ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಜೆಟ್ : ತೇಲುವ ಉಪಹಾರಗೃಹ ಸೇರಿ ಪ್ರವಾಸಿಗರಿಗೆ ಸಿಕ್ಕಿದ್ದೇನು?

By Mahesh
|
Google Oneindia Kannada News

ಬೆಂಗಳೂರು, ಫೆಬ್ರವರಿ 16: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 13ನೇ ಬಾರಿಗೆ ರಾಜ್ಯದ ಆಯವ್ಯಯ ಮುಂಗಡ ಪತ್ರವನ್ನು ಶುಕ್ರವಾರದಂದು ಮಂಡಿಸಿದರು.

ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ನಿಯಮಗಳನ್ನು ಸಡಿಲಿಸಿ ಪ್ರವಾಸಿಗರನ್ನು ಆಕರ್ಷಿಸಲು ಯೋಜನೆಗಳನ್ನು ಘೋಷಿಸಿದರು.

Karnataka Budget 2018-19: What is the share of Tourism Department

ಪ್ರವಾಸೋದ್ಯಮ ಇಲಾಖೆಗೆ ಸಿಕ್ಕಿದ್ದೇನು?:
* ಮೊಟ್ಟ ಮೊದಲ ಬಾರಿಗೆ ಚಲನಚಿತ್ರ ಪ್ರವಾಸೋದ್ಯಮ ನೀತಿಯನ್ನು ಜಾರಿಗೊಳಿಸಲಾಗುವುದು.
* ಕಲಬುರಗಿಯಲ್ಲಿ ಉತ್ತರ ಕರ್ನಾಟಕದ ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ 'ಕಲಬುರಗಿ ಕಲಾವನ' ನಿರ್ಮಾಣ.
* ಪಾರಂಪರಿಕ ಪ್ರವಾಸಿ ತಾಣಗಳಾದ ಹಂಪಿ, ಬೇಲೂರು- ಹಳೇಬೀಡು, ಶ್ರವಣ ಬೆಳಗೊಳ, ನಂದಿಬೆಟ್ಟ, ಸನ್ನತಿ ಹಾಗೂ ಕಲಬುರಗಿ ಕೋಟೆಗಲ ಸಮಗ್ರ ಪ್ರವಾಸಿ ಸೌಲಭ್ಯಗಳ ಅಭಿವೃದ್ಧಿ.
* ಮೈಸೂರಿನಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಸೇರಿದ ಜಮೀನಿನಲ್ಲಿ 'ಮೈಸೂರು ಹಾಟ್' ಅಭಿವೃದ್ಧಿ.
* ವಿದೇಶಿ ಹಾಗೂ ದೇಶಿ ಪ್ರವಾಸಿಗರ ಅಂಕಿ ಅಂಶಗಳ ಸಮೀಕ್ಷೆ ನಡೆಸಿ, ಅದರ ಆಧಾರದ ಮೇಲೆ ಪ್ರವಾಸಿ ತಾಣಗಳ ಅಭಿವೃದ್ಧಿ.
* ಕರಾವಳಿ ಪ್ರದೇಶಗಳಲ್ಲಿನ ಆಯ್ದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಹೌಸ್ ಬೋಟ್ ಗಳು ಹಾಗೂ ತೇಲುವ ಉಪಾಹಾರ ಗೃಹಗಳ ಸೌಲಭ್ಯ.
* ಪ್ರಾಚ್ಯವಸ್ತು ಸಂಗ್ರಹಾಲಯಗಳು ಹಾಗೂ ಪರಂಪರಾ ಇಲಾಖೆಯನ್ನು ಪ್ರವಾಸೋದ್ಯಮ ಇಲಾಖೆಯ ವ್ಯಾಪ್ತಿಗೆ ಸೇರ್ಪಡೆಗೆ ಕ್ರಮ.

English summary
Karnataka Budget 2018-19 : Finance minister, Chief Minister Siddaramaiah has announced many reforms in the Tourism Department rules and regulations to attract more tourist from other states and abroad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X