ಕರ್ನಾಟಕ ಬಜೆಟ್ 2023: ಮೇಕೆದಾಟು ಇದೊಂದು ಕೆಟ್ಟ ಯೋಜನೆ; ನಟ ಚೇತನ್ ಪೋಸ್ಟ್
ಬೆಂಗಳೂರು, ಜುಲೈ 08: ಕರ್ನಾಟಕ ಸರ್ಕಾರದ ಉದ್ದೇಶಿದ ಮೇಕೆದಾಟು ಯೋಜನೆಗೆ ಕುರಿತು ಪರ ವಿರೋಧ ಚರ್ಚೆಯ ನಡುವೆ ನಟ ಚೇತನ್ ಅಹಿಂಸಾ ವಿರೋಧ ವ್ಯಕ್ತಪಡಿಸಿದ್ದು, ಇದೊಂದು ಕೆಟ್ಟ ಯೋಜನೆ ಎಂದು ಟೀಕಿಸಿದ್ದಾರೆ.
ಈ ಕುರಿತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನಟ ಚೇತನ್, ಮೇಕೆದಾಟು ಯೋಜನೆಗೆ ಅನುಮತಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಇದೊಂದು ಕೆಟ್ಟ ಯೋಜನೆ.. ವಿಪರ್ಯಾಸವೆಂದರೆ, 'ಪರಿಸರ' ಮತ್ತು 'ಪ್ರವಾಹ ನಿರ್ವಹಣೆಯೇ ನಮ್ಮ ಸರ್ಕಾರವು ಜಯಿಸಲು ಪ್ರಯತ್ನಿಸುತ್ತಿರುವ ಮುಖ್ಯ ಸವಾಲುಗಳು (ಬ್ರಾಂಡ್ ಬೆಂಗಳೂರು).. ಮೇಕೆದಾಟು ಅಣೆಕಟ್ಟು ಪರಿಸರವನ್ನು ನಾಶಪಡಿಸುತ್ತದೆ. ಬೆಂಗಳೂರಿನ ಬಳಿಯ ಹಳ್ಳಿಗಳಲ್ಲಿ ಇದರಿಂದ ಪ್ರವಾಹ ಸಂಭವಿಸುತ್ತದೆ' ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನೂ ಮೇಕೆದಾಟು ಯೋಜನೆ ವಿಚಾರವಾಗಿ ಹಲವ ಪರ ವಿರೋಧ ಚರ್ಚೆಯಾಗಿದ್ದು, ಕರ್ನಾಟಕದ ಕುಡಿಯುವ ನೀರಿನ ಕೊರತೆ ನೀಗಿಸುವ ಉದ್ದೇಶದಿಂದ ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ದಶಕಗಳಿಂದ ಹರಸಾಹಸ ಪಡುತ್ತಿದ್ದು, ಈ ಮೇಕೆದಾಟು ಯೋಜನೆಯಿಂದ ಬೆಂಗಳೂರು ಭಾಗದ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಕುಡಿಯುವ ನೀರಿನ ಕಲ್ಪಿಸಲು ಅನುಕೂಲ ಆಗಲಿದೆ.
ಇತ್ತ ಮೇಕೆದಾಟು ಯೋಜನೆಗೆ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿವೆ. ಈ ಯೋಜನೆ ಜಾರಿಗೆ ಕುರಿತು ರಾಜ್ಯದ ಉಪಮುಖ್ಯಮಂತ್ರಿ ಡಿಕೆಶಿ ಶಿವಕುಮಾರ್ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಈ ಹಿಂದೆ ಸಂಗಮದಿಂದ ಬೆಂಗಳೂರಿನ ವರೆಗೂ ನೀರಿಗಾಗಿ ನಡಿಗೆ ಎಂದು ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನ ನಡೆಸಿದ್ದು, ಯೋಜನೆಯನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ.
ಇನ್ನೂ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ ಸಿದ್ದರಾಮಯ್ಯ ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪ ಮಾಡಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಯಾಗುತ್ತಿದೆ. ಬಜೆಟ್ ನಲ್ಲಿ ಮೇಕೆದಾಟು ಬಗ್ಗೆ ಪ್ರಸ್ತಾಪದ ಕುರಿತು ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ವಿರೋಧ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಹಗ್ಗಾಜಗ್ಗಾಟ ನಡೆದಿದ್ದು, ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಿವ ಯೋಜನೆಯಾಗಿದ್ದರಿಂದ ತಮಿಳುನಾಡಿಗೆ ತೊಂದರೆಯಾಗುವುದಿಲ್ಲ. ಹೆಚ್ಚುವರಿ ನೀರು ಸಮುದ್ರಕ್ಕೆ ಸೇರುವ ಬದಲು ಸದ್ಭಳಕೆ ಮಾಡಿಕೊಳ್ಳಲಾಗುವುದು ಎಂಬು ಕರ್ನಾಟಕದ ವಾದವಾಗಿದೆ. ಇತ್ತ ಕರ್ನಾಟಕದ ವಾದಕ್ಕೆ ತಮಿಳುನಾಡು ಒಪ್ಪುತ್ತಿಲ್ಲ. ಹೀಗಿದ್ದರೂ ಶೀಘ್ರದಲ್ಲೇ ಭೂಸ್ವಾಧೀನ ಪ್ರಕ್ರಿಯೆಗಳನ್ನು ಜರುಗಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು ಸಿಎಂ ಸಿದ್ಧರಾಮಯ್ಯ ಬಜೆಟ್ನಲ್ಲಿ ಹೇಳಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications