ಕರ್ನಾಟಕ ಬಜೆಟ್ 2021: ಎಸ್.ಎಲ್ಭೈರಪ್ಪರ 'ಪರ್ವ' ನಾಟಕ ಪ್ರದರ್ಶನಕ್ಕೆ 1 ಕೋಟಿ ರೂ. ಮೀಸಲು
ಬೆಂಗಳೂರು, ಮಾರ್ಚ್ 09: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಮಂಡಿಸಿರುವ 2021-22ನೇ ಸಾಲಿನ ಬಜೆಟ್ನಲ್ಲಿ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ಕಾದಂಬರಿ ಆಧಾರಿತ ಪರ್ವ ನಾಟಕಕ್ಕೆ 1 ಕೋಟಿ ರೂ. ಮೀಸಲಿರಿಸಿದ್ದಾರೆ.
ಬಜೆಟ್ನಲ್ಲಿ ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯಕ್ಕೆ ಯಡಿಯೂರಪ್ಪ ಒಟ್ಟು 2,645 ಕೋಟಿ ರೂ. ಅನುದಾನ ಪ್ರಕಟಿಸಿದ್ದಾರೆ. ಹಿರಿಯ ಕಾದಂಬರಿಕಾರ ಎಸ್ಎಲ್ ಭೈರಪ್ಪ ಅವರ 'ಪರ್ವ' ಕಾದಂಬರಿಯ ನಾಟಕ ಪ್ರದರ್ಶನಕ್ಕೆ ಈ ಬಾರಿಯ ಬಜೆಟ್ನಲ್ಲಿ ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.
ಮಾರ್ಚ್ ಹಾಗೂ ಏಪ್ರಿಲ್ನಲ್ಲಿ ರಂಗಾಯಣದ ಭೂಮಿಗೀತ ರಂಗಮಂದಿರದಲ್ಲಿ ವಾರಕ್ಕೆ ಮೂರು ಪ್ರದರ್ಶನದಂತೆ ನಿರಂತರವಾಗಿ 25 ಪ್ರದರ್ಶನಗಳನ್ನು ನೀಡುವ ಗುರಿ ಇದೆ ಎನ್ನುವ ವಿಷಯ ತಿಳಿದುಬಂದಿದೆ. ಪರ್ವ ನಾಟಕವನ್ನು ರಾಜ್ಯದಲ್ಲಿರುವ ರಂಗಾಯಣ ನಾಟಕ ತಂಡಗಳ ಮೂಲಕ ರಾಜ್ಯದೆಲ್ಲೆಡೆ ಪ್ರದರ್ಶನ ಮಾಡಲಾಗುವುದು ಎಂದು ಬಿಎಸ್ವೈ ತಿಳಿಸಿದ್ದಾರೆ.

ಪ್ರಸಿದ್ಧ ರಂಗಕರ್ಮಿ ಬಿವಿ ಕಾರಂತರ ಕನಸಿನ ಕೂಸಾದ ಮೈಸೂರಿನ ರಂಗಾಯಣ ಮೂಲಕ ಮಾ.12,13, 14 ರಂದು ಪರ್ವ ನಾಟಕ ಹಬ್ಬ ಪ್ರಥಮ ಪ್ರದರ್ಶನ ನಡೆಯಲಿದೆ. ಮಹಾಭಾರತ ಆಧರಿತ ಪರ್ವ ಕಾದಂಬರಿಯನ್ನು ರಂಗನಿರ್ದೇಶಕ ಪ್ರಕಾಶ್ ಬೆಳವಾಡಿ ಏಳೂವರೆ ಗಂಟೆಗಳ ನಾಟಕವಾಗಿಸಿದ್ದಾರೆ.
ಕುವೆಂಪು ವಿರಚಿತ ಮಲೆಗಳಲ್ಲಿ ಮದುಮಗಳು ಕಾದಂಬರಿ ಆಧರಿಸಿ ಮೈಸೂರಿನ ರಂಗಾಯಣವು ವಿಶೇಷ ನಾಟಕ ಪ್ರದರ್ಶನ ವರ್ಷಗಳ ಕಾಲ ವಿಶೇಷ ನಾಟಕ ಪ್ರದರ್ಶನ ಆಯೋಜಿಸಿತ್ತು.
ಬೆಂಗಳೂರಿನ ಕಲಾಗ್ರಾಮದಲ್ಲಿ ಮಲೆಗಳಲ್ಲಿ ಮದುಮಗಳು ಕಾದಂಬರಿಗೆ ಸೂಕ್ತವಾದಂತೆ ಮಲೆನಾಡಿನ ಭಿನ್ನ, ವಿಭಿನ್ನ ವೇದಿಕೆಗಳನ್ನು ನಿರ್ಮಿಸಿ ಅದ್ಭುತ ನಾಟಕ ಪ್ರದರ್ಶನಗಳನ್ನು ಮಾಡಲಾಗಿತ್ತು. ಇದಕ್ಕೆ ಬೆಂಗಳೂರು ಸೇರಿದಂತೆ ಇತರೆ ಪ್ರದೇಶಗಳಿಂದ ಉತ್ತಮ ಸ್ಪಂದನೆ ದೊರೆತಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications