ಕರ್ನಾಟಕ ಬಜೆಟ್ 2022: ಯಾವ ಇಲಾಖೆಗೆ ಎಷ್ಟು ಅನುದಾನ, ಇಲ್ಲಿದೆ ವಿವರ
ಬೆಂಗಳೂರು, ಮಾರ್ಚ್ 04: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-2023ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಎಲ್ಲಾ ಇಲಾಖೆಗಳಿಗೆ ಅನುದಾನವನ್ನು ಘೋಷಣೆ ಮಾಡಿದ್ದಾರೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳವಾಗಿದೆ.
ಈ ಬಾರಿ 2,53,165 ಕೋಟಿ ರೂ. ಬಜೆಟ್ ಮಂಡನೆ ಆಗಿದ್ದು, ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರವನ್ನು ಹೊಂದಿದೆ. ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ - ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮವನ್ನು ರೂಪಿಸಲಾಗಿದೆ.
ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಜೆಟ್ನಲ್ಲಿ ಯಾವ ವಲಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ ಎಂಬ ಬಗ್ಗೆ ಇಲ್ಲಿ ವಿವರ ಇದೆ. ಮುಂದೆ ಓದಿ....

ಯಾವ ಇಲಾಖೆಗೆ ಎಷ್ಟು ಮೊತ್ತ ಹಂಚಿಕೆ?
* ಶಿಕ್ಷಣ ಇಲಾಖೆ - 31,980 ಕೋಟಿ ರೂಪಾಯಿ ಅನುದಾನ
* ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ - 17,325 ಕೋಟಿ ರೂಪಾಯಿ
* ಕಂದಾಯ ಇಲಾಖೆ - 16,388 ಕೋಟಿ ರೂಪಾಯಿ ಅನುದಾನ
* ಇಂಧನ ಇಲಾಖೆ - 12,655 ಕೋಟಿ ರೂಪಾಯಿ ಅನುದಾನ
* ವಸತಿ ಇಲಾಖೆ - 3,594 ಕೋಟಿ ರೂಪಾಯಿ ಅನುದಾನ
* ಕೃಷಿ ಮತ್ತು ತೋಟಗಾರಿಕೆ ಇಲಾಖೆ - 8,457 ಕೋಟಿ ರೂ ಅನುದಾನ,
* ಲೋಕೋಪಯೋಗಿ ಇಲಾಖೆ - 10,447 ಕೋಟಿ ರೂ ಅನುದಾನ
* ಜಲ ಸಂಪನ್ಮೂಲ ಇಲಾಖೆ - 20,601 ಕೋಟಿ ರೂ ಅನುದಾನ
* ನಗರಾಭಿವೃದ್ಧಿ ಇಲಾಖೆ - 16,076 ಕೋಟಿ ರೂಪಾಯಿ ಅನುದಾನ
* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ - 13,982 ಕೋಟಿ ರೂಪಾಯಿ ಅನುದಾನ
* ಆಹಾರ ಇಲಾಖೆ - 2,288 ಕೋಟಿ ರೂಪಾಯಿ ಅನುದಾನ
* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ - 4,713 ಕೋಟಿ ಅನುದಾನ
* ಸಮಾಜ ಕಲ್ಯಾಣ ಇಲಾಖೆ - 9,389 ಕೋಟಿ ರೂ ಅನುದಾನ
* ಒಳಾಡಳಿತ ಮತ್ತು ಸಾರಿಗೆ ಇಲಾಖೆ - 11,222 ಕೋಟಿ ರೂ ಅನುದಾನ
ಇನ್ನುಳಿದಂತೆ ರಾಜ್ಯಗಳ ಕೆರೆಗಳ ಅಭಿವೃದ್ದಿಗೆ 500 ಕೋಟಿ ರೂ, ತಾಲೂಕುಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿ ಹಾಗೂ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ 8409 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications