ಕುಮಾರಸ್ವಾಮಿ ಬಜೆಟ್ ನಲ್ಲಿ ಪ್ರವಾಸೋದ್ಯಮಕ್ಕೆ ಸಿಕ್ಕಿದ್ದೇನು?
ಬೆಂಗಳೂರು, ಜುಲೈ 06: ಸಿದ್ದರಾಮಯ್ಯ ಸರ್ಕಾರ ಕೈಗೊಂಡ ಪ್ರವಾಸೋದ್ಯಮ ನೀತಿಯನ್ನು ಮುಂದುವರೆಸುವುದರ ಜೊತೆಗೆ, ಅನೇಕ ಅಭಿವೃದ್ಧಿ ಯೋಜನೆಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಚೊಚ್ಚಲ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ.
ನಮ್ಮ ಈಗಿನ ಪ್ರವಾಸೋದ್ಯಮವು ಸಂಘಟಿತವಾಗಿ ಒಂದು ಉದ್ಯಮದ ರೂಪದಲ್ಲಿರುವುದಿಲ್ಲ. ಅಲ್ಲದೆ, ಅಗತ್ಯವಿರುವಷ್ಟು ಉದ್ಯೋಗವನ್ನು ನಿರೀಕ್ಷಿತ ಮಟ್ಟದಲ್ಲಿ ಕಲ್ಪಿಸಿರುವುದಿಲ್ಲ. ಪ್ರವಾಸೋದ್ಯಮ ಎಂದರೆ ಉತ್ತಮವಾಗಿ ತರಬೇತಿ ಹೊಂದಿದ, ವಿವಿಧ ಭಾಷೆಯಲ್ಲಿ ಪ್ರವಾಸಿ ಸ್ಥಳದ ಬಗ್ಗೆ ವಿವರವಾದ ಮಾಹಿತಿ ನೀಡುವ ಉತ್ತಮ ಮಾರ್ಗದರ್ಶಿಗಳು ಇರಬೇಕು. ಪ್ರವಾಸಿ ವಾಹನಗಳನ್ನು ನಿರ್ವಹಿಸುವ ವ್ಯವಸ್ಥೆ ಇರಬೇಕು.
ಪ್ರವಾಸಿಗರೊಂದಿಗೆ ಸೌಜನ್ಯದಿಂದ ವರ್ತಿಸುವ ಸಿಬ್ಬಂದಿಗಳಿರಬೇಕು. ಪ್ರವಾಸೋದ್ಯಮವನ್ನು ಲಾಭದಾಯಕವಾಗಿ ನಡೆಸುವ ವ್ಯವಹಾರಿಕ ಜ್ಞಾನ ಇರಬೇಕು. ಸರ್ಕಾರವು ಪ್ರವಾಸಿ ತಾಣಗಳಲ್ಲಿ ರಸ್ತೆ, ಶೌಚಾಲಯ ಇತ್ಯಾದಿ ಮೂಲಸೌಕರ್ಯಗಳನ್ನು ಒದಗಿಸಬಹುದು. ಆದರೆ, ಪ್ರವಾಸಿ ಸ್ಥಳ ಮತ್ತು ಪ್ರವಾಸಿಗರ ಮಧ್ಯೆ ಇರುವ ಮುಖ್ಯ ಕೊಂಡಿಯಾದ ಭಾವನಾತ್ಮಕವಾಗಿ ಬೆಸೆಯುವ ಮಾನವ ಸಂಪನ್ಮೂಲವನ್ನು ಸೃಜಿಸಲಾಗುವುದಿಲ್ಲ.
#HDKbudget #MaitriBudget #karnatakabudget2018 #KarnatakaBudget pic.twitter.com/4AUf7rDCbb
— CM of Karnataka (@CMofKarnataka) July 5, 2018
ಈ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲವನ್ನು ನಿರಂತರವಾಗಿ ತರಬೇತಿಯ ಮುಖಾಂತರ ಉತ್ತೇಜಿಸಲು ಖಾಸಗಿ ಸಹಭಾಗಿತ್ವದಲ್ಲಿ ಒಂದು ಪ್ರವಾಸೋದ್ಯಮ ವಿಶ್ವವಿದ್ಯಾನಿಲಯವನ್ನು ಐತಿಹಾಸಿಕ ಸ್ಥಳವಾದ ಹಂಪಿಯಲ್ಲಿ ಆರಂಭಿಸಲು ಉದ್ದೇಶಿಸಿ 3 ಕೋಟಿ ರು ಒದಗಿಸಲಾಗುವುದು.

ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ
* ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ.
* ಈ ವರ್ಷ ಬೇಲೂರು, ಹಂಪಿ ಮತ್ತು ವಿಜಯಪುರದಲ್ಲಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಸಂಕಲ್ಪ. ಈ ನಿಟ್ಟಿನಲ್ಲಿ ಯುವಕ ಯುವತಿಯರಿಗೆ ಕೌಶಲ್ಯ ತರಬೇತಿಗಾಗಿ ಮುಂದೆ ಬರುವ ಖಾಸಗಿ ತರಬೇತಿ ಸಂಸ್ಥೆಗಳಿಗೆ ತಲಾ 60 ಲಕ್ಷ ರೂ.ಗಳ ಷೇರು ಬಂಡವಾಳ ಹೂಡಿಕೆ; ಈ ಮೂರು ಪ್ರವಾಸಿ ಕೇಂದ್ರಗಳಲ್ಲಿ ಪರಿಸರ ಹಾಗೂ ಆಹಾರದ ಶುದ್ಧತೆಯನ್ನು ಕಾಪಾಡಲು ಸರ್ಕಾರಿ ಸ್ಥಳೀಯ ಸಂಸ್ಥೆಗಳಿಗೆ 20 ಕೋಟಿ ರೂ. ಅನುದಾನ.

ಕೆ.ಎಸ್.ಟಿ.ಡಿ.ಸಿ ಸಂಸ್ಥೆಗೆ ಹೋಟೆಲ್ ಸೌಲಭ್
ಕೆ.ಎಸ್.ಟಿ.ಡಿ.ಸಿ ಸಂಸ್ಥೆಗೆ ಹೋಟೆಲ್ ಸೌಲಭ್ಯ ಕಲ್ಪಿಸಲು 80 ಕೋಟಿ ರೂ.
ಪ್ರಮುಖ ಹೆದ್ದಾರಿಗಳಲ್ಲಿ ಪ್ರವಾಸಿಗರಿಗಾಗಿ ಮೂರು ಮಾದರಿ ರಸ್ತೆ ಬದಿ ಸೌಲಭ್ಯಗಳ (Model way side Facilities) ನಿರ್ಮಾಣ.

ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತ ಪ್ರದೇಶ
* ಜಗತ್ಪ್ರಸಿದ್ಧ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ಹೆಚ್ಚುವರಿ ಪ್ರವಾಸಿ ಸೌಲಭ್ಯ ಒದಗಿಸಲು 5 ಕೋಟಿ ರೂ. ಅನುದಾನ.
* ರಾಮನಗರದ ಬಳಿ ಆರ್ಟ್ಸ್ ಅಂಡ್ ಕ್ರಾಫ್ಟ್ ವಿಲೇಜ್ ಮತ್ತು ಕಣ್ವ ಜಲಾಶಯದ ಪ್ರದೇಶದಲ್ಲಿ ಚಿಲ್ಡ್ರನ್ಸ್ ವರ್ಲ್ಡ್ ಯೋಜನೆ ಖಾಸಗಿ ಸಹಭಾಗಿತ್ವದೊಂದಿಗೆ ಅಭಿವೃದ್ಧಿ.

500 ಕೊಠಡಿಗಳ ಸೌಲಭ್ಯವಿರುವ 3 ಸ್ಟಾರ್ ಹೋಟೆಲ್
500 ಕೊಠಡಿಗಳ ಸೌಲಭ್ಯವಿರುವ 3 ಸ್ಟಾರ್ ಹೋಟೆಲ್ಗಳನ್ನು ತೆರೆಯಲು ಮುಂದೆ ಬರುವ ಖಾಸಗಿ ಕಂಪನಿಗಳಿಗೆ 3 ಕೋಟಿ ರೂ.ಗಳ ಷೇರು ಬಂಡವಾಳವನ್ನು ಕೊಡಲಾಗುವುದು. ಸರ್ವಿಸ್ ಅರ್ಪಾಟ್ಮೆಂಟ್ಗಳನ್ನು ಕಟ್ಟಲು ಮುಂದೆ ಬಂದಲ್ಲಿ, ಆ ಸಂಸ್ಥೆಗಳಿಗೆ ಶೇ.30ರಷ್ಟು ಷೇರು ಬಂಡವಾಳವನ್ನು Term Sheet ಆಧಾರದ ಮೇಲೆ ನೀಡಲಾಗುವುದು. ಇದಲ್ಲದೆ, ಅಮ್ಯೂಸ್ಮೆಂಟ್ ಪಾರ್ಕ್, ಜಲಕ್ರೀಡೆ ರೀತಿಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಖಾಸಗಿ ಕಂಪನಿಗಳಲ್ಲಿ ಶೇ.30ರಷ್ಟು ಷೇರು ಬಂಡವಾಳ ಹೂಡಲಾಗುವುದು
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications