ರಾಜ್ಯ ಬಜೆಟ್: ನೀರಾವರಿಗೆ ಹೆಚ್ಚಿನ ಆದ್ಯತೆ, ಕೆರೆ ತುಂಬಿಸಲು ಒತ್ತು
ಬೆಂಗಳೂರು, ಫೆಬ್ರವರಿ 16: ಕರ್ನಾಟಕ ಬಜೆಟ್ 2018 ರಲ್ಲಿ ನೀರಾವರಿಗೆ ಭಾರಿ ಒತ್ತು ನೀಡಲಾಗಿದೆ. ಕೃಷಿಯ ನಂತರ ಅತಿ ಹೆಚ್ಚಿನ ಆದ್ಯತೆಯನ್ನು ನೀರಾವರಿಗೆ ನೀಡಲಾಗಿದ್ದು ಹಲವು ಈಗಾಗಲೇ ಚಾಲ್ತಿಯಲ್ಲಿರುವ ಯೋಜೆನೆಗಳಿಗೆ ಅನುದಾನ ಹೆಚ್ಚಳದ ಜೊತೆಗೆ ಹಲವು ಹೊಸ ಯೋಜನೆಗಳನ್ನು ಬಜೆಟ್ನಲ್ಲಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
* ಸ್ಥಗಿತಗೊಂಡಿರುವ ಎಲ್ಲಾ ಏತ ನಿರಾವರಿ ಯೋಜನೆಗಳನ್ನು 100 ಕೋಟಿ ಹೆಚ್ಚುವರಿ ಅನುದಾನದ ಮೂಲಕ ಪುನಶ್ಚೇತನಗೊಳಿಸಲಾಗುತ್ತದೆ.
* ಸಣ್ಣ ನೀರಾವರಿ ಯೋಜನೆಗೆ 2014 ಕೋಟಿ ಅನುದಾನ ನೀಡಲಾಗಿದೆ. ಕೆರೆಗಳನ್ನು ಭರ್ತಿ ಮಾಡಲು 2276 ಕೋಟಿ ರೂ. ಹಣ ಮೀಸಲಿಡಲಾಗುತ್ತದೆ.

* ಎತ್ತಿನಹೊಳೆ ಯೋಜನೆಯಡಿ 527 ಕೆರೆಗಳನ್ನು ತುಂಬಿಸಲಾಗುತ್ತದೆ.
* ರಾಜ್ಯದ 43 ತಾಲ್ಲೂಕುಗಳಲ್ಲಿ ಅಂತರ್ಜಲ ಅಭಿವೃದ್ಧಿಗೆ ಚೆಕ್ ಡ್ಯಾಮ್, ರೀಚಾರ್ಜರ್ಗಳ ನಿರ್ಮಾಣಕ್ಕೆ 50 ಕೋಟಿ ಮೀಸಲಿಡಲಾಗಿದೆ.
* ಹೊಸಕೋಟೆ ತಾಲ್ಲೂಕಿನ ಕೆರೆಗಳ ಅಭಿವೃದ್ಧಿಗೆ 100 ಕೋಟಿ ಹಣ ನೀಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಈಗಾಗಲೇ ಕೈಗೊಂಡಿರುವ ಕಾಮಗಾರಿಗೆ ಹೆಚ್ಚಿನ ಬಲ ನೀಡಲಾಗಿದೆ.
* ಪಶ್ಚಿಮ ವಾಹಿನಿ ಯೋಜನೆಯಡಿ ದಕ್ಷಿಣ ಕನ್ನಡದ ಅರೆಕಳ ಎಂಬಲ್ಲಿ ನೇತ್ರಾವತಿ ನದಿಗೆ ಉಪ್ಪು ನೀರು ಸೇರುವುದನ್ನು ತಪ್ಪಿಸಲು ಕಿಂಡಿ ಅಣೆಕ್ಟಟ್ಟನ್ನು 174 ಕೋಟಿ ವೆಚ್ಚದಲ್ಲಿ ನಿರ್ಮಣ ಮಾಡಲಾಗುತ್ತದೆ ಸ್ಥಗಿತಗೊಂಡಿರುವ ಎಲ್ಲಾ ಏತ ನೀರಾವರಿ ಯೋಜನೆಗಳನ್ನು ಪುನಶ್ಚೇತನಗೊಳಿಸಲಾಗುತ್ತದೆ.
* 482 ಕೋಟಿ ವೆಚ್ಚದಡಿ ಬೀದರ್ನ ಕಾರಂಜಾ ಯೋಜನೆಯ ನಾಲೆಗಳ ಅಭಿವೃದ್ಧಿ
* 79.80 ಕೋಟಿ ವೆಚ್ಚದಲ್ಲಿ ರಾಣೆಬೆನ್ನೂರು, ಬ್ಯಾಡಗಿ, ಹಿರೆಕೆರೂರು ತಾಲ್ಲೂಕಿನ 17 ಕೆರೆಗಳನ್ನು ಕುಮುದ್ವತಿ ನದಿಯಿಂದ ತುಂಬಿಸುವ ಯೋಜನೆ.
* 117 ಕೋಟಿ ವೆಚ್ಚದಲ್ಲಿ ಮುಲ್ಲಾಮಾರಿ ಕೆಳದಂಡೆ ಯೋಜನೆಯ ಬಲದಂಡೆ ಹಾಗೂ ಕಾಲುವೆ ಅಭಿವೃದ್ಧಿ
* 809.5 ಕೋಟಿ ವೆಚ್ಚದಲ್ಲಿ ಹೇಮಾವತಿ ಎಡದಂಡೆ ನಾಲೆ ಅಭಿವೃದ್ಧಿ
* 238 ಕೋಟಿ ವೆಚ್ಚದಲ್ಲಿ ಬದಾಮಿ ತಾಲ್ಲೂಕಿನ ಬಿಳಗಿ ಕ್ಷೇತ್ರದ 1600 ಎಕರೆ ಪ್ರದೇಶಕ್ಕೆ ನೀರಾವರಿ ಒದಗಿಸಲು ಏತನೀರಾವರಿ ಜಾರಿಗೋಳಿಸಲು ಸರ್ಕಾರ ನಿರ್ಧರಿಸಿದೆ. ಗುಳೆ ತಡೆಯುವ ನಿಟ್ಟಿನಲ್ಲಿ ಈ ಯೋಜನೆ ಕೈಗೆತ್ತಿಕೊಂಡಿದೆ.
* ಬಹು ದಿನಗಳ ಒತ್ತಾಯವಾದ ಕೃಷ್ಣಾ ಮೇಲ್ದಂಡೆ ಯೋಜನೆಯ ಎರಡನೇ ಹಂತದ ಕಾಲುವೆ ಆಧುನೀಕರಣಕ್ಕೆ ಸರ್ಕಾರ ಅಸ್ತು ಅಂದಿದೆ. ಈ ಯೋಜನೆಗೆ 750 ಕೋಟಿ ಮೀಸಲಿಡಲಾಗಿದೆ.
* ಚಿತ್ರದುರ್ಗದ ತಾಲ್ಲೂಕಿನ ಕೆರೆಗಳಿಗೆ 250 ಕೋಟಿ ವೆಚ್ಚದಲ್ಲಿ ನೀರು ತುಂಬಿಸಲು ಸರ್ಕಾರ ನಿರ್ಧರಿಸಿದೆ.
* ಜಗಳೂರಿನ 46 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು
* 100 ಕೋಟಿ ವೆಚ್ಚದಲ್ಲಿ ಕೆ.ಆರ್.ಪುರ ಸಂಸ್ಕೃಣಾ ಘಟಕದಿಂದ ಹೊಸಕೋಟೆಯ 30 ಕೆರೆಗಳಿಗೆ ನೀರು.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು










Click it and Unblock the Notifications