ಮುಂದಿನ 5 ವರ್ಷಗಳಲ್ಲಿ 20 ಲಕ್ಷ ಮನೆ ನಿರ್ಮಾಣ ಗುರಿ
ಬೆಂಗಳೂರು, ಫೆಬ್ರವರಿ 16: ಕೇಂದ್ರ ಬಜೆಟ್ನಲ್ಲಿ ದೇಶದ ಪ್ರತಿಯೊಬ್ಬರಿಗೂ ಮನೆ ನಿರ್ಮಿಸುವ ಬಗ್ಗೆ ಪ್ರಸ್ತಾಪವಾಗಿ ಬಡಜನರಲ್ಲಿ ಆಶಾಭಾವನೆ ಮೂಡಿಸಿರುವ ಬೆನ್ನಲ್ಲೆ ರಾಜ್ಯ ಬಜೆಟ್ನಲ್ಲೂ ಕಡ್ಡಾಯ ಸೂರಿನ ಉಲ್ಲೇಖ ಮಾಡಲಾಗಿದೆ.
ಕೇಂದ್ರವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 2022ರ ಒಳಗಾಗಿ ದೇಶದ ಎಲ್ಲರಿಗೂ ಮನೆ ಕಟ್ಟಿಕೊಡುವ ಭರವಸೆ ನೀಡಿದೆ. ಇದೇ ಭರವಸೆ ಮುಂದುವರಿಕೆ ಎಂಬಂತೆ ರಾಜ್ಯ ಬಜೆಟ್ನಲ್ಲೂ ವಸತಿ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ಗ್ರಾಮೀಣ ಮತ್ತು ನಗರ ಭಾಗದಲ್ಲಿ ಐದು ವರ್ಷದಲ್ಲಿ 20 ಲಕ್ಷ ಮನೆ ನಿರ್ಮಿಸುವ ಗುರಿ ನಿಗದಿಪಡಿಸಿಕೊಳ್ಳಲಾಗಿದೆ.
ಬೆಂಗಳೂರಲ್ಲಿ ಮಾತ್ರವೇ ಇರುವ ಬಹುಮಹಡಿ ಕಟ್ಟಡ ನಿರ್ಮಾಣ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸುವ ಯೋಜನೆಯನ್ನು ಸರ್ಕಾರ ಬಜೆಟ್ನಲ್ಲಿ ಘೋಷಿಸಿದೆ.

Array
ಮುಂದಿನ ಐದು ವರ್ಷದಲ್ಲಿ ಗ್ರಾಮೀಣಮತ್ತು ನಗರ ಭಾಗದಲ್ಲಿ 20 ಲಕ್ಷ ಮನೆ ನಿರ್ಮಾಣ ಘೋಷಣೆ ಮಾಡಲಾಗಿದೆ. ಪ್ರಧಾನಿ ಆವಾಸ್ ಯೋಜನೆಯ ಅಡಿಯಲ್ಲಿಯೂ ಲಕ್ಷಾಂತರ ಮನೆಗಳ ನಿರ್ಮಾಣ ಮಾಡುವ ಭರವಸೆ ನೀಡಲಾಗಿದ್ದು, ವಸತಿ ರಹಿತರಿಗೆ ಕಡ್ಡಾಯ ಮನೆ ದೊರಕುವ ಸಾಧ್ಯತೆ ಇದೆ.

ಎಲ್ಲಾ ಜಿಲ್ಲೆಗಳಲ್ಲೂ ಜಾರಿ
ಪ್ರಸ್ತುತ ನಗರ ಪ್ರದೇಶದಲ್ಲಿ ಮಾತ್ರವೇ ಇರುವ ಬಹುಮಹಡಿ ಕಟ್ಟಡ ನಿರ್ಮಾಣ ಯೋಜನೆಯನ್ನು 'ಮುಖ್ಯಮಂತ್ರಿ ನಗರ ವಸತಿ ಯೋಜನೆ' ಹೆಸರಲ್ಲಿ ರಾಜ್ಯದ ಎಲ್ಲಾ ನಗರಗಳಿಗೂ ವಿಸ್ತರಿಸಲಾಗುವುದೆಂದು ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದರು.

ಮಹಾನಗರ ಪಾಲಿಕೆಯಲ್ಲಿ 500 ಎಕರೆ
ನಗರ ಪ್ರದೇಶದ ವಸತಿ ಯೋಜನೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ 2000 ಎಕರೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 500 ಎಕರೆ, ಪುರಸಭೆ ವ್ಯಾಪ್ತಿಯಲ್ಲಿ 250 ಎಕರೆ, ಇತರೆ ಪಟ್ಟಣ ಪ್ರದೇಶದಲ್ಲಿ 100 ಜಮೀನು ಮೀಸಲಿಡಲಾಗುತ್ತದೆ.

ಖಾಸಗಿ ಸಹಭಾಗಿತ್ವ
ಟಿಡಿಆರ್ ಮತ್ತು ಹೆಚ್ಚುವರಿ ಎಫ್ಎಆರ್ ನೀಡುವ ಮೂಲಕ ಖಾಸಗಿ ಸಹಭಾಗಿತ್ವದಲ್ಲಿ ನಗರಪಾಲಿಕೆಗಳ ವ್ಯಾಪ್ತಿಯ ಕೊಳಗೇರಿ ಪ್ರದೇಶಗಳ ಅಭಿವೃದ್ಧಿ ಮಾಡುವುದಾಗಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications