ್ರೋದ್ಯಮದ ಅಭಿವೃದ್ಧಿಗಾಗಿ ಫಿಲ್ಮ್ ಸಿಟಿ ನಿರ್ಮಿಸುವುದಾಗಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications