ರಾಜ್ಯ ಬಜೆಟ್ನಲ್ಲಿ ಸರ್ಕಾರಿ ನೌಕರರಿಗೆ ಸಿಕ್ಕ ಸೌಲಭ್ಯಗಳು
ಮುಖ್ಯಮಂತ್ರಿ ಯಡಿಯೂರಪ್ಪ 2020ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಸರ್ಕಾರಿ ನೌಕರರಿಗೆ ಕೆಲವು ಸೌಲಭ್ಯಗಳು ಸಿಕ್ಕಿವೆ. ಅಧಿಕಾರಿಗಳಿಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ, ಮಹಿಳಾ ವಿಶ್ರಾಂತಿ ಕೋಣೆ, 'ಪೊಲೀಸ್ ಗೃಹಭಾಗ್ಯ-2020' ಹೀಗೆ ಸರ್ಕಾರಿ ನೌಕರಿಗೆ ಕೆಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ.
* ರಾಜ್ಯ ಸರ್ಕಾರದ ಕೆಲವು ಕಚೇರಿಗಳನ್ನು ಹಂತ ಹಂತವಾಗಿ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಸ್ಥಳಾಂತರಿಸಲು ಕ್ರಮ.
ಉಚಿತ ಬಸ್ ಪಾಸ್: ಬಿ.ಎಸ್.ವೈ ಬಜೆಟ್ ನಲ್ಲಿ ಹೆಣ್ಮಕ್ಕಳಿಗೆ ಸಿಹಿ ಸಿಕ್ತು ಗುರು!
* ರಾಜ್ಯದ 22.5 ಲಕ್ಷ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ಜ್ಯೋತಿ ಸಂಜೀವಿನಿ ಯೋಜನೆ ಮಾರ್ಪಡಿಸಿ, ಶಸ್ತ್ರ ಚಿಕಿತ್ಸಾ ವಿಧಾನಗಳಿಗೆ ನಗದುರಹಿತ ಚಿಕಿತ್ಸಾ ಸೌಲಭ್ಯ. ಇದರ ಅಂದಾಜು ವಾರ್ಷಿಕ ವೆಚ್ಚ 50 ಕೋಟಿ ರೂ.
* ಸಕಾಲ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಯನ್ನು ನೀಡಲಾಗುವುದು.
* ಕರ್ನಾಟಕ ಸರ್ಕಾರವು ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ 'ಪೊಲೀಸ್ ಗೃಹಭಾಗ್ಯ-2020'ಯನ್ನು ಅನುಷ್ಠಾನಗೊಳಿಸುತ್ತದೆ. ಈ ಯೋಜನೆಯ ಕಾಮಗಾರಿಗಳನ್ನು ಮುಂದುವರೆಸಲು 200 ಕೋಟಿ ರೂಪಾಯಿಗಳನ್ನು ಒದಗಿಸಲಾಗುವುದು.
ಕರ್ನಾಟಕ ಬಜೆಟ್ 2020: ಯಾವುದು ಏರಿಕೆ? ಯಾವುದು ಇಳಿಕೆ
* ಬೆಂಗಳೂರಿನಲ್ಲಿರುವ ಆಯ್ದ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸ್ನೇಹಿ ವಾತಾವರಣವನ್ನು ನಿರ್ಮಿಸಲು ಮಕ್ಕಳ ಪಾಲನಾ ಕೇಂದ್ರಗಳು, ಸ್ಯಾನಿಟರಿ ನ್ಯಾಪ್ ಕಿನ್ ಡಿಸ್ಪೆನ್ಸರ್ ಮತ್ತು ಇತರೆ ಸೌಲಭ್ಯಗಳನ್ನು ಹೊಂದಿರುವ ಮಹಿಳಾ ವಿಶ್ರಾಂತಿ ಕೋಣೆಗಳನ್ನು 'ಬೆಂಗಳೂರು ಸ್ಮಾರ್ಟ್ ಸಿಟಿ' ಯೋಜನೆಯಡಿ ತರಲಾಗುವುದು.