ಕುಮಾರಸ್ವಾಮಿ ಬಜೆಟ್ ನಲ್ಲಿ ಮಹಿಳೆಯರಿಗೆ ಯಾವ ಭಾಗ್ಯ?!
Recommended Video

ಬೆಂಗಳೂರು, ಜುಲೈ 05: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಚೊಚ್ಚಲ ಬಜೆಟ್ ಅನ್ನು ಇಂದು(ಜು.05) ಮಂಡಿಸಿದ್ದಾರೆ. 2,18,488 ಕೋಟಿ ರೂ. ಗಾತ್ರದ ಆಯವ್ಯಯವನ್ನು ಮಂಡಿಸಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳೆಲ್ಲವನ್ನೂ ಹಾಗೆಯೇ ಮುಂದುವರಿಸಿದೆ.
ಅದರೊಂದಿಗೆ ಮಹಿಳಾ ಮತ್ತು ಮಕ್ಕಳ ಇಲಾಖೆಗೆ 5725 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಫೆಬ್ರವರಿಯಲ್ಲಿ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್ ನಲ್ಲಿ ಈ ಇಲಾಖೆಗೆ 5371 ಕೋಟಿ ರೂ.ಮೀಸಲಿಡಲಾಗಿತ್ತು.
ಮಹಿಳೆಯರಿಗೆ ಸರ್ಕಾರ ನೀಡಿದ ಕೊಡುಗೆಗಳ ಹೈಲೈಟ್ಸ್ ಇಲ್ಲಿದೆ...

* ಮುಖ್ಯಮಂತ್ರಿ ಮಾತೃಶ್ರೀ ಯೋಜನೆ 2018ರ ನವೆಂಬರ್ 1ರಿಂದ ಜಾರಿ; ಬಿಪಿಎಲ್ ಕುಟುಂಬದ ಗರ್ಭಿಣಿಯರಿಗೆ ಮೂರು ತಿಂಗಳು ಹಾಗೂ ಬಾಣಂತಿಯರಿಗೆ ಮೂರು ತಿಂಗಳ ಅವಧಿಗೆ ಮಾಸಿಕ 1,000 ರೂ. ನಂತೆ ಒಟ್ಟು 6,000 ರೂ. ನೀಡಲು ಕ್ರಮ; ಈ ಯೋಜನೆಗೆ 350 ಕೋಟಿ ರೂ. ಅನುದಾನ.
* ಆಧಾರ ಸ್ವಯಂ ಉದ್ಯೋಗ ಯೋಜನೆಯ ಘಟಕ ವೆಚ್ಚ 1 ಲಕ್ಷ ರೂ.ಗಳಿಗೆ ಹೆಚ್ಚಳ; ಇದರಲ್ಲಿ ಶೇ.50ರಷ್ಟು ಬ್ಯಾಂಕ್ ಸಾಲ ಮತ್ತು ಶೇ.50ರಷ್ಟು ಸಹಾಯಧನ ಒದಗಿಸಲು ಕ್ರಮ.
* 2016ರ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆಯಡಿ ಎಲ್ಲಾ 21 ವಿಧದ ವಿಕಲಚೇತನ ವ್ಯಕ್ತಿಗಳ ಸಮೀಕ್ಷೆಗೆ 5 ಕೋಟಿ ರೂ. ಅನುದಾನ.
* ಪ್ರಸ್ತುತ ಜಿಲ್ಲೆಗೊಂದರಂತೆ ಇರುವ ವೃದ್ಧಾಶ್ರಮವನ್ನು ರಾಜ್ಯದ ಎಲ್ಲಾ ಉಪವಿಭಾಗಗಳಿಗೆ ತಲಾ ಒಂದರಂತೆ ವಿಸ್ತರಣೆಗೆ ಕ್ರಮ.
* ರಾಷ್ಟ್ರೀಯ ಅಂಗವಿಕಲರ ಹಣಕಾಸು ಅಭಿವೃದ್ಧಿ ನಿಗಮದಿಂದ ವಿಕಲಚೇತರಿಗೆ ನೀಡಿರುವ ಸಾಲ ಮತ್ತು 2014ರಿಂದ ಸುಸ್ತಿಯಾಗಿರುವ ಬಡ್ಡಿ ಮೊತ್ತ ಮನ್ನಾ ಮಾಡಲು 4 ಕೋಟಿ ರೂ. ಅನುದಾನ.
* ವಿಕಲಚೇತನ ಪಾಲನೆ ಹಾಗೂ ನಿರ್ವಹಣೆ ಬಗ್ಗೆ ಪಾಲಕರಿಗೆ ತರಬೇತಿ ನೀಡಲು 20 ಎಕರೆ ಜಾಗದಲ್ಲಿ ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳ ಪಾಲುದಾರಿಕೆಯಲ್ಲಿ ವಿಕಲಚೇತನರ ಕ್ಯಾಂಪಸ್ ಪ್ರಾರಂಭ.
* ಬೆಂಗಳೂರಿನ ಇಂದಿರಾನಗರದಲ್ಲಿರುವ ಸರ್ಕಾರಿ ಕಿವುಡು ಮಕ್ಕಳ ಶಾಲೆಯ ಕಟ್ಟಡದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವಿಶೇಷ ಶಿಕ್ಷಕರ ಶಿಕ್ಷಣಕ್ಕಾಗಿ ತರಬೇತಿ ಕೇಂದ್ರ ಪ್ರಾರಂಭ.
* ಪಿ.ಹೆಚ್.ಡಿ. ಮಾಡುತ್ತಿರುವ ಹಾಗೂ ವಿದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಕೈಗೊಳ್ಳುವ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು 1 ಕೋಟಿ ರೂ. ಅನುದಾನ.
* ವಿವಿಧ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ಲೈಂಗಿಕ ಕಾರ್ಯಕರ್ತೆಯರ ಜೀವನಕ್ಕೆ ಭದ್ರತೆ ಒದಗಿಸುವ ಕಾರ್ಯಕ್ರಮ ಜಾರಿ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications