Karnataka Budget 2024: ಬಜೆಟ್ನಲ್ಲಿ ಹೋಟೆಲ್ ವ್ಯಾಪಾರಿಗಳಿಗೆ ಭರ್ಜರಿ ಕೊಡುಗೆ
ಬೆಂಗಳೂರು ಫೆಬ್ರವರಿ 16: ಸಿಎಂ ಸಿದ್ದರಾಮಯ್ಯ ಇಂದು 15ನೇಯ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ನಲ್ಲಿ ಹೋಟೆಲ್ ವ್ಯಾಪಾರಿಗಳಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.
ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ವ್ಯಾಪಾರ ನಡೆಸುತ್ತಿರುವ ಹೋಟೆಲ್ ವ್ಯಾಪರಿಗಳಿಗೆ ಈ ಬಾರಿಯ ಬಜೆಟ್ನಲ್ಲಿ ಸಿಎಂ ಗುಡ್fನ್ಯೂಸ್ ಕೊಟ್ಟಿದ್ದಾರೆ. ಅದೆಂದರೆ ಇನ್ನು ಮುಂದೆ ಹೋಟೆಲ್ ಮಾಲೀಕರು ರಾತ್ರಿ ಒಂದು ಗಂಟೆಯವರೆಗೆ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿದೆ.

ಹೀಗಾಗಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಹೋಟೆಲ್ ನಡೆಸುವ ವ್ಯಾಪಾರಿಗಳು ಈ ಸಮಯದ ಸದುಪಯೋಗ ಮಾಡಿಕೊಳ್ಳಬಹುದಾಗಿದೆ. ಲೋಕಸಭಾ ಚುನಾವಣೆ ವರ್ಷದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ಬಗ್ಗೆ ರಾಜ್ಯದ ಜನ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಬಜೆಟ್ನಲ್ಲಿ ಬೆಂಗಳೂರಿಗೆ ಅನೇಕ ಕೊಡುಗೆಗಳನ್ನು ನೀಡಲಾಗಿದೆ.
ಬೆಂಗಳೂರು ಸುತ್ತ ಸ್ಯಾಟಲೈಟ್ ಟೌನ್ಗಳು
ಬೆಂಗಳೂರು ಸುತ್ತಮುತ್ತಲಿನ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿ ಪಟ್ಟಣಗಳನ್ನು ಸ್ಯಾಟಲೈಟ್ ಟೌನ್ಶಿಪ್ಗಳಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಸಿದ್ದರಾಮಯ್ಯ ಹೇಳಿದರು.

ಜೊತೆಗೆ ಬಹುನಿರೀಕ್ಷೆಯ ಪ್ರಸಕ್ತ ಸಾಲಿನ ಕರ್ನಾಟಕ ಬಜೆಟ್ ನಲ್ಲಿ ಬೆಂಗಳೂರಿನಲ್ಲಿ ನಾಲ್ಕು ಕಾರಿಡಾರ್ನಲ್ಲಿ ನಿರ್ಮಾಣವಾಗುತ್ತಿರುವ ಉಪನಗರ ರೈಲು ಯೋಜನೆಗೆ ಚುರುಕುಗೊಳಿಸಲು ಕ್ರಮವಹಿಸಲಾಗಿದೆ. ಚಿಕ್ಕಬಾಣಾವರ-ಬೈಯಪ್ಪನಹಳ್ಳಿವರೆಗಿನ ಕಾರಿಡಾರ್ ಎರಡರ ತ್ವರಿತ ಕಾರ್ಯಾಚರಣೆಗೊಳಿಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್
ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ











Click it and Unblock the Notifications