Karnataka Budget 2024: ಪ್ರವಾಸೋದ್ಯಮಕ್ಕೆ ಬಜೆಟ್ನಲ್ಲಿ ಬಂಪರ್ ಕೊಡುಗೆ- ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ!
ಬೆಂಗಳೂರು ಫೆಬ್ರವರಿ 16: ಪ್ರವಾಸೋದ್ಯಮಕ್ಕೆ ಬಜೆಟ್ನಲ್ಲಿ ಕರ್ನಾಟಕ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಅಂಜನಾದ್ರಿ ಬೆಟ್ಟದಲ್ಲಿನ ಸುತ್ತಮುತ್ತಲಿನ ಪ್ರದೇಶ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ನೀಡಿದೆ.
ಜೊತೆಗೆ ರಾಜ್ಯದ ಪ್ರವಾಸಿ ತಾಣಗಳಲ್ಲಿ 10 ಕೇಬಲ್ ಕಾರ್ ರೋಪ್ ವೇ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಹಲವು ಇಂಟ್ರಪ್ರೇಷನ್ ಸೆಂಟರ್ ತೆರೆಯಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು 2024-2025ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದಲ್ಲಿ ಪ್ರವಾಸೋದ್ಯಮಕ್ಕೆ ಬಂಪರ್ ಕೊಡುಗೆ ನೀಡಿರುವ ಬಗ್ಗೆ ಪ್ರಸ್ತಾಪಿಸಿದರು. ಕೊಪ್ಪಳ ಜಿಲ್ಲೆಯ ಆಂಜನಾದ್ರಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವವನ್ನು ಹೊಂದಿದ್ದು ಇದರ ಅಭಿವೃದ್ಧಿಗೆ 100 ಕೋಟಿ ಅನುದಾನವನ್ನು ನೀಡಲಾಗುವುದು ಎಂದು ಹೇಳಿದರು.
ರಾಜ್ಯದ ಪ್ರವಾಸೋದ್ಯಮ ಸಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಹೆಚ್ಚಿನ ಪ್ರವಾಸಿಗರು ಮತ್ತು ಹೋಡಿಕೆದಾರರನ್ನು ಆಕರ್ಷಿಸಲು ಪ್ರವಾಸೋದ್ಯಮ ನೀತಿಯನ್ನು 2024-2029ಕ್ಕೆ ಪರಿಷ್ಕರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಸಿದರು.

ಮದ್ಯಪ್ರಿಯರಿಗೆ ಬಿಕ್ ಶಾಕ್:
ಸಿಎಂ ಸಿದ್ದರಾಮಯ್ಯ 15ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿರುವರು. ಒಟ್ಟು 3,71, 383 ಕೋಟಿ ರೂ. ಮೊತ್ತದ ಬಜೆಟ್ ಇದಾಗಿದೆ. ಬಜೆಟ್ ಮಂಡನೆ ವೇಳೆ ಮದ್ಯದ ದರ ಮತ್ತೆ ಹೆಚ್ಚಿಸಲು ನಿರ್ಧಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹೌದು.. ಬಿಯರ್ ಸೇರಿದಂತೆ ಎಲ್ಲಾ ಬ್ರ್ಯಾಂಡ್ಗಳ ಬೆಲೆಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಬಿಗ್ ಶಾಕ್ ಕೊಟ್ಟಿದೆ. ನೆರೆ ರಾಜ್ಯಗಳ ಮದ್ಯದ ಬೆಲೆ ಅನುಗುಣವಾಗಿ ಪರಿಷ್ಕರಣೆ ಮಾಡಲು ಯೋಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮದ್ಯದ ಘೋಷಿತ ಸ್ಲಾಬ್ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದರು. 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications