ಸದನದಲ್ಲಿ ಮುಂದುವರಿದ ಬಿಜೆಪಿ ಗದ್ದಲ, ಕಲಾಪ ಮುಂದೂಡಿಕೆ
ಬೆಂಗಳೂರು, ಫೆಬ್ರವರಿ 7: ಬಜೆಟ್ ಅಧಿವೇಶನದ ಎರಡನೆಯ ದಿನವೂ ಬಿಜೆಪಿ ಶಾಸಕರ ಪ್ರತಿಭಟನೆ, ಗದ್ದಲಕ್ಕೆ ಬಲಿಯಾಗಿದೆ.
ಬಿಜೆಪಿ ಶಾಸಕರು ಸದನದ ಬಾವಿಗಿಳಿದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಗದ್ದಲವನ್ನು ಕೆಲಹೊತ್ತು ವೀಕ್ಷಿಸಿದ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್, ಸದನವನ್ನು ಶುಕ್ರವಾರ ಮಧ್ಯಾಹ್ನ 12.30ಕ್ಕೆ ಮುಂದೂಡಿದರು.
ಬಜೆಟ್ ಅಧಿವೇಶನದ ಮೊದಲ ದಿನವೂ ಬಿಜೆಪಿ ಶಾಸಕರು ಗದ್ದಲ ನಡೆಸಿದ್ದರು. ವಾಡಿಕೆಯಂತೆ ನಡೆಯುವ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ್ದರು. ಇದರಿಂದ 22 ಪುಟಗಳ ಭಾಷಣದಲ್ಲಿ ಕೇವಲ 2 ಪುಟಗಳನ್ನು ಓದಿದ್ದ ರಾಜ್ಯಪಾಲರು ಭಾಷಣವನ್ನು ಮೊಟಕುಗೊಳಿಸಿ ಸದನದಿಂದ ತೆರಳಿದ್ದರು. ನಂತರವೂ ಬಿಜೆಪಿ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿತ್ತು.
ಆದರೆ, ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಶಾಸಕರು ಪುನಃ ಸದನದ ಬಾವಿಗಿಳಿದು ಪ್ರತಿಭಟನೆ ಶುರುಮಾಡಿದರು. 'ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲ' ಎಂದು ಘೋಷಣೆಗಳನ್ನು ಕೂಗಿದರು.

ಬಾವಿಯಲ್ಲಿ ನೀರಿಲ್ಲ, ಅಲ್ಲಿ ಯಾಕೆ ನಿಂತಿದ್ದೀರಿ?
ಆಗ ಸ್ಪೀಕರ್ ರಮೇಶ್ ಕುಮಾರ್, 'ಬಾವಿಯಲ್ಲಿ ನೀರಿಲ್ಲ ಎಂದು ಅಲ್ಲಿ ನಿಂತಿದ್ದೀರಾ?' ಎಂದು ಕೆಣಕಿದರು.
ಈ ನಡುವೆಯೇ ಸಚಿವ ಕೃಷ್ಣ ಬೈರೇಗೌಡ ಕಾಗದಪತ್ರಗಳ ಮಂಡಿಸಲು ಮುಂದಾದರು. 'ಬಾವಿಯಲ್ಲಿ ನೀರಿಲ್ಲ. ಇಲ್ಲಿ ಬಿದ್ದು ಒದ್ದಾಡಬೇಡಿ. ಮೊದಲು ನಿಮ್ಮ ಸೀಟುಗಳಲ್ಲಿ ಕುಳಿತುಕೊಳ್ಳಿ. ಸರ್ಕಾರಕ್ಕೆ ಬಹುಮತ ಇಲ್ಲ ಎಂದಾದರೆ ಅವಿಶ್ವಾಸ ನಿರ್ಣಯ ಮಾಡಿ' ಎಂದು ಅವರು ತರಾಟೆಗೆ ತೆಗೆದುಕೊಂಡರು.ಗದ್ದಲದ ನಡುವೆಯೇ ರಮೇಶ್ ಕುಮಾರ್ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಅವಕಾಶ ನೀಡಿದರು. ಶಾಸಕ ಎಸ್.ಟಿ. ಸೋಮಶೇಖರ್ ಚರ್ಚೆಗೆ ಮುಂದಾದರು. ಆದರೆ, ಬಿಜೆಪಿ ಶಾಸಕರ ಕೂಗಾಟ ತೀವ್ರಗೊಂಡಿತು. ಸಿಎಂ ಅಧಿಕಾರದಿಂದ ಕೆಳಕ್ಕಿಳಿಯಿರಿ ಎಂದು ಘೋಷಣೆ ಕೂಗಿದರು. ಇದರಿಂದ ಕಲಾಪವನ್ನು ಹದಿನೈದು ನಿಮಿಷ ಮುಂದೂಡಲಾಯಿತು.

ಬಹುಮತವೇ ಇಲ್ಲ: ಯಡಿಯೂರಪ್ಪ
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲ. ಈ ಕಾರಣಕ್ಕಾಗಿ ಕಲಾಪಕ್ಕೆ ಸಹಕಾರ ನೀಡುತ್ತಿಲ್ಲ. ಬಹುಮತ ಇಲ್ಲದೆಯೇ ಬಜೆಟ್ ಹೇಗೆ ಮಂಡಿಸುತ್ತಾರೆ? ಹೀಗಾಗಿ ಧರಣಿ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಬಜೆಟ್ ಓದಿದ ಬಳಿಕವೇ ಅದರ ಕಾಪಿ ನೀಡುವುದಾಗಿ ಸರ್ಕಾರ ಹೇಳಿದೆ. ಸಂಸತ್ನಲ್ಲಿ ಈ ರೀತಿಯ ಸಂಪ್ರದಾಯ ಇದೆ ಎಂದು ಹೇಳುತ್ತಿದೆ. ಮುಖ್ಯಮಂತ್ರಿ ಬಜೆಟ್ ಓದಿದ ಬಳಿಕ ಶಾಸಕರು ಮತ್ತು ಮಾಧ್ಯಮದವರಿಗೆ ಕಾಪಿ ನೀಡಲು ನಿರ್ಧರಿಸಲಾಗಿದೆ. ಈ ಸಂಪ್ರದಾಯ ನಮ್ಮಲ್ಲಿ ಇಲ್ಲ ಎಂದು ಹೇಳಿದರು.
|
ಕಲಾಪ ನಾಳೆಗೆ ಮುಂದೂಡಿಕೆ
ಇದಾದ ಬಳಿಕ ಸದನ ಮತ್ತೆ ಸೇರಿದಾಗ ಬಿಜೆಪಿ ಶಾಸಕರು ಪುನಃ ಬಾವಿಗಿಳಿದರು. ಕಲಾಪ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು. ಆಗ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದರು. ಬಿಜೆಪಿಗೆ ಧಿಕ್ಕಾರ, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿರುವ ಬಿಜೆಪಿಗೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು. ಈ ಗದ್ದಲವನ್ನು ಮೌನವಾಗಿ ವೀಕ್ಷಿಸಿದ ಸ್ಪೀಕರ್ ರಮೇಶ್ ಕುಮಾರ್, ಸದನವನ್ನು ಗುರುವಾರ ಮಧ್ಯಾಹ್ನ 12.30ಕ್ಕೆ ಮುಂದೂಡಿದರು.
|
ಪರಿಷತ್ನಲ್ಲಿಯೂ ಗದ್ದಲ
ವಿಧಾನಪರಿಷತ್ನಲ್ಲಿಯೂ ಬಿಜೆಪಿ ಸದಸ್ಯರು ಕಲಾಪಕ್ಕೆ ಅಡ್ಡಿಪಡಿಸಿದರು. ಸದನ ಆರಂಭವಾಗುತ್ತಿದ್ದಂತೆಯೇ ಕೋಟಾ ಶ್ರೀನಿವಾಸ ಪೂಜಾರಿ ರಾಜ್ಯಪಾಲರ ಭಾಷಣದಲ್ಲಿ ಸಂಪೂರ್ಣ ಸುಳ್ಳು ಹೇಳಿಸಲಾಗಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇದೆಯೋ ಇಲ್ಲವೋ. ಶಾಸಕರೇ ಸರಿಯಾಗಿ ಸದನಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದರು. ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಇದಕ್ಕೆ ಆಡಳಿತ ಪಕ್ಷದ ಆಕ್ಷೇಪ ವ್ಯಕ್ತಪಡಿಸಿದರು. ಗದ್ದಲ ಹೆಚ್ಚಿದ್ದರಿಂದ ಮಧ್ಯಾಹ್ನ 12 ಗಂಟೆಗೆ ಕಲಾಪ ಮುಂದೂಡಲಾಯಿತು. ಆಗಲೂ ಬಿಜೆಪಿ ಸದಸ್ಯರು ಪ್ರತಿಭಟನೆ ಆರಂಭಿಸಿದಾಗ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಪುನಃ ಮುಂದೂಡಲಾಯಿತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications