ಉಚಿತ ಡಯಾಲಿಸಿಸ್, ಮಕ್ಕಳಿಗೆ ವಿದ್ಯಾಭ್ಯಾಸ: ಬಡವರಿಗೆ ಸುಗ್ಗಿ ತಂದ BSY
ಬೆಂಗಳೂರು, ಮಾರ್ಚ್ 5: 2020 - 21 ಸಾಲಿನ ರಾಜ್ಯ ಬಜೆಟ್ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಬಿ ಎಸ್ ಯಡಿಯೂರಪ್ಪ ಬೆಳಗ್ಗೆ 11 ಗಂಟೆಗೆ ಮಂಡಿಸಿದರು. ಹಸಿರು ಶಾಲು ಹಾಕಿಕೊಂಡು, 1 ಗಂಟೆ 40 ನಿಮಿಷಗಳ ಕಾಲ ಬಜೆಟ್ ಓದಿದ ಯಡಿಯೂರಪ್ಪ ಆರ್ಥಿಕವಾಗಿ ಹಿಂದುಳಿದವರಿಗೆ ಹಲವು ಯೋಜನೆಗಳನ್ನು ಘೋಷಿಸಿದರು.
ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಸಹಾಯ, ಕಟ್ಟಡ ಕಾರ್ಮಿಕ ಕುಟುಂಬದ ಚಿಕಿತ್ಸೆಗೆ ಸಹಾಯ ಹಸ್ತ, ಗಾರ್ಮೆಂಟ್ ಉದ್ಯಮದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಹೀಗೆ ಹಲವು ಜನಪರ ಕಾರ್ಯಕ್ರಮಗಳನ್ನು ಬಡವರ ಬಂಧು ಯಡಿಯೂರಪ್ಪ ಮಂಡಿಸಿದರು. ಅಂದಹಾಗೆ, ಆ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ
* ಒಂದು ಲಕ್ಷ ನೋಂದಾಯಿತ ಕಟ್ಟದ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ 'ಮುಖ್ಯಮಂತ್ರಿಗಳ ಆರೋಗ್ಯ ಸುರಕ್ಷಾ' ಯೋಜನೆಯಡಿಯಲ್ಲಿ ಅನುಮೋದಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನುವಾಗುವಂತೆ 'ಉಚಿತ ಪ್ರೀಪೇಯ್ಡ್ ಹೆಲ್ತ್ ಕಾರ್ಡ್'ಗಳ ವಿತರಣೆ
* ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರತಿ ವರ್ಷ ಪ್ರತಿ ಕುಟುಂಬಕ್ಕೆ 2000 ರೂಪಾಯಿ ನೆರವು. ಇದಕ್ಕೆ 40 ಕೋಟಿ ರೂಪಾಯಿ ಅನುದಾನ.

ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್
* 'ವನಿತಾ ಸಂಗಾತಿ' ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂಪಾಯಿ ಅನುದಾನ.
* ನಗರ ಪ್ರದೇಶಗಳಲ್ಲಿ ದುಡಿಯುತ್ತಿರುವ ಕಟ್ಟದ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರಿಗೆ ಆರೋಗ್ಯ ರಕ್ಷಣೆ ನೀಡುವ ದೃಷ್ಟಿಯಿಂದ 10 'ಮೊಬೈಲ್ ಕ್ಲಿನಿಕ್'ಗಳನ್ನು ಪ್ರಾರಂಭಿಸಲಾಗುವುದು.

ಬಡ ರೋಗಿಗಳಿಗೆ ಉಚಿತ ಡಯಾಲಿಸಿಸ್
* ರಾಜ್ಯಾದ್ಯಂತ ಕಟ್ಟದ ಕಾರ್ಮಿಕರ ಆರು ವರ್ಷದೊಳಗಿನ ಮಕ್ಕಳ ಪಾಲನೆ ಪೋಷಣೆ ಮಾಡಲು ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ 10 ಸಂಚಾರಿ ಶಿಶುಪಾಲನಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 110 'ಕಿತ್ತೂರು ರಾಣಿ ಚೆನ್ನಮ್ಮ' ಶಿಶುಪಾಲನಾ ಕೇಂದ್ರಗಳ ಸ್ಥಾಪನೆ.
* ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಬಡ ರೋಗಿಗಳಿಗೆ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ.

ಹೃದಯ ರೋಗದ ಚಿಕಿತ್ಸೆಗೆ ಸಹಾಯ
* ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇತರೆ ಐದು ಆಸ್ಪತ್ರೆಗಳ ತುರ್ತು ವೈದ್ಯಕೀಯ ಚಿಕಿತ್ಸಾ ವಿಭಾಗಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಿ ಉತ್ಕೃಷ್ಟ ಕೇಂದ್ರಗಳನ್ನಾಗಿ (Centre of Excellence) ಅಭಿವೃದ್ಧಿಪಡಿಸಲು ಐದು ಕೋಟಿ ರೂ. ಅನುದಾನ.
* ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಸಿ.ವಿ. ರಾಮನ್ ಆಸ್ಪತ್ರೆಗಳಲ್ಲಿ ಹೃದಯ ರೋಗದ ಚಿಕಿತ್ಸೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಕ್ಯಾತ್ ಲ್ಯಾಬ್ ಸ್ಥಾಪನೆ.

ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್
* ರಾಜ್ಯದ 500 ಅಂಧ ವಿದ್ಯಾರ್ಥಿಗಳಿಗೆ ತಲಾ 25,000 ರೂ.ಗಳ ಮೊತ್ತದ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್ ಹಾಗೂ ವಾಕಿಂಗ್ ಸ್ಟಿಕ್ಗಳನ್ನೊಳಗೊಂಡ ಕಿಟ್ ವಿತರಣೆ. 1.25 ಕೋಟಿ ರೂ. ಅನುದಾನ.
* ಅಂಧ ತಾಯಂದಿರಿಗೆ ನೀಡುವ ಮಾಸಿಕ 2000 ರೂ. ಶಿಶುಪಾಲನಾ ಭತ್ಯೆ ಯೋಜನೆ ಮಗುವಿನ ಮೊದಲ ಎರಡು ವರ್ಷಗಳಿಂದ ಐದು ವರ್ಷದ ವರೆಗೆ ವಿಸ್ತರಣೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications